Lok Sabha Election: ಏಪ್ರಿಲ್ 14ರಂದು ಪ್ರಧಾನಿ ಮಂಗಳೂರಿಗೆ… ಸಮಾವೇಶದ ಬದಲು ರೋಡ್ ಶೋ…
Team Udayavani, Apr 10, 2024, 3:27 PM IST
ಮಂಗಳೂರು: ಏಪ್ರಿಲ್ 14 ರಂದು ನಗರದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಯೋಜಿತ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ ಎಂದು ಪಕ್ಷ ಹೇಳಿಕೊಂಡಿದೆ. ಈ ಕುರಿತು ಹೇಳಿಕೆ ನೀಡಿದ ಬಿಜೆಪಿ ಏಪ್ರಿಲ್ 14 ರಂದು ನಿಗದಿಪಡಿಸಲಾಗಿದ್ದ ಸಾರ್ವಜನಿಕ ಸಮಾವೇಶವನ್ನು ರದ್ದುಗೊಳಿಸಲಾಗಿದ್ದು ಅದರ ಬದಲಿಗೆ ಅದೇ ದಿನ ನಗರದಲ್ಲಿ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದೆಲ್ಲೆಡೆ ಸಮಾವೇಶ ಹಾಗೂ ರೋಡ್ ಶೋ ಗಳನ್ನು ನಡೆಸುತ್ತಿದ್ದು ಇದೇ ಬರುವ ಏ. 14 ರಂದು ಮಂಗಳೂರಿನಲ್ಲಿ ಪ್ರಧಾನಿ ಸಮಾವೇಶ ನಿಗದಿಯಾಗಿತ್ತು ಆದರೆ ಇದೀಗ ಸಮಾವೇಶ ರದ್ದುಗೊಳಿಸಿ ಅದರ ಬದಲಿಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಪ್ರಧಾನಿ ದೇಶಾದ್ಯಂತ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದು ಈ ನಡುವೆ ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸುವ ನಿಟ್ಟಿನಲ್ಲಿ ಮುಂಬರುವ ಎಪ್ರಿಲ್ 14 ರಂದು ಮಂಗಳೂರಿನಲ್ಲಿ ಸಮಾವೇಶ ನಡೆಸಲು ತಯಾರಿ ನಡೆಸಲಾಗಿತ್ತು ಆದರೆ ಬಿಗುವಿನ ವೇಳಾಪಟ್ಟಿ ಹಾಗೂ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಸಮಾವೇಶ ಬದಲು ರೋಡ್ ಶೋ ನಡೆಸಲು ಪಕ್ಷ ನಿರ್ಧರಿಸಿದೆ ಎಂದು ಹೇಳಲಾಗಿದ್ದು ಅದರಂತೆ ಮಂಗಳೂರಿನ ನಾರಾಯಣ ಗುರು ವೃತ್ತದಿಂದ ನವಭಾರತ ವೃತ್ತ ವರೆಗೆ ರೋಡ್ ಶೋ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Suprem court: ಸಂದೇಶ್ ಖಾಲಿಯ ಭೂ ಮಾಫಿಯ ಬಗ್ಗೆ ಸಿಬಿಐ ತನಿಖೆ: ಹೈಕೋರ್ಟ್