BJP; ಮಂಗಳೂರಿನಲ್ಲಿ ಮೋದಿ ಮಿಂಚಿನ ಓಟ: ಎಡಬಲದಲ್ಲಿ ಕೋಟ, ಚೌಟ
ಕಮಲ ಪಾಳಯದ ಜಾತ್ರೆಯ ಸಂಭ್ರಮ.. ಕೇಸರಿ ಪಡೆಗಳ ಕಲರವ
Team Udayavani, Apr 14, 2024, 8:22 PM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ಅದ್ದೂರಿ ರೋಡ್ ಶೋ ನಡೆಸಿ ಕರಾವಳಿಯ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಎರಡು ಕಿ.ಮೀ. ರೋಡ್ ಶೋ ನಲ್ಲಿ ಸಾವಿರಾರು ಜನರು ಭಾಗಿಯಾಗಿ ಪ್ರಧಾನಿ ಮೋದಿ ಅವರಿಗೆ ಜೈಕಾರ ಹಾಕಿದರು.
ಮೈಸೂರಿನಲ್ಲಿ ಅದ್ದೂರಿ ಬಿಜೆಪಿ ಮತ್ತು ಜೆಡಿಎಸ್ ಮಿತ್ರಪಕ್ಷಗಳ ಸಮಾವೇಶದಲ್ಲಿ ಭಾಗಿಯಾಗಿ ವಿಶೇಷ ವಿಮಾನವೇರಿ ಬಂದ ಪ್ರಧಾನಿ ಮೋದಿ ಅವರು ನಾರಾಯಣಗುರು ವೃತ್ತದಿಂದ ಅಲಂಕೃತ ವಿಶೇಷ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ವಾಹನದಲ್ಲಿ ಕರಾವಳಿಯ ಬಿಜೆಪಿ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಬ್ರಿಜೇಶ್ ಚೌಟ ಅವರು ನಿಂತಿದ್ದರು.
ಕೈಯಲ್ಲಿ ಹೊಳೆಯುವ ಕಮಲದ ಚಿಹ್ನೆ ಹಿಡಿದುಕೊಂಡಿದ್ದ ಮೋದಿ ಅವರು ಹಸನ್ಮುಖರಾಗಿ ಎಲ್ಲರತ್ತ ಕೈ ಬೀಸುತ್ತಾ ಸಾಗಿದರು. ರೋಡ್ ಶೋ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರಧಾನಿ ಮೋದಿ ಅವರ ಮೇಲೆ ನಿರಂತರ ಪುಷ್ಪ ವೃಷ್ಟಿ ಗೈದರು. ಮೋದಿ ಅವರು ಕೆಲವು ಬಾರಿ ಜನರತ್ತ ಹೂವಿನ ಎಸಳುಗಳನ್ನು ಎಸೆದು ಸಂಭ್ರಮ ಮೂಡಿಸಿದರು.
ಸೈನಿಕನ ಸೇವೆ
ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಬ್ರಿಜೇಶ್ ಚೌಟ ಅವರು ಮೋದಿ ಅವರತ್ತ ಬರುತ್ತಿದ್ದ ಭಾರಿ ಪ್ರಮಾಣದ ಹೂವುಗಳ ರಾಶಿಯನ್ನು ತಡೆದು ತಾನೊಬ್ಬ ಸೈನಿಕ ಎಂದು ನಿರೂಪಿಸಿದರು!.
ರೋಡ್ ಷೋ ವೇಳೆ ಕರಾವಳಿಯ ವಿಶೇಷ ವಾದ್ಯಗಳು, ಯಕ್ಷಗಾನ, ಹುಲಿ ವೇಷ, ಚಂಡೆ ಮೇಳಗಳು ವೈಭವ ಹೆಚ್ಚಿಸಿದವು. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಭಾರಿ ಸಂಖ್ಯೆಯಲ್ಲಿ ರೋಡ್ ಶೋ ಕಣ್ತುಂಬಿಸಿಕೊಂಡರು.
ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ, ವಂದೇ ಮಾತರಂ, ಜೈ ಶ್ರೀರಾಮ್, ನರೇಂದ್ರ ಮೋದಿ ಕಿ ಜೈ, ಬತ್ತೆರ್ ಬತ್ತೆರ್ ಮೋದಿ ಬತ್ತೆರ್ (ಬಂದ್ರು ಬಂದ್ರು ಮೋದಿ ಬಂದ್ರು) ಎನ್ನುವ ತುಳುವಿನಲ್ಲೂ ಘೋಷಣೆಗಳನ್ನು ಮೊಳಗಿಸಿದರು.
#WATCH | People in large numbers gathered to witness the roadshow of Prime Minister Narendra Modi in Karnataka’s Mangaluru.#LokSabhaElections2024 pic.twitter.com/hKllrzV1Sj
— ANI (@ANI) April 14, 2024
ರೋಡ್ ಶೋ ಮುಗಿದ ಕೂಡಲೇ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ