Lok Sabha Election: ನಾಮಪತ್ರ ಸಲ್ಲಿಸಿದ ರಾಹುಲ್… ಆಸ್ತಿಯಲ್ಲಿ 4 ಕೋಟಿ ಹೆಚ್ಚಳ


Team Udayavani, Apr 4, 2024, 7:30 AM IST

Lok Sabha Election: ನಾಮಪತ್ರ ಸಲ್ಲಿಸಿದ ರಾಹುಲ್… ಆಸ್ತಿಯಲ್ಲಿ 4 ಕೋಟಿ ಹೆಚ್ಚಳ

ವಯನಾಡ್‌: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ ಕೇರಳದ ವಯನಾಡ್‌ ಲೋಕಸಭೆ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ, ಅವರು 20 ಕೋಟಿ ರೂ. ಆಸ್ತಿಯನ್ನು ಘೋಷಣೆ ಮಾಡಿದ್ದು, ಐದು ವರ್ಷದಲ್ಲಿ 4 ಕೋಟಿ ರೂ. ಹೆಚ್ಚಳವಾಗಿದೆ. 2019ರಲ್ಲಿ 16 ಕೋಟಿ ರೂ. ಆಸ್ತಿ ಘೋಷಿಸಿದ್ದರು.

ನಾಮಪತ್ರ ಸಲ್ಲಿಕೆ ವೇಳೆ ಸಹೋದರಿಯೂ ಆಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ.ವೇಣುಗೋಪಾಲ್‌ ಸೇರಿ ಹಿರಿಯ ನಾಯಕರು ಈ ವೇಳೆ ಹಾಜರಿದ್ದರು.

ಬುಧವಾರ ಕಾಪ್ಟರ್‌ ಮೂಲಕ ಆಗಮಿಸಿದ ರಾಹುಲ್‌ ಗಾಂಧಿ ಅವರು, ನಾಮಪತ್ರ ಸಲ್ಲಿಕೆಗೆ ಮುನ್ನ ವಯನಾಡಿನ ಕಲ್ಪೆಟ್ಟಾದಲ್ಲಿ ರೋಡ್‌ ಶೋ ನಡೆಸಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ರೋಡ್‌ ಶೋ ಮುಕ್ತಾಯ ಸ್ಥಳದಲ್ಲಿ ಮಾತನಾಡಿದ ರಾಹುಲ್‌, ಮಾನವ-ಪ್ರಾಣಿ ಸಂಘರ್ಷ ಸೇರಿದಂತೆ ವಯನಾಡಿನ ಎಲ್ಲ ಜನರ ಎಲ್ಲ ಸಮಸ್ಯೆಗಳ ಜತೆ ನಾನಿದ್ದೇನೆ. ಕ್ಷೇತ್ರದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ದೇಶ ಮತ್ತು ವಿದೇಶದ ಗಮನಸೆಳೆಯುವಂತೆ ಮಾಡುವೆ ಎಂದು ಹೇಳಿದರು. ವಯನಾಡಿನ ಹಾಲಿ ಸಂಸದರಾಗಿರುವ ರಾಹುಲ್‌ ಗಾಂಧಿ ಅವರು 2019ರ ಚುನಾವಣೆಯಲ್ಲಿ 7,06,367 ಮತ ಪಡೆದು ಗೆಲುವು ಸಾಧಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ರಾಹುಲ್‌ ಗಾಂಧಿಗೆ ಎದುರಾಗಿ ಸಿಪಿಐನಿಂದ ಅನ್ನಿ ರಾಜಾ ಮತ್ತು ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಅವರು ಕಣದಲ್ಲಿದ್ದಾರೆ.

ರಾಗಾ ಆಸ್ತಿ 20 ಕೋಟಿ
ರಾಹುಲ್‌ ಗಾಂಧಿ ಅಂದಾಜು 20 ಕೋ. ರೂ. ಗೂ ಅಧಿಕ ಮೌಲ್ಯದ ಆಸ್ತಿ ಘೋಷಣೆ ಮಾಡಿದ್ದಾರೆ. 2019ರ ಚುನಾವಣೆ ವೇಳೆ 16 ಕೋಟಿ ರೂ. ಆಸ್ತಿ ಘೋಷಿ ಸಿದ್ದರು. ಅಂದರೆ ಕಳೆದ 5 ವರ್ಷದಲ್ಲಿ 4 ಕೋಟಿ ರೂ. ಹೆಚ್ಚಾಗಿದೆ. ರಾಹುಲ್‌ 20 ಕೋಟಿ ರೂ. ಆಸ್ತಿಯು ಅವರ ಷೇರು ಮತ್ತು ಮ್ಯೂಚುವಲ್‌ ಫ‌ಂಡ್‌ ಇತ್ಯಾದಿ ಹೂಡಿಕೆಯ ಮೌಲ್ಯವು 9.24 ಕೋಟಿ ರೂ. ಹಾಗೂ 11.15 ಕೋಟಿ ರೂ. ಸ್ಥಿರಾಸ್ತಿ ಒಳಗೊಂಡಿದೆ. 2022-23ರ ವಿತ್ತ ಸಾಲಿನಲ್ಲಿ 1.02 ಕೋ.ರೂ. ಆದಾಯ ಬಂದಿದೆ. ಕೈಯಲ್ಲಿ 55 ಸಾವಿರ ರೂ. ನಗದು ಹಾಗೂ ಬ್ಯಾಂಕ್‌ ಖಾತೆಯಲ್ಲಿ 26 ಲಕ್ಷ ರೂ. ಇದೆ. ಷೇರುಗಳಲ್ಲಿ 4.33 ಕೋಟಿ ರೂ. ಹಾಗೂ ಮ್ಯೂಚವಲ್‌ ಫ‌ಂಡ್‌ಗಳಲ್ಲಿ 3.81 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಕಮರ್ಶಿಯಲ್‌ ಬಿಲ್ಡಿಂಗ್‌, ಕೃಷಿ ಮತ್ತು ಕೃಷಿಯೇತರ ಜಮೀನು ಹೊಂದಿದ್ದಾರೆ.

ಸಿಪಿಐ ಅಭ್ಯರ್ಥಿ ಆಸ್ತಿ: ರಾಹುಲ್‌ ವಿರುದ್ಧ ಸ್ಪರ್ಧಿಸಿರುವ ಅನ್ನಿ ರಾಜಾ ಕೈಯಲ್ಲಿ 10 ಸಾವಿರ ರೂ. ನಗದು, 25 ಸಾವಿರ ರೂ. ಮೌಲ್ಯದ ಚಿನ್ನಾಭರಣ, 62 ಸಾವಿರ ಬ್ಯಾಂಕ್‌ ಠೇವಣಿ ಮತ್ತು 71 ಲಕ್ಷ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.