CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ
Team Udayavani, Apr 18, 2024, 12:37 AM IST
ಕೋಲ್ಕತಾ: ಕೇಂದ್ರದಲ್ಲಿ “ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ರದ್ದು ಮಾಡುವ ಭರವಸೆಯನ್ನು ತೃಣಮೂಲ ಕಾಂಗ್ರೆಸ್ ಬುಧವಾರ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ತಿಳಿಸಿದೆ.
“ದಿಢೀರ್ ಶಪಥ್’ ಹೆಸರಿನ ಪ್ರಣಾಳಿಕೆಯಲ್ಲಿ ಶ್ರಮಿಕ ಕಾರ್ಡ್ ಹೊಂದಿರುವ ಕಾರ್ಮಿ ಕರಿಗೆ ಪ್ರತೀ ದಿನ 400 ರೂ. ದಿನಗೂಲಿ ನೀಡುವ ವಾಗ್ಧಾನ ಮಾಡಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ 10 ಉಚಿತ ಸಿಲಿಂಡರ್ ನೀಡುವ ವಾಗ್ಧಾನ ಮಾಡಿದೆ. ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರಿಗೆ ಉಚಿತವಾಗಿ 5 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ ಎಂದು ಪಕ್ಷ ಹೇಳಿಕೊಂಡಿದೆ. ಇದಲ್ಲದೆ, ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಜಾರಿಯನ್ನೂ ಟಿಎಂಸಿ ಹೇಳಿಕೊಂಡಿದೆ.
ಮೋದಿ ಮತ್ತೆ ಬಂದರೆ ದೇಶ ಮಾರುತ್ತಾರೆ: ಅಸ್ಸಾಂ ನಲ್ಲಿ ನಡೆದ ಚುನಾವಣೆ ರ್ಯಾಲಿಯಲ್ಲಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಮತ್ತೆ ಆಯ್ಕೆಯಾದರೆ ದೇಶದಲ್ಲಿ ಪ್ರಜಾಪ್ರಭುತ್ವ ಇರುವುದೇ ಇಲ್ಲ, ಯಾವ ಚುನಾವಣೆಗಳೂ ನಡೆಯುವುದಿಲ್ಲ. ಮುಂದೆ ದೇಶವನ್ನು ಮಾರಿಯೇ ಬಿಡುತ್ತಾರೆ ಎಂದಿದ್ದಾರೆ.
ಭರವಸೆಗಳೇನು ?
ಸಿಎಎ ಕಾಯ್ದೆ ವಾಪಸಾತಿ, ಎನ್ಆರ್ಸಿ ರದ್ದು ಮತ್ತು ಯುಸಿಸಿ ಜಾರಿಗೆ ನಿರ್ಬಂಧ
ಶ್ರಮಿಕ ಕಾರ್ಡ್ ಹೊಂದಿರುವ ಕಾರ್ಮಿ ಕರಿಗೆ ದಿನಕ್ಕೆ 400 ರೂ.ಗಳ ದಿನಗೂಲಿ ಇರುವ 100 ದಿನಗಳ ಉದ್ಯೋಗ ಖಾತರಿ, ವೇತನ ಹೆಚ್ಚಳದ ಭರವಸೆ
ಎಲ್ಲ ಬಡ ಕುಟುಂಬಗಳಿಗೆ ಉಚಿತ ವಸತಿ ಸೌಲಭ್ಯ ಒದಗಿಸುವ ಜತೆಗೆ ಗೌರವಯುತ ಹಾಗೂ ಸುರಕ್ಷಿತ ನಿವಾಸಗಳನ್ನು ನಿರ್ಮಿಸಿಕೊಡುವ ಭರವಸೆ
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ವರ್ಷಕ್ಕೆ 10 ಉಚಿತ ಎಲ್ಪಿಜಿ ಸಿಲಿಂಡರ್
ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರಿಗೂ ಮನೆ ಬಾಗಿಲಿಗೆ ಉಚಿತ ಪಡಿತರ, ಪ್ರತೀ ತಿಂಗಳು ಉಚಿತವಾಗಿ 5 ಕೆ.ಜಿ. ಅಕ್ಕಿ ವಿತರಣೆ
ಪ್ರಸಕ್ತವಿರುವ ಮಾಸಿಕ ವೃದ್ಧಾಪ್ಯ ವೇತನದಲ್ಲಿ 1,000 ರೂ. ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್ ನಕಾರ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ