BJP; ಈಶ್ವರಪ್ಪ ಮನವೊಲಿಸೋ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ
ಶೆಟ್ಟರ್ ಗೆ ಇನ್ನೆರಡು ದಿನದಲ್ಲಿ ಟಿಕೆಟ್ ಫೈನಲ್ ಆಗಬಹುದು
Team Udayavani, Mar 22, 2024, 2:38 PM IST
ಹುಬ್ಬಳ್ಳಿ: ಬಿಜೆಪಿಯಿಂದ ಬಂಡಾಯ ಎದ್ದಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಸಮಾಧಾನ ಮಾಡಲು ನಮ್ಮ ನಾಯಕರು ಯಶಸ್ವಿ ಯಾಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಮನವೊಲಿಸೋ ವಿಶ್ವಾಸ ಇದೆ. ಸಂಬಂಧ ಬಹಳ ಮುಖ್ಯ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಅನ್ನೋದು ಅವರ ಬಯಕೆ ಇದೆ. ಹೀಗಾಗಿ ಈಶ್ವರಪ್ಪ ಮನವೊಲಿಕೆಗೆ ನಮ್ಮ ಹೈಕಮಾಂಡ್ ಯಶಸ್ವಿ ಯಾಗತ್ತೆ. ಕರಡಿ ಸಂಗಣ್ಣ, ಪ್ರತಾಪ್ ಸಿಂಹ, ಸದಾನಂದಗೌಡ ಜೊತೆ ಮಾತುಕತೆ ಮಾಡಲಾಗುತ್ತಿದೆ. ಇವರೆಲ್ಲ ಪಕ್ಷ ಕಟ್ಟಿದವರು, ಹೀಗಾಗಿ ನಮ್ಮ ಜತೆಯಲ್ಲಿ ಇರುತ್ತಾರೆ. ಚುನಾವಣೆ ಸಂದರ್ಭದಲ್ಲಿ ನೋವಾಗೋದು ಸಹಜ ಎಂದರು.
ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ನಾಟಕದ ಒಂದು ಭಾಗ. ಮತಗಳಿಗಾಗಿ ಪಾದಯಾತ್ರೆ ಮಾಡಿದ್ದರು. ಇವರಿಗೆ ಯೋಜನೆ ಬಗ್ಗೆ ಕಾಳಜಿ ಇಲ್ಲ,ಆ ಭಾಗದ ಜನರಿಗೆ ಮೂಗಿಗೆ ತುಪ್ಪ ಹಚ್ಚಿದ್ದಾರೆ.ಕೋರ್ಟ್ ನಲ್ಲಿ ಇದೆ ಅಂದರು, ಸಿದ್ದರಾಮಯ್ಯ ಇಲ್ಲ ಅಂದರು. ಕಾಂಗ್ರೆಸ್ ಗೆ ನಿಜವಾದ ಕಾಳಜಿ ಇದ್ದರೆ ಇಂಡಿಯಾ ಒಕ್ಕೂಟದಿಂದ ಹೊರ ಬರಬೇಕು. ಕಾಂಗ್ರೆಸ್ ಮೇಕೆದಾಟು ಯೋಜನೆ ಬಗ್ಗೆ ನಿಲುವು ಸ್ಪಷ್ಟ ಪಡಿಸಬೇಕು.ಲೋಕಸಭೆಗೆ ಕಾಂಗ್ರೆಸ್ ನಲ್ಲಿ ಸ್ಪರ್ದೆ ಮಾಡಲು ಅಭ್ಯರ್ಥಿ ಸಿಗಲಿಲ್ಲ. ಮಂತ್ರಿಗಳು ಕೂಡಾ ಚುನಾವಣೆಗೆ ನಿಲ್ಲಲಿಲ್ಲ. ಇದೀಗ ಅವರ ಮನೆಯಲ್ಲಿ ಟಿಕೆಟ್ ಕೊಡೋ ಸ್ಥಿತಿ ಬಂದಿದೆ.ಜಗದೀಶ್ ಶೆಟ್ಟರ್ ಗೆ ಇನ್ನೆರಡು ದಿನದಲ್ಲಿ ಟಿಕೆಟ್ ಫೈನಲ್ ಆಗಬಹುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ