BJP ದಾರಿದ್ರ್ಯ,JDS ಮುಳುಗಿ ಹೋಗಿರುವುದಕ್ಕೆ ಸಾಕ್ಷಿ: ಕುಟುಕಿದ ಕಾಂಗ್ರೆಸ್
ಪ್ರತಾಪ್ ಸಿಂಹರ “ಸ್ಪೋಟಕ ಸತ್ಯ”ಗಳಿದೆಯೇ?
Team Udayavani, Mar 14, 2024, 6:07 PM IST
ಬೆಂಗಳೂರು: ”ಕುಮಾರಸ್ವಾಮಿಯವರ ಕುಟುಂಬದ ಸದಸ್ಯರೊಬ್ಬರು ಜೆಡಿಎಸ್ ಬದಲು ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು ಜೆಡಿಎಸ್ ಪಕ್ಷ ಮುಳುಗಿ ಹೋಗಿರುವುದಕ್ಕೆ ಸಾಕ್ಷಿ” ಎಂದು ಡಾ.ಸಿ. ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ಲೇವಡಿ ಮಾಡಿದೆ.
ಎಕ್ಸ್ ಪೋಸ್ಟ್ ನಲ್ಲಿ, ಡಾ.ಸಿ. ಎನ್. ಮಂಜುನಾಥ್ ಅವರಿಗೆ ಜೆಡಿಎಸ್ ಪಕ್ಷದ ಮೇಲೆ, ಜೆಡಿಎಸ್ ಪಕ್ಷದ ನಾಯಕತ್ವದ ಮೇಲೆ ನಂಬಿಕೆ ಇಲ್ಲದಾಗಿದೆಯೇ ಎಚ್.ಡಿ.ಕುಮಾರಸ್ವಾಮಿ ಅವರೇ? ಎಂದು ಪ್ರಶ್ನಿಸಿದೆ.
”ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೊದಲೇ ಕೆಲವರಿಗೆ ಟಿಕೆಟ್ ಘೋಷಿಸಿರುವುದು ಕರ್ನಾಟಕ ಬಿಜೆಪಿಯ ರಾಜಕೀಯ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ” ಎಂದು ಡಾ.ಸಿ. ಎನ್. ಮಂಜುನಾಥ್ ಮತ್ತು ಯದುವೀರ್ ಅವರು ಟಿಕೆಟ್ ಘೋಷಣೆಯಾದ ಬಳಿಕ ಪಕ್ಷ ಸೇರ್ಪಡೆಯಾಗಿರುವ ಕುರಿತು ಲೇವಡಿ ಮಾಡಿದೆ.
ಇನ್ನೊಂದು ಎಕ್ಸ್ ಪೋಸ್ಟ್ ನಲ್ಲಿ ”ಸಂಸತ್ ದಾಳಿಕೋರರೊಂದಿಗೆ ಕೈಜೋಡಿಸಿ ಪಾಸ್ ನೀಡಿದ್ದಕಾಗಿಯೇ ಪ್ರತಾಪ್ ಸಿಂಹರಿಗೆ ಟಿಕೆಟ್ ನಿರಾಕರಿಸಲಾಗಿದೆಯೇ? ಸಂಸತ್ ದಾಳಿಯಲ್ಲಿ ಪ್ರತಾಪ್ ಸಿಂಹರ ಸ್ಪೋಟಕ ಸತ್ಯಗಳಿದೆಯೇ? ಸಂಸತ್ ದಾಳಿಯ ಬಗೆಗಿನ ತನಿಖೆ ಎಲ್ಲಿಯವರೆಗೆ ಬಂದಿದೆ? ದಾಳಿ ಹಿಂದಿನ ಕೈವಾಡ ಯಾರದ್ದಿದೆ? ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಈ ವಿಷಯವನ್ನು ಬಹಿರಂಗಪಡಿಸಬೇಕು.ಪ್ರತಾಪ್ ಸಿಂಹ ಬಗ್ಗೆ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದ ಕರ್ನಾಟಕ ಬಿಜೆಪಿಗೆ ಈ ಪ್ರಶ್ನೆಗಳಿಗೆ ಉತ್ತರಿಸುವ ಧಮ್ ತಾಕತ್ತಿದೆಯೇ?” ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ