Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
ಮನೆಬಾಗಿಲ ಬಳಿ ಕಾದು ಕಾಗೇರಿ ವಾಪಸ್ ಆಗಿದ್ದಾರೆ ಎಂಬ ವಿಷಯವೂ ಕೇಳಿಬಂದಿದೆ...
Team Udayavani, Mar 29, 2024, 6:30 AM IST
ಶಿರಸಿ: ಉತ್ತರ ಕನ್ನಡ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ಪ್ರಕಟವಾದ ಬೆನ್ನಲ್ಲೇ ಆರು ಬಾರಿ ಸಂಸದರಾಗಿದ್ದ ಅನಂತ ಕುಮಾರ ಹೆಗಡೆ “ತಟಸ್ಥ’ರಾಗಿ ಉಳಿಯಲಿದ್ದಾರೆ ಎನ್ನಲಾಗಿದೆ.
ಸಂವಿಧಾನ ತಿದ್ದುಪಡಿ ಹೇಳಿಕೆ ಹಾಗೂ ಮುಸ್ಲಿಂ ವಿರೋಧಿ ನಿಲುವು ಅವರಿಗೆ ಈ ಬಾರಿ ಟಿಕೆಟ್ ತಪ್ಪಲು ಮೇಲ್ನೋಟಕ್ಕೆ ಕಾರಣ ಎಂದು ಪಕ್ಷದ ಕೆಲವು ಹಿರಿಯರು ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಲು ಪ್ರಚಾರದಿಂದಲೂ ದೂರವುಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಕಾಗೇರಿ ಬೆಂಬಲಿಗರು ಅನಂತ್ ಭೇಟಿಗೆ ಯತ್ನಿಸಿದಾಗ “ನಾಳೆ- ನಾಡಿದ್ದು ನೋಡೋಣ’ ಎಂದು ಹೇಳಿ ಕಳುಹಿಸಿ ದ್ದಾರೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಅವರನ್ನು ಭೇಟಿ ಮಾಡಲು ತೆರಳಿ ಮನೆಬಾಗಿಲ ಬಳಿ ಕಾದು ಕಾಗೇರಿ ವಾಪಸ್ ಆಗಿದ್ದಾರೆ ಎಂಬ ವಿಷಯವೂ ಕೇಳಿಬಂದಿದೆ. ಆದರೆ ಸಂಸದರ ಮನೆಯ ಬಳಿ ಜನರಿದ್ದ ಕಾರಣ ಕಾಗೇರಿ ಒಳಗೆ ಹೋಗಿಲ್ಲ ಎನ್ನಲಾಗಿದೆ. ಈ ಎಲ್ಲ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಂಸದ ಹೆಗಡೆ ಚುನಾವಣೆಯಿಂದ ದೂರ ಉಳಿಯುತ್ತಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ