Lok Sabha Election; ಬಿಜೆಪಿಗೆ ಬಿಸಿತುಪ್ಪವಾದ ಉತ್ತರ ಕನ್ನಡ ಅಭ್ಯರ್ಥಿ ಆಯ್ಕೆ
Team Udayavani, Mar 23, 2024, 11:59 PM IST
ಬೆಂಗಳೂರು: ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಮತ್ತೆ ಟಿಕೆಟ್ ನೀಡಲು ಬಿಜೆಪಿ ವರಿಷ್ಠರಿಗೆ ಇಷ್ಟವಿಲ್ಲ. ಆದರೆ ಬೇರೆಯವರಿಗೆ ಕೊಟ್ಟರೆ ಕ್ಷೇತ್ರದಲ್ಲಿ ಗೆಲ್ಲುವುದು ಕಷ್ಟ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಟಿಕೆಟ್ ವಿವಾದ ಇತ್ಯರ್ಥಗೊಳಿಸುವುದು ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.
ಟಿಕೆಟ್ ಅಂತಿಮಗೊಳಿಸುವುದಕ್ಕೂ ಮುನ್ನ ಮತ್ತೊಮ್ಮೆ ತಳಮಟ್ಟದ ವರದಿ ಪಡೆಯಲು ವರಿಷ್ಠರು ಮುಂದಾಗಿದ್ದಾರೆ. ಎಲ್ಲ ಮೂಲಗಳಿಂದ ವಾಸ್ತವ ಸ್ಥಿತಿಗತಿಗಳ ಬಗ್ಗೆ ಮಾಹಿತಿ ತರಿಸಿಕೊಳ್ಳಲಾಗುತ್ತಿದೆ. ವರಿಷ್ಠರ ವಿರೋಧದ ಮಧ್ಯೆಯೂ ಸಂಘ-ಪರಿವಾರದಿಂದ ಹೆಗಡೆ ಪರ ಬ್ಯಾಟಿಂಗ್ ಮುಂದುವರಿದಿದೆ.
ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಅವರು ಚುನಾವಣ ಸಂಚಾಲಕ ಹಾಗೂ ಉತ್ತರ ಕನ್ನಡ ಪ್ರಭಾರಿ ವಿ.ಸುನಿಲ್ ಕುಮಾರ್ ಅವರ ಜತೆಗೆ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲು ವರಿಷ್ಠರು ಬಹುತೇಕ ನಿರ್ಧರಿಸಿದ್ದಾರೆ. ಆದರೆ ಹಿಂದುತ್ವದ ಮೂಲ ಕಾರ್ಯಕರ್ತರು ಬೇಸರಗೊಂಡು ಚುನಾವಣ ಕಾರ್ಯದಿಂದ ದೂರವುಳಿದರೆ ಕಷ್ಟ ಎಂಬ ಕಾರಣಕ್ಕೆ ಹಿಂದುತ್ವವಾದಿ ಮುಖಂಡರನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು ಒಂದು ತಿಂಗಳು ಕಾಲ ಚುನಾವಣ ಕೆಲಸಕ್ಕೆ ನಿಯೋಜಿಸುವುದಕ್ಕೂ ಪಕ್ಷ ಚಿಂತಿಸಿದೆ. ರಾಧಾ ಮೋಹನ್ ಅಗರ್ವಾಲ್ ಅವರೇ ಉತ್ತರ ಕನ್ನಡದಲ್ಲಿ ಠಿಕಾಣಿ ಹೂಡುವ ಸಾಧ್ಯತೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ