ಇ.ಡಿ.ಗಂತೂ ಸದ್ಯಕ್ಕೆ ಕೈ ತುಂಬ ಕೆಲಸ!


Team Udayavani, Sep 11, 2019, 11:39 PM IST

ed

ಈ ನೂರು ದಿನಗಳಲ್ಲಿ ಸಾಕಷ್ಟು ಮುನ್ನೆಲೆಗೆ ಬಂದಿರುವುದು ಇಡಿ (ಎನ್‌ಫೋರ್ಸ್‌ಮೆಂಟ್‌ ಡೈರೆಕ್ಟೋರೇಟ್‌). ಎಲ್ಲರೂ ರಾಜಕೀಯ ದ್ವೇಷಕ್ಕಾಗಿ ಇಂಥ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ವಿಪಕ್ಷಗಳಿಂದ ಕೇಳಿಬರುತ್ತಿದೆ. ಆದರೂ ಒಂದು ಸಂಸ್ಥೆ ಇದೆ ಎಂದು ಗೊತ್ತಾದದ್ದೇ ಈಗ. ಒಟ್ಟು ಈಗಲಂತೂ ಈ ಸಂಸ್ಥೆಗೆ ಕೈ ತುಂಬಾ ಕೆಲಸ !
*
– ಈಶ

ಪ್ರಧಾನಿ ನರೇಂದ್ರ ಮೋದಿ ಅವರು 2ನೇ ಬಾರಿ ಆಡಳಿತಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಸಂಸ್ಥೆಗಳು ವ್ಯಾಪಕ ದಾಳಿಗಳನ್ನು ಸಂಘಟಿಸುತ್ತಿವೆ. ತನಿಖೆಗಳನ್ನು ಕೈಗೊಳ್ಳುತ್ತಿವೆ. ಇದು ವಿಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದು, ವಿಪಕ್ಷಗಳ ನೇತಾರರೇ ಬಂಧನ ಭೀತಿ, ತನಿಖೆಯ ಉರುಳಿಗೆ ಸಿಕ್ಕಿಬಿದ್ದಿದ್ದಾರೆ. ಮೋದಿ ಅವರು ಈ ಸಂಸ್ಥೆಗಳ ಮೂಲಕ ವಿಪಕ್ಷಗಳ ಬಾಯಿ ಮುಚ್ಚಿಲಸು ಪ್ರಯತ್ನಿಸುತ್ತಿದ್ದಾರೆ ಎಂಬುದು ಕೇಳಿಬರುತ್ತಿರುವ ಆರೋಪ. ವಿಚಿತ್ರವೆಂದರೆ ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಹಲವು ದಾಳಿ, ತನಿಖೆಗಳನ್ನು ಸಂಘಟಿಸಿ ಹಲವರನ್ನು ಬಂಧಿಸಿವೆ. ಮೋದಿ ಅವರು 2014ರಲ್ಲಿ ಆಡಳಿತಕ್ಕೆ ಬಂದ ಬಳಿಕ ಸಿಬಿಐ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ವಿರುದ್ಧ ದಾಳಿ ನಡೆಸಿದ್ದು, ತದನಂತರದಿಂದ ಕೇಂದ್ರ ಸರಕಾರ ತನಿಖಾ ಸಂಸ್ಥೆಗಳಿಂದ ವಿಪಕ್ಷ ನಾಯಕರಿಗೆ ನಿದ್ದೆ ಇಲ್ಲದಾಗಿದೆ ಎಂಬ ಆರೋಪ ವ್ಯಕ್ತವಾಗಿತ್ತು.

ತೀವ್ರಗೊಂಡ ತನಿಖೆಗಳು
ಕೇಂದ್ರದ ಮಾಜಿ ಗೃಹಸಚಿವ ಪಿ. ಚಿದಂಬರಂ ಅವರು ಇತ್ತೀಚಿನ ದಿನಗಳಲ್ಲಿ ಬಂಧನಕ್ಕೊಳಗಾದ ಅತಿ ದೊಡ್ಡ ರಾಜಕಾರಣಿ. ಐಎನ್‌ಎಕ್ಸ್‌ ಹಗರಣದಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿದೆ. 2007ರಲ್ಲಿ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ ಐಎನ್‌ಎಕ್ಸ್‌ ಮೀಡಿಯಾಕ್ಕೆ 305 ಕೋಟಿ ರೂ. ವಿದೇಶಿ ದೇಣಿಗೆ ಪಡೆಯಲು ಅಕ್ರಮ ಅನುಮತಿ ನೀಡಿದ್ದರು ಎನ್ನುವುದು ಅವರ ಮೇಲಿನ ಆರೋಪ. ಈ ಕುರಿತಂತೆ ಅವರು ಸಿಬಿಐ, ಇಡಿ ಎರಡಕ್ಕೂ ಬೇಕಾದವರಾಗಿದ್ದರು.

ಎರಡನೆಯದಾಗಿ ರಾಜ್ಯದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌. ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಅವರ ವಿರುದ್ಧ ಕೇಸು ದಾಖಲಾಗಿದ್ದು, ಇತ್ತೀಚಿಗೆ ಇ.ಡಿ. ಅವರನ್ನು ಬಂಧಿಸಿದೆ. ಈ ಪ್ರಕರಣ 2017ರದ್ದಾದರೂ ಆ ಹೊತ್ತಿನಲ್ಲಿ ತೆರಿಗೆ ಇಲಾಖೆ ಅಧಿಕಾಗಳು ಮೊದಲ ಬಾರಿಗೆ ವಿವಿಧೆಡೆ ಅವರ ನಿವಾಸ ಕಚೇರಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು. 2018 ಸೆಪ್ಟೆಂಬರ್‌ನಲ್ಲಿ ಇ.ಡಿ. ಕೇಸು ದಾಖಲಿಸಿದ್ದು, ಬಳಿಕ ತನಿಖೆ ಪ್ರಗತಿಯಲ್ಲಿತ್ತು. 2019 ಸೆ.3ರಂದು ಅಕ್ರಮ ಹಣ ವರ್ಗಾವಣೆ ಮತ್ತು ಆದಾಯ ತೆರಿಗೆ ಪ್ರಕರಣದ ಅನ್ವಯ ಅವರನ್ನು ದಿಲ್ಲಿಯಲ್ಲಿ ಬಂಧಿಸಲಾಗಿದೆ.

ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ ಅವರು ಮಹಾರಾಷ್ಟ್ರದಲ್ಲಿ ಕೊಹಿನೂರ್‌ ಕಟ್ಟಡ ನಿರ್ಮಾಣ ಯೋಜನೆಯಲ್ಲಿ 421 ಕೋಟಿ ರೂ. ವಂಚನೆ ಎದುರಿಸುತ್ತಿದ್ದಾರೆ. ಇವರ ವಿರುದ್ಧ ಇ.ಡಿ. ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದೆ. ಠಾಕ್ರೆಯವರೊಂದಿಗೆ ಷೇರುದಾರರಾದ ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ ಜೋಷಿ ಮತ್ತು ಅವರ ಪುತ್ರ ಉನ್ಮೆàಶ್‌ ಜೋಷಿ ಅವರ ಹೆಸರನ್ನೂ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್‌ ಅವರ ಅಳಿಯ ರತುಲ್‌ ಪುರಿ ವಿರುದ್ಧದ ವಿಚಾರಣೆಯೂ ತೀವ್ರಗೊಂಡಿದೆ. ಇತ್ತೀಚಿಗೆ ಅವರನ್ನು ಇ.ಡಿ. ಬಂಧಿಸಿದೆ. ಬ್ಯಾಂಕ್‌ಗೆ 354 ಕೋಟಿ ರೂ. ವಂಚನೆ ಎಸಗಿದ ಆರೋಪ ಅವರ ಮೇಲಿದೆ. ಕಳೆದ ಲೋಕಸಭೆ ಚುನಾವಣೆಗೆ ಮುನ್ನ ಅವರ ಮನೆಗೆ ಆದಾಯ ತೆರಿಗೆ ಇಲಾಖೆ ದಾಳಿ ಕೂಡ ನಡೆಸಿತ್ತು.

ಇದರೊಂದಿಗೆ ದೇಶಾದ್ಯಂತ ಹಲವು ವಂಚನೆ ಪ್ರಕರಣಗಳನ್ನು ಇ.ಡಿ. ದಾಖಲಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ 2018ರ ಒಂದೇ ವರ್ಷದಲ್ಲಿ ಅದು ಅತಿ ಹೆಚ್ಚು ಅಂದರೆ 881 ಅಕ್ರಮ ಹಣಕಾಸು ವರ್ಗಾವಣೆ ಕುರಿತ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು. ಇದೇ ವೇಳೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 29468.31 ಕೋಟಿ ರೂ. ಮೌಲ್ಯದ 973 ಆಸ್ತಿಗಳನ್ನು ಅದು ಮುಟ್ಟುಗೋಲು ಹಾಕಿಕೊಂಡಿತ್ತು.

ಹಾಗೆಯೇ ಇದೇ ಅವಧಿಯಲ್ಲಿ ವಿದೇಶಿ ದೇಣಿಗೆಯಲ್ಲಿ ನಡೆಸಿದ ವಂಚನೆ ಕುರಿತಾಗಿ 6275ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ದಾಖಲಾಗಿರುವ ಕೇಸುಗಳ ಈ ಪ್ರಮಾಣ ಕಳೆದ 14 ವರ್ಷಗಳಲ್ಲೇ ಅತ್ಯಧಿಕವಾಗಿದೆ. ಇ.ಡಿ ಯ ಈ ಕ್ಷಿಪ್ರಗತಿ ಕೊಂಚ ವಿವಾದಕ್ಕೀಡಾಗಿದೆ. ಇಲ್ಲಿಯವರೆಗೆ ಏನು ನಿದ್ರೆ ಮಾಡುತಿತ್ತಾ ಎಂಬ ಅಭಿಪ್ರಾಯವೂ ಕೇಳಿಬಂದಿರುವುದು ಸ್ಪಷ್ಟ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Growth

ಆರ್ಥಿಕ ಹಿಂಜರಿತಕ್ಕೆ ಹಿತ್ತಲ ಗಿಡ ಮದ್ದಾಗಬಹುದಲ್ಲ !

Abe-shinjo

ದೂರದೃಷ್ಟಿ, ಪ್ರಗತಿಗಾಮಿ ವಿದೇಶಾಂಗ ನೀತಿ

Economy-n

ಆರ್ಥಿಕ ಹಿಂಜರಿತದ ಪರಿಯಿಂದ ಹೊರಬರುವ ಬಗೆ ಬೇಕು

water

ನೀರಿಗೆ ಮಂತ್ರಾಲಯವೂ ಬಂತು ಅಭಿಯಾನವೂ ಆರಂಭವಾಯಿತು

Indian-Parliament-1-726

ಮುಂಗಾರು ಅಧಿವೇಶನ : ನಿರ್ಧಾರಗಳಿಗೆ ಬರ ಬರಲಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.