ಮದರ್ಸ್ ಡೇ: ನನ್ನ ತಾಯಿಯ ಪ್ರೀತಿ ಕಣ್ಣಲ್ಲಿ ತುಂಬಿಕೊಂಡಿತ್ತು…
ನೀನು ಇನ್ನು ಮುಂದೆ ಕಾಲೇಜಿಗೆ ಹೋಗಬೇಡ, ಬಿಸಿಲಿನಲ್ಲಿ ಕೆಲಸ ಮಾಡಿದರೆ ಗೊತ್ತಾಗುತ್ತದೆ ಎಂದು ಬೈದಳು
Team Udayavani, May 10, 2020, 9:55 AM IST
Representative Image
ನಾನು ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ದಿನಗಳು. ನಿತ್ಯ ಕಾಲೇಜಿಗೆ ನಮ್ಮೂರಿನಿಂದ 25 ಕಿಲೋ ಮೀಟರ್ ದೂರದಲ್ಲಿದ್ದ ನಗರಕ್ಕೆ ಖಾಸಗಿ ಬಸ್ಸಿನಲ್ಲಿ ಹೋಗಿ ಬರುತ್ತಿದ್ದೆವು. ನಗರಕ್ಕೆ ಕಾಲಿಡುತ್ತಿದ್ದಂತೆ ನಮಗೆ ಯಾವುದೇ ಭಯವಿರುತ್ತಿರಲಿಲ್ಲ. ಯಾಕೆಂದರೆ ನಮಗೆ ಪರಿಚಯಸ್ಥರು ಯಾರು ಸಿಗುತ್ತಿರಲ್ಲಿಲ್ಲ. ಇದರಿಂದ ಕಾಲೇಜಿಗೆ ಚಕ್ಕರ್ ಹಾಕಿ, ಸಿನಿಮಾ ನೋಡಲು ಹೋಗುತ್ತಿದ್ದೆವು. ಇದು ಅತಿಯಾಯಿತು.
ಸುಮಾರು ಮೂರ್ನಾಲ್ಕು ತಿಂಗಳು ನಂತರ ನಮ್ಮೂರಿನ ಪಕ್ಕದ ಹಳ್ಳಿಯ ಕಾಲೇಜಿನ ಗೆಳತಿಯೊಬ್ಬಳಿಂದ ನಾನು ಕಾಲೇಜಿಗೆ ಚಕ್ಕರ್ ಹಾಕುತ್ತಿದ್ದ ವಿಷಯ ಅಮ್ಮನಿಗೆ ತಿಳಿಯಿತು. ಅಮ್ಮ ನನ್ನನ್ನು ಹತ್ತಿರ ಕರೆದು ಅಳಲು ಪ್ರಾರಂಭಿಸಿದಳು. ನೀನು ಇನ್ನು ಮುಂದೆ ಕಾಲೇಜಿಗೆ ಹೋಗಬೇಡ, ಬಿಸಿಲಿನಲ್ಲಿ ಕೆಲಸ ಮಾಡಿದರೆ ಗೊತ್ತಾಗುತ್ತದೆ ಎಂದು ಬೈದಳು. ನಾನು ತಲೆ ಬಗ್ಗಿಸಿಕೊಂಡು ಮಾತನಾಡದೆ ಸುಮ್ಮನೆ ಕುಳಿತೆ.
ಮರುದಿನ ಬೆಳಿಗ್ಗೆ ಮತ್ತೆ ಕಣ್ಣೆರಿಡುತ್ತಾ ಕೈಯಲ್ಲಿ ಇಪ್ಪತ್ತು ರೂಪಾಯಿ ಕೊಟ್ಟು ಕಾಲೇಜಿಗೆ ಹೋಗು ಎಂದಳು. ಆಗ ನನ್ನ ತಾಯಿಯ ಪ್ರೀತಿ ಕಣ್ಣಲ್ಲಿ ತುಂಬಿಕೊಂಡಿತ್ತು. ಅಂದಿನಿಂದ ಅಮ್ಮನ ಮೇಲಿನ ಪ್ರೀತಿ ಹೆಚ್ಚಾಯಿತು. ಈ ಘಟನೆ ನನ್ನಲ್ಲಿ ಬದಲಾವಣೆಯನ್ನು ತಂದಿತು.
ಸಣ್ಣಮಾರಪ್ಪ, ಚಂಗಾವರ
ದೇವರಹಟ್ಟಿ, ಶಿರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು
‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….
ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು
ನಾನು ಅಮ್ಮನ ಕನಸಿನಲ್ಲಿ ಎಚ್ಚರವಾಗಿರುತ್ತೇನೆ, ಅವಳು ನನ್ನ ಕನಸಿನಲ್ಲಿ ಎಚ್ಚರವಾಗಿರುತ್ತಾಳೆ
ನವಮಾಸ ನಮ್ಮನ್ನು ಹೊತ್ತು, ಹೆರುವ ಆಕೆಗೆ ಕೇವಲ ಒಂದು ದಿನ ಇತ್ತರೆ ಸಾಕೇ?
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ