3 ದಶಕದ ಕತೆಗಳು: ಪೇಜರ್‌ ಎಂಬ ಅಭಿಮನ್ಯು


Team Udayavani, Jan 25, 2020, 1:07 PM IST

pager

ಲ್ಯಾಂಡ್‌ಲೈನ್‌ ಸಿಗುವುದೇ ದುಸ್ತರವೆಂದಿದ್ದ ಸಂದರ್ಭದಲ್ಲಿ ಬಂದದ್ದು ಪೇಜರ್‌ ಸೇವೆ. ಅಮೆರಿಕದಲ್ಲಿ ಬಹಳ ಬಳಕೆಯಲ್ಲಿದ್ದ ಈ ತಾಂತ್ರಿಕ ಆವಿಷ್ಕಾರ ಭಾರತದಲ್ಲೂ ಹೊಸ ಭರವಸೆ ಮೂಡಿಸಿದ್ದು ಸುಳ್ಳಲ್ಲ. ಆದರೆ ಸಾಕಷ್ಟು ಪ್ರಯೋಜನವಿದ್ದರೂ ಬಳಕೆಯ ಉದ್ದೇಶದ ಮಿತಿಯಿಂದ ಬದುಕಲಾಗಲಿಲ್ಲ. ಬದಲಾವಣೆಯ ಚಕ್ರವ್ಯೂಹದ ಒಳಹೊಕ್ಕು ಹೊರ ಬರಲಾಗಲಿಲ್ಲ.

ಮೂರು ದಶಕಗಳಲ್ಲಿ ತಂತ್ರಜ್ಞಾನ ಉಂಟು ಮಾಡಿದ ಪಲ್ಲಟಗಳು ಹಲವಾರು. ಟೆಲಿಫೋನ್‌ನಿಂದ ಹಿಡಿದು ಟಿವಿ ವರೆಗೂ ಎಲ್ಲದರ ಉದ್ದೇಶಗಳನ್ನೇ ಬದಲಾಯಿಸಿಬಿಟ್ಟಿತು ಈ ಕ್ಷೇತ್ರದ ಸಂಶೋಧನೆಗಳು. ದೊಡ್ಡ ದೊಡ್ಡದೆಲ್ಲವೂ ಸಣ್ಣದಾಗಿ, ಸ್ಮಾರ್ಟ್‌ ಆಗಿ ಕಂಗೊಳಿಸತೊಡಗಿದ್ದು ಈ ಮೂರು ದಶಕಗಳಲ್ಲೇ.

ಹಿಂದಿನ ಬಾರಿ ಹೇಳಿದಂತೆ ಟೆಲಿಫೋನ್‌ ಎಂಬುದರ ಸಾಹಸಗಾಥೆಯಂತೆಯೇ ಈ ಅಲ್ಪಾಯುಷಿಯ ಕಥೆಯೂ ಇದೆ. ಒಂದು ಆರ್ಥದಲ್ಲಿ ಇದೊಂದು ಅಭಿಮನ್ಯುವಿದ್ದಂತೆ. ಚಕ್ರವ್ಯೂಹದೊಳಕ್ಕೆ ಹೊಕ್ಕುವ ಸಾಹಸವನ್ನೇನೋ ಮಾಡಿತು. ಆದರೆ ಹೊರಗೆ ಬರಲಾಗಲಿಲ್ಲ.

ಆಗಿನ್ನೂ ಫೋನ್‌ಗಳ ಭರಾಟೆ ಬಂದಿತ್ತು, ಮೊಬೈಲ್‌ ಫೋನ್‌ ಜನ ಬಳಕೆಗೆ ಸಿದ್ಧವಾದ ಸಮಯ. 1995 ರಲ್ಲಿ ನಮ್ಮ ದೇಶಕ್ಕೆ ಮೊಬೈಲ್‌ ಬಂದಿತ್ತು. ಆದರೆ ಹೀಗೆ ಎಲ್ಲೆಂದರಲ್ಲಿ ಸಿಗುತ್ತಿರಲಿಲ್ಲ. ಇದೇ ಸಂದರ್ಭದಲ್ಲೇ ಶುರುವಾದದ್ದು ಪೇಜರ್‌ ಸೇವೆ. 1995ರಲ್ಲಿ ಈ ಸೇವೆ ಆರಂಭವಾಗಿದ್ದಾಗ ನವದೆಹಲಿಯ 15ಕ್ಕೂ ಹೆಚ್ಚು ಕಂಪೆನಿಗಳು 27 ನಗರಗಳಲ್ಲಿ ಸೇವೆ ಆರಂಭಿಸಲು 94 ಪರವಾನಗಿಗಳನ್ನು ಪಡೆದವು. ಚಂಡೀಗಢ ಇಂದೋರ್‌ ಮುಂತಾದೆಡೆ ಸೇವೆ ಆರಂಭವಾದಾಗ ಮೊದಲ ತಿಂಗಳೇ ಮೂರು ಸಾವಿರದಷ್ಟು ಮಂದಿ ಚಂದಾದಾರರಾದರು.

ಮೋಟರೊಲಾ ಕಂಪೆನಿ ಲೆಕ್ಕ ಹಾಕಿದ ಪ್ರಕಾರ 145 ಮಂದಿ ಭಾರತೀಯರಲ್ಲಿ ಒಬ್ಬರಿಗೆ ದೂರವಾಣಿ ಸೇವೆ ಇತ್ತು. ಅದೂ ಲ್ಯಾಂಡ್‌ಲೈನ್‌ ಸೇವೆ. ಹೊಸದಾಗಿ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿದವರು ವರ್ಷಾನುಗಟ್ಟಲೆಯಿಂದ ಕಾಯುತ್ತಿದ್ದರು. ಭಾರತದ ಪರಿಸ್ಥಿತಿಯನ್ನು ಅರಿತ ವಿದೇಶಿ ಕಂಪೆನಿಗಳ ಅಧ್ಯಯನಕಾರರು, 1999ರ ವೇಳೆಗೆ ಸುಮಾರು 23 ಲಕ್ಷ ಮಂದಿಯನ್ನು ತಲುಪುವ ಗುರಿ ಹೊಂದಿದ್ದರು.

ಪೇಜರ್‌ ಒಂದು ಮಾಹಿತಿ ರವಾನಿಸುವ ಸೇವೆ. ಈಗಿನ ಸಾಮಾನ್ಯ ಚಿಕ್ಕ ಮೊಬೈಲ್‌ನನ್ನು ಆಡ್ಡ ಹಿಡಿದರೆ ಎಷ್ಟು ಗಾತ್ರವಾಗುತ್ತದೋ ಅಷ್ಟಿತ್ತು ಅದು. ಅದಕ್ಕೊಂದು ಕೊಂಡಿ ಇಡುತ್ತಿದ್ದರು. ಅದನ್ನು ಸೊಂಟಕ್ಕೆ ಬೆಲ್ಟ್ ಕಟ್ಟಿಕೊಂಡಂತೆ ಕಟ್ಟಿಕೊಳ್ಳುತ್ತಿದ್ದರು. ಈಗಿನ ಮೊಬೈಲ್‌ ಸೇವೆಯಂತೆ ನಿರ್ದಿಷ್ಟ ಕಂಪೆನಿಗಳಿಗೆ ಹಣ ಪಾವತಿಸಿ ಪೇಜರ್‌ ಪಡೆಯಬೇಕಿತ್ತು. ಎರಡು ಬಗೆಯ ಸೇವೆ. ಧ್ವನಿ ಸಂದೇಶ ಹಾಗೂ ಅಕ್ಷರ ಸಂದೇಶ.

ಈಗಿನ ಮೊಬೈಲ್‌ಗೆ ಸಂದೇಶ ಬರುವ ಮಾದರಿಯೇ. ಸಂದೇಶ ಬಂದ ಕೂಡಲೇ ಮೂರು ಬಾರಿ ಬೀಪ್‌ ಶಬ್ದ ಬರುತ್ತಿತ್ತು. ವಾಸ್ತವವಾಗಿ ವಿದೇಶಗಳಲ್ಲಿ 1960-80 ರ ದಶಕದಲ್ಲಿ ಜನಪ್ರಿಯವಾಗಿದ್ದ ಪೇಜರ್‌ಗೆ ಮತ್ತೂಂದು ಹೆಸರು ಇದ್ದದ್ದು ಬೀಪರ್‌ ಎಂದೇ.

ಕುತೂಹಲ
ಆಗ ಈ ಪೇಜರ್‌ ನೋಡುವುದೇ ಒಂದು ಕುತೂಹಲ. ಎಲ್ಲರ ಬಳಿ ಪೇಜರ್‌ ಇರಲಿಲ್ಲ. ಕೆಲವು ಮೆಡಿಕಲ್‌ ಅಸಿಸ್ಟೆಂಟ್ಸ್‌, ಸೇಲ್ಸ್‌ ಎಕ್ಸಿಕ್ಯೂಟಿವ್ಸ್‌ ಮತ್ತಿತರರು ಈ ಸೇವೆಯನ್ನು ಹೊಂದಿದ್ದರು. ಸದಾ ಸುದ್ದಿಯ ಬೆನ್ನ ಹಿಂದಿರುವ ಮಾಧ್ಯಮಗಳಿಗೆ ಬಂದದ್ದೂ ಕೊಂಚ ತಡವಾಗಿಯೇ. ಟೆೆಲಿಗ್ರಾಂ ಸಂದೇಶದ ತಾಂತ್ರಿಕ ರೂಪವೆಂದರೆ ಹೆಚ್ಚು ಸೂಕ್ತ. ಒಂದೆರಡು ಸಾಲಿನ ಸಂದೇಶಗಳನ್ನು ಕಳುಹಿಸಬಹುದಾಗಿತ್ತು. ಅದನ್ನು ಹೊಂದುವುದೇ ಒಂದು ಅಂತಸ್ತಿನ ಕಥೆಯಾಗಿತ್ತು. ಹಾಗೆ ಹೇಳುವುದಾದರೆ ಮೋಟರೊಲ ಕಂಪೆನಿ ಜನರಿಗೆ ಪರಿಚಯವಾದದ್ದೇ ಈ ಪೇಜರ್‌ ಸೇವೆಯಿಂದ.

1991 ರಲ್ಲಿ ಉದಾರೀಕರಣದ ಬಾಗಿಲು ತೆರೆದ ಮೇಲೆ ಮೆಲ್ಲಗೆ ಆರ್ಥಿಕತೆಯ ಗಂಧಗಾಳಿ ಒಳಗೂ ಹೊರಗೂ ಸೋಕ ತೊಡಗಿದ ಕಾಲವದು. ಸಂದೇಶಗಳ ರವಾನೆಗೆ ಆಧುನಿಕ ತಾಂತ್ರಿಕ ಸ್ವರೂಪ ಸಿಕ್ಕಿದ್ದು ಆಗಲೇ. ಮೇಘ ಸಂದೇಶದ ಕಲ್ಪನೆಯನ್ನು ನನಸಾಗಿಸಿದ್ದು ಇದೇ ಪೇಜರ್‌ಗಳು. ಅಮೆರಿಕ-ಬ್ರಿಟನ್‌ನಲ್ಲಿ ಹೆಚ್ಚಾಗಿ ಕೊರಿಯರ್‌ ಕಂಪೆನಿಗಳ ಮಂದಿ ಬಳಸುತ್ತಿದ್ದ ಪೇಜರ್‌ಗಳಿಗೆ ನಮ್ಮಲ್ಲಿ ಕೆಂಫ‌ು ರತ್ನಗಂಬಳಿಯ ಸ್ವಾಗತ ದೊರೆತಿತ್ತು. 1998ರ ಸುಮಾರಿಗೆ 2 ಲಕ್ಷ ದಷ್ಟು ಪೇಜರ್‌ ಚಂದಾದಾರರು ಇದ್ದಿದ್ದರು.

ಇದೇ ಸಮಯದಲ್ಲಿಯೇ ಮೊಬೈಲ್‌ ಫೋನ್‌ ಬಂದಿದ್ದು. ಆದರೆ, ಅದರ ದರ ಮತ್ತು ಬಳಕೆಯ ವೆಚ್ಚ ಎರಡೂ ದುಬಾರಿಯಾದ ಕಾರಣ ಯಾರೂ ಅದರ ಬಳಿ ಹೋಗಿರಲಿಲ್ಲ. ಆರಂಭದಲ್ಲಿ ಪೇಜರ್‌ಗೆ 10 ರಿಂದ 15 ಸಾವಿರ ರೂ. ವರೆಗೆ ಬೆಲೆಯಿತ್ತು. ಬಳಿಕ ಸ್ವಲ್ಪ ಕಡಿಮೆಯಾಯಿತು. ಮೊಬೈಲ್‌ ಜನಪ್ರಿಯವಾಗದ ಕಾರಣ ಪೇಜರ್‌ಗೆ ಬೇಡಿಕೆ ಇದ್ದ ಕಾಲವದು. ಆದರೆ ಕ್ರಮೇಣ ಬದಲಾವಣೆಯ ಗಾಳಿ ಜೋರಾಗಿ ಬೀಸತೊಡಗಿತು. ಆ ಬಿರುಗಾಳಿಗೆ ಮೆಲ್ಲಗೆ ಬದಿಗೆ ಸರಿಯತೊಡಗಿದ್ದು ಪೇಜರ್‌ ಸೇವೆ. ಬಿಎಸ್‌ಎನ್‌ಎಲ್‌ ಅಧಿಕಾರಿಯೊಬ್ಬರ ಪ್ರಕಾರ ಈಗ ಅದರ ಸೇವೆ ನಮ್ಮಲ್ಲಿ ಎಲ್ಲೂ ಇಲ್ಲ.

ಪೇಜರ್‌ ಒಂದು ರೀತಿಯಲ್ಲಿ ನೈಟ್‌ ವಾಚ್‌ಮೆನ್‌ ಮಾದರಿಯಲ್ಲಿ ಬಂದಿದ್ದು. ಇತ್ತ ಲ್ಯಾಂಡ್‌ಲೈನ್‌ ಸಿಗುತ್ತಿರಲಿಲ್ಲ, ಮೊಬೈಲ್‌ ಕೈಗೆಟುಕುತ್ತಿರಲಿಲ್ಲ. ಈ ಹೊತ್ತಿನಲ್ಲಿ ಹೆಚ್ಚು ಬ್ಯಾಟರಿ ಲೈಫ್ ಹೊಂದಿದ್ದು, ಪುಟ್ಟದಾದ, ಕಡಿಮೆ ದರ (ಮೊಬೈಲ್‌ಗೆ ಹೋಲಿಸಿದರೆ) ಆಕರ್ಷಕವಾಗಿಯೂ ಇತ್ತು. ಆದರೆ ಮೊಬೈಲ್‌ ಎಂಬ ಮಾಂತ್ರಿಕನ ಮುಂದೆ ನಿಲ್ಲಲಾಗಲಿಲ್ಲ. ಬದಲಾವಣೆಯ ಚಕ್ರವ್ಯೂಹದ ಒಳಗೆ ಹೊಕ್ಕು ಹೊರ ಬರಲಾರದೇ ಹೋದ ಅಭಿಮನ್ಯು ಪೇಜರ್‌.

ಇಂಥ ಪೇಜರ್‌ನ ಮೊದಲ ಪೇಟೆಂಟ್‌ ಪಡೆದವನು
ಆಲ್ಫೆಡ್‌ ಜೆ ಕ್ರಾಸ್‌ ಎನ್ನುವಾತ. ಮೊದಲ ಪೇಜಿಂಗ್‌ ಸೇವೆ ಶುರುವಾದದ್ದೂ 1950 ರಲ್ಲಿ ನ್ಯೂಯಾರ್ಕ್‌ ನಗರದಲ್ಲಿನ ವೈದ್ಯರ ನಡುವೆ ಸಂದೇಶ ರವಾನಿಸುವುದಕ್ಕಾಗಿ. ಆ ಸೇವೆಗೆ ಆಗ ಪಾವತಿಸುತ್ತಿದ್ದುದು ತಿಂಗಳಿಗೆ 12 ಡಾಲರ್‌ಗಳು. 200 ಗ್ರಾಂ ತೂಕ ಹೊಂದಿತ್ತು. ಸುಮಾರು 40 ಕಿಮೀ ವ್ಯಾಪ್ತಿಯಲ್ಲಿ ಸಂದೇಶ ವನ್ನು ರವಾನಿಸುತ್ತಿತ್ತು. ಇಂಥದೊಂದು ಸೇವಾ ವಲಯ ಉದ್ದಿಮೆ ಅಮೆರಿಕದಲ್ಲಿ 2008 ರ ವೇಳೆಗೆ 2.1 ಶತಕೋಟಿ ಆದಾಯವನ್ನು ಗಳಿಸುತ್ತಿತ್ತು. ಅದು 2003 ಕ್ಕೆ ಹೋಲಿಸಿದರೆ ಕಡಿಮೆ (6.2 ಶತಕೋಟಿ). ಅಷ್ಟರಲ್ಲೇ ಮೊಬೈಲ್‌ ಫೋನ್‌ ಹಾವಳಿ ಜೋರಾಗಿತ್ತು. ಈಗ ಅಲ್ಲೂ ಮಂದಗತಿಯಲ್ಲಿದೆ.

ಭೂಪಾಲಿ

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.