ಕಲಾ ಅಕಾಡೆಮಿ ಶುದ್ಧಿ: ತನಿಖೆಗೆ ಆದೇಶ
Team Udayavani, Mar 25, 2019, 6:05 AM IST
ಪಣಜಿ: ಪಾರೀಕರ್ ನಿವಾಸಕ್ಕೆ ಉಪರಾಷ್ಟ್ರಪತಿ ನಾಯ್ಡು ಭೇಟಿ ನೀಡಿದರು.
ಪಣಜಿ: ಗೋವಾ ಮಾಜಿ ಸಿಎಂ ಮನೋಹರ ಪಾರೀಕರ್ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದ ಕಲಾ ಅಕಾಡೆಮಿಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಶುದ್ಧಗೊಳಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಅದಕ್ಕೆ ಸಂಬಂಧಿಸಿ ಗೋವಾ ಸರಕಾರ ತನಿಖೆಗೆ ಆದೇಶ ನೀಡಿದೆ. ಗೋವಾದ ಕಲೆ ಮತ್ತು ಸಂಸ್ಕೃತಿ ಸಚಿವ ಗೋವಿಂದ ಗೌಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ತನಿಖೆಗೆ ಆದೇಶ ನೀಡಿದ್ದನ್ನು ಖಚಿತಪಡಿಸಿದ್ದಾರೆ. ಇಂಥ ಅವೈಜ್ಞಾನಿಕ ಕ್ರಮಗಳಿಗೆ ಪ್ರೋತ್ಸಾಹ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನಾಯ್ಡು ಭೇಟಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರವಿವಾರ ದಿ. ಪಾರೀಕರ್ ಅವರ ಪಣಜಿಯಲ್ಲಿರುವ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರ ಜತೆ ಮಾತುಕತೆ ನಡೆಸಿದ್ದಾರೆ.
ನಕಲಿ ಖಾತೆಗಳು: ಪ್ರಮೋದ್ ಸಾವಂತ್ ಗೋವಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಲೇ ಫೇಸ್ಬುಕ್, ಟ್ವಿಟರ್ಗಳಲ್ಲಿ ಅವರ ಹೆಸರಲ್ಲಿ ನಕಲಿ ಖಾತೆಗಳು ಸೃಷ್ಟಿಯಾಗಿವೆ. ಈ ಬಗ್ಗೆ ಎರಡೂ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ಗೋವಾ ಸರಕಾರದ ಅಧಿಕಾರಿ ರವಿವಾರ ತಿಳಿಸಿದ್ದಾರೆ.