ಪಂಚರಾಜ್ಯಗಳಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳ : ವರುಣ್ ಗಾಂಧಿ ಟ್ವೀಟ್ ಸ್ಫೋಟ
ರಾಜಕೀಯ ಜನಪ್ರಿಯತೆ ಜತೆಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ
Team Udayavani, Jan 20, 2022, 1:06 PM IST
ನವದೆಹಲಿ: ಬಿಜೆಪಿ ಹೈಕಮಾಂಡ್ ವಿರುದ್ಧ ಆಗಾಗ ಟೀಕಾಸ್ತ್ರ ಪ್ರಯೋಗಿಸುತ್ತಲೇ ಇರುವ ಸಂಸದ ವರುಣ್ ಗಾಂಧಿ ಪಂಚರಾಜ್ಯಗಳ ಚುನಾವಣೆ ಹೊಸ್ತಿಲಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ ಮಾಡಿರುವ ಟ್ವೀಟ್ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.
ರಾಷ್ಟ್ರೀ ಯ ದೈನಿಕವೊಂದಕ್ಕೆ ತಾವು ಬರೆದ ಲೇಖನವನ್ನು ಟ್ವೀಟರ್ನಲ್ಲಿ ಹಂಚಿಕೊಂಡಿರುವ ವರುಣ್ ಗಾಂಧಿ “ ಅಭಿವೃದ್ಧಿಯ ಕುರಿತಾಗಿನ ಎಲ್ಲ ಚರ್ಚೆಗಳ ಹೊರತಾಗಿಯೂ ಚುನಾವಣೆಯ ಹೊಸ್ತಿಲಲ್ಲಿ ಇರುವ ಪಂಚರಾಜ್ಯಗಳಲ್ಲಿ ನಿರುದ್ಯೋಗ ಸಮಸ್ಯೆ ವಿಪರೀತವಾಗಿದೆ ಎಂದು ಅಂಕಿಸಂಖ್ಯೆಗಳು ಹೇಳುತ್ತಿರುವುದು ಸುಳ್ಳಲ್ಲ’’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವರುಣ್ ಗಾಂಧಿಯವರ ಈ ಅನಿಸಿಕೆ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. “ರಾಜಕೀಯ ಜನಪ್ರಿಯತೆಯ ಗಳಿಕೆಯ ಜತೆಗೆ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು ಈ ಕ್ಷಣದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸರಕಾರಗಳು ಗಮನ ಹರಿಸಬೇಕು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
Despite all the talk of development, statistics show that unemployment has grown in all poll-bound states. Instead of political populism, we need to urgently focus on incentivising job creation.
My article in The Indian Express today. https://t.co/Egz7NyM0kY pic.twitter.com/sqSkv9TqO8
— Varun Gandhi (@varungandhi80) January 20, 2022
ಕೆಲ ದಿನಗಳ ಹಿಂದೆ ತಮ್ಮ ಸ್ವಕ್ಷೇತ್ರ ಪಿಲ್ಬಿತ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇಶದಲ್ಲಿ ಹಣದುಬ್ಬರದ ದರ ಆಕಾಶ ತಲುಪುತ್ತಿದೆ. ನಿರುದ್ಯೋಗ ಸಮಸ್ಯೆ ಅಂಕೆ ಮೀರಿದೆ ಎಂದು ವರುಣ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!