ಕಳೆದ ಎರಡು ವರ್ಷಗಳಿಂದ 2000 ರೂ. ನೋಟು ಮುದ್ರಿಸಿಲ್ಲ: ಕೇಂದ್ರ ಸರ್ಕಾರ
2000 ರೂ. ಮುಖಬೆಲೆಯ ನೋಟುಗಳ ಚಲಾವಣೆಯಲ್ಲಿ ಭಾರಿ ಇಳಿಕೆ
Team Udayavani, Mar 16, 2021, 10:41 AM IST
ನವದೆಹಲಿ:ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಎಂದು ಹಣಕಾಸು ಸಚಿವಾಲಯ ಸೋಮವಾರ(ಮಾರ್ಚ್ 15) ಲೋಕಸಭೆಗೆ ತಿಳಿಸಿದೆ.
ನೋಟು ಅಮಾನ್ಯೀಕರಣದ ನಂತರ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದ ನಂತರ ಇದೀಗ 2000 ಮುಖಬೆಲೆಯ ನೋಟುಗಳು ವಿರಳವಾಗಿರುವುದು ಯಾಕೆ ಎಂಬ ಪ್ರಶ್ನೆಗೆ ಹಣಕಾಸು ಸಚಿವಾಲಯ ಈ ಉತ್ತರ ನೀಡಿದೆ.
2019-20 ಹಾಗೂ 2020-21ನೇ ಸಾಲಿನಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲು ಪ್ರಿಂಟಿಂಗ್ ಪ್ರೆಸ್ ಗೆ ಕಳುಹಿಸಲಾಗಿಲ್ಲ ಎಂದು ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಲೋಕಸಭೆಗೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.
ಕಳೆದ ಎರಡು ವರ್ಷಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳು ಜನರಿಗೆ ವಿರಳವಾಗಿ ಲಭ್ಯವಾಗುತ್ತಿದೆ. ಅಷ್ಟೇ ಅಲ್ಲ ಬ್ಯಾಂಕ್ ಮತ್ತು ಎಟಿಎಂಗಳಲ್ಲಿಯೂ ಕಡಿಮೆ ಪ್ರಮಾಣದಲ್ಲಿದೆ ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದೆಯೇ ಎಂದು ಎಂಡಿಎಂಕೆ ಸಂಸದ ಎ.ಗಣೇಶಮೂರ್ತಿ ಲೋಕಸಭೆಯಲ್ಲಿ ಪ್ರಶ್ನಿಸಿದ್ದರು.
ಸಾರ್ವಜನಿಕರ ವಹಿವಾಟಿನ ಬೇಡಿಕೆಗೆ ಅನುಗುಣವಾಗಿ ನೋಟುಗಳ ಮುದ್ರಣದ ಬಗ್ಗೆ ಆರ್ ಬಿಐ ಜತೆ ಸಮಾಲೋಚನೆ ನಡೆಸಿ ಕೇಂದ್ರ ಸರ್ಕಾರ ನೋಟುಗಳ ಮುದ್ರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅನುರಾಗ್ ಠಾಕೂರ್ ಉತ್ತರ ನೀಡಿದ್ದಾರೆ.
2000 ರೂ. ಮುಖಬೆಲೆಯ ನೋಟು ಚಲಾವಣೆಗೆ ಅನುಕೂಲಕರವಾಗಿದೆಯೇ ಎಂಬ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಯಾಕೆಂದರೆ 2000 ರೂ. ಮುಖಬೆಲೆಯ ನೋಟುಗಳ ಚಲಾವಣೆಯಲ್ಲಿ ಭಾರಿ ಇಳಿಕೆ ಕಂಡು ಬಂದಿರುವುದಾಗಿ ಠಾಕೂರ್ ವಿವರಿಸಿದ್ದಾರೆ.
ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಕಳೆದ ವರ್ಷದ ಒಟ್ಟು ಚಲಾವಣೆಯಲ್ಲಿ 2000 ರೂಪಾಯಿ ನೋಟು ಕೇವಲ ಶೇ.35ರಷ್ಟು ಮಾತ್ರ ಚಲಾವಣೆಗೊಂಡಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ