ಆ್ಯಪ್, ಡಿಜಿಟಲ್ ಸಾಲದ ಮೇಲೆ ನಿಗಾ: ಆರ್ಬಿಐ ಹೊಸ ಸಮಿತಿ ರಚನೆ
Team Udayavani, Jan 14, 2021, 7:15 AM IST
ಹೊಸದಿಲ್ಲಿ: ಮೊಬೈಲ್ ಆ್ಯಪ್ಗ್ಳು ಹಾಗೂ ಆನ್ಲೈನ್ ವೇದಿಕೆಗಳ ಮೂಲಕ ನೀಡಲಾಗುವ ಡಿಜಿಟಲ್ ಸಾಲದ ಮೇಲೆ ಅಧ್ಯಯನ ನಡೆಸಲು ಆರ್ಬಿಐ ಬುಧವಾರ ಸಮಿತಿಯೊಂದನ್ನು ರಚಿಸಿದೆ. ನಿಯಂತ್ರಿತ ಮತ್ತು ಅನಿಯಂತ್ರಿತ ಹಣಕಾಸು ವಲಯಗಳಲ್ಲಿ ಡಿಜಿಟಲ್ ಸಾಲ ನೀಡುವ ಚಟುವಟಿಕೆಗಳ ಅಧ್ಯಯನ ನಡೆಸಲು ಹಾಗೂ ಸೂಕ್ತವಾದ ನಿಯಂತ್ರಣ ವಿಧಾನ ಜಾರಿಗೆ ತರಲು ಈ ಸಮಿತಿ ರಚಿಸಲಾಗಿದೆ ಎಂದು ಆರ್ಬಿಐ ಹೇಳಿದೆ.
ದೇಶಾದ್ಯಂತ ಆ್ಯಪ್ ಸಾಲ ವ್ಯವಸ್ಥೆ ಸೃಷ್ಟಿಸಿರುವ ತೊಂದರೆಯ ಹಿನ್ನೆಲೆಯಲ್ಲಿ ಆರ್ಬಿಐನ ಈ ನಡೆ ಪ್ರಾಮುಖ್ಯ ಪಡೆದಿದೆ. ಕೆಲವು ಆ್ಯಪ್ಗ್ಳು ಸಾಲ ಪಡೆದವರಿಗೆ ನೀಡುವ ಕಿರುಕುಳ, ತತ್ಪರಿಣಾಮವಾಗಿ ಕೆಲವರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ವರದಿಯಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ರಚನೆಯಾಗಿರುವ ಆರ್ಬಿಐ ಸಮಿತಿಯಲ್ಲಿ ಆಂತರಿಕ ಸದಸ್ಯರಷ್ಟೇ ಅಲ್ಲದೇ, ಖಾಸಗಿ ಸೈಬರ್ ಭದ್ರತೆ ಸಂಸ್ಥೆಗಳ ಸದಸ್ಯರೂ ಇರಲಿದ್ದಾರೆ.
ಇಬ್ಬರ ಬಂಧನ: ಈ ಎಲ್ಲ ಬೆಳವಣಿಗೆಗಳ ನಡುವೆಯೇ, ತೆಲಂಗಾಣದ ಆ್ಯಪ್ ಸಾಲ ಜಾಲ ಪ್ರಕರಣ ಸಂಬಂಧ ರಾಚಕೊಂಡ ಪೊಲೀಸರು ಒಬ್ಬ ಚೀನಿ ಪ್ರಜೆ ಸೇರಿದಂತೆ ಇಬ್ಬರನ್ನು ಬುಧವಾರ ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಈ ಬಂಧನ ನಡೆದಿದೆ. ಕಳೆದ ವರ್ಷದ ಡಿಸೆಂಬರ್ನಲ್ಲಿ ಸಾಲ ವಸೂಲಿಗೆ ಬಳಸುತ್ತಿದ್ದ ಪುಣೆ ಮೂಲದ ಕಾಲ್ಸೆಂಟರ್ವೊಂದನ್ನು ಪೊಲೀಸರು ಪತ್ತೆಹಚ್ಚಿದ್ದರು. ಒಟ್ಟಾರೆ ಆ್ಯಪ್ ಸಾಲ ಪ್ರಕರಣದಲ್ಲಿ ನಾಲ್ವರು ಚೀನೀಯರನ್ನು ಬಂಧಿಸಿದಂತಾಗಿದೆ.
ಬಜೆಟ್ನಲ್ಲಿ ತೆರಿಗೆದಾರರಿಗೆ ಸಿಗಲಿದೆಯೇ ಸಿಹಿಸುದ್ದಿ? ;
ಹೊಸದಿಲ್ಲಿ: ಫೆ.1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ನಲ್ಲಿ ತೆರಿಗೆದಾರರಿಗೆ ಯಾವುದೇ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆಯೇ?
ದೇಶದ ಸದ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಕೇಂದ್ರ ಸರಕಾರದ ಮೇಲಿರುವ ಆರ್ಥಿಕ ಹೊರೆಯನ್ನು ಗಮನಿಸಿದರೆ, ಬಜೆಟ್ನಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ಅಥವಾ ಹೊಸ ತೆರಿಗೆ ಕಡಿತ ಘೋಷಿಸುವ ಸಾಧ್ಯತೆ ಇಲ್ಲ ಎಂದು ಸಂಶೋಧನೆ ಮತ್ತು ಸಲಹಾ ಸಂಸ್ಥೆ ಟ್ಯಾಕ್ಸ್ಮನ್ ಹೇಳಿದೆ.
ಆದರೆ ಮತ್ತೂಂದು ಮೂಲದ ಪ್ರಕಾರ, ವೈಯಕ್ತಿಕ ಆದಾಯ ತೆರಿಗೆದಾರನ ತೆರಿಗೆ ವಿನಾಯಿತಿ ಮಿತಿಯನ್ನು ಸರಕಾರವು ಈಗಿರುವ 2.50 ಲಕ್ಷದಿಂದ 5 ಲಕ್ಷ ರೂ.ಗೆ ಏರಿಸುವ ಸಾಧ್ಯತೆಯಿದೆ. ಜನರ ಕೈಯ್ಯಲ್ಲಿ ಹೆಚ್ಚು ಹಣ ಓಡಾಡುತ್ತಿರುವಂತೆ ಮಾಡುವ ಉದ್ದೇಶದಿಂದ ಸರಕಾರ ಈ ಕ್ರಮ ಕೈಗೊಳ್ಳಬಹುದು ಎನ್ನಲಾಗಿದೆ.
ಕಳೆದ ವರ್ಷದ ಆಯವ್ಯಯದಲ್ಲಿ ಸರಕಾರವು ಹೊಸ ಮತ್ತು ಸರಳೀಕೃತ ವೈಯಕ್ತಿಕ ತೆರಿಗೆ ವ್ಯವಸ್ಥೆಯನ್ನು ಘೋಷಿಸಿತ್ತು. ಜತೆಗೆ, ಪ್ರಸ್ತುತ ಆದಾಯ ತೆರಿಗೆ ವ್ಯವಸ್ಥೆ ಹಾಗೂ ಪರ್ಯಾಯ ಹೊಸ ವ್ಯವಸ್ಥೆಯ ನಡುವೆ ಯಾವುದಾದರೂ ಒಂದನ್ನು ಆಯ್ಕೆ ಮಾಡುವ ಅವಕಾಶವನ್ನೂ ತೆರಿಗೆದಾರರಿಗೆ ನೀಡಿತ್ತು. ಆದರೆ ಆದಾಯ ತೆರಿಗೆಯ ಮೂಲ ಸ್ಲಾéಬ್ನಲ್ಲಿ ಬದಲಾವಣೆ ಮಾಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ