ಹಿರಿಯ ನಾಗರಿಕರಿಗೆ ಏರ್ ಇಂಡಿಯಾ ಪ್ರಯಾಣ ದರದಲ್ಲಿ ಶೇ. 50 ರಿಯಾಯಿತಿ: ಇಲ್ಲಿದೆ ಮಾಹಿತಿ
ಏರ್ ಇಂಡಿಯಾ ಟಿಕೆಟ್ ನಲ್ಲಿ 50% ರಿಯಾಯಿತಿ ಪಡೆಯಲು ಹಿರಿಯ ನಾಗರಿಕರು ಮಾಡಬೇಕಾಗಿರುವುದೇನು ಗೊತ್ತೇ?
Team Udayavani, Nov 11, 2019, 8:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ಭಾರತದ ಹಿರಿಯ ನಾಗರಿಕರಿಗೆ ವಿಮಾನ ಪ್ರಯಾಣದಲ್ಲಿ ರಿಯಾಯಿತಿ ನೀಡುವ ಕೊಡುಗೆಯನ್ನು ಏರ್ ಇಂಡಿಯಾ ಸಂಸ್ಥೆ ಪ್ರಕಟಿಸಿದೆ. ಏರ್ ಇಂಡಿಯಾದ ಎಕಾನಮಿ ದರ್ಜೆಯಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರು ಇನ್ನು ಮುಂದೆ ನಿಗದಿತ ಟಿಕೆಟ್ ದರದ ಅರ್ಧದಷ್ಟು ಮೊತ್ತವನ್ನು ಪಾವತಿಸಿದರೆ ಸಾಕು ಎಂದು ಸಂಸ್ಥೆ ತಿಳಿಸಿದೆ. ಹಾಗಾದರೆ ಯೋಜನೆಯ ಪ್ರಯೋಜನ ಪಡೆಯಲು ಹಿರಿಯ ನಾಗರಿಕರು ಮಾಡಬೇಕಾದದ್ದೇನು? ಏನೆಲ್ಲಾ ದಾಖಲೆ ಬೇಕು? ಎಂಬಿತ್ಯಾದಿ ಇಲ್ಲಿದೆ ಮಾಹಿತಿ.
ಭಾರತದ ಪ್ರಜೆ ಆಗಿರಬೇಕು
ಈ ಯೋಜನೆಯನ್ನು ಪಡೆಯಬಯಸುವ ನಾಗರಿಕರು ಭಾರತದ ಪ್ರಜೆಯಾಗಿದ್ದು, ದೇಶದ ಖಾಯಂ ನಿವಾಸಿ ಆಗಿರಬೇಕು. ಪ್ರಯಾಣದ ದಿನಾಂಕದ ವೇಳೆಗೆ 60 ವರ್ಷ ವಯಸ್ಸಾಗಿರುವ ಹಿರಿಯ ನಾಗರಿಕರು ಈ ಸೌಲಭ್ಯ ಬಳಸಿಕೊಳ್ಳಲು ಅರ್ಹರು.
ಯಾವೆಲ್ಲಾ ದಾಖಲೆಗಳಿರಬೇಕು?
ಮತದಾರರ ಗುರುತಿನ ಚೀಟಿ (ವೋಟರ್ ಐಡಿ ಕಾರ್ಡ್), ಪಾಸ್ ಪೋರ್ಟ್, ಚಾಲನಾ ಪರವಾನಿಗಿ (ಡ್ರೈವಿಂಗ್ ಲೈಸೆನ್ಸ್) ಏರ್ ಇಂಡಿಯಾ ನೀಡಿದ ಹಿರಿಯ ನಾಗರಿಕರ ಗುರುತಿನ ಚೀಟಿ ಮತ್ತು ವಯಸ್ಸಿನ ದಾಖಲೆಯನ್ನು ಖಚಿತಪಡಿಸುವ ಅಧಿಕೃತವಾದ ಯಾವುದಾದರೂ ಒಂದು ಗುರುತಿನ ಚೀಟಿ ಹೊಂದಿರಬೇಕು.
ದೇಶದ ಒಳಗೆ ಮಾತ್ರ
ಈ ಸೌಲಭ್ಯದಡಿಯಲ್ಲಿ ಭಾರತದ ಒಳಭಾಗದಲ್ಲಿ ಎಲ್ಲಿ ಬೇಕಾದರೂ ಪ್ರಯಾಣಿಸಬಹುದಾಗಿದ್ದು, ಹಿರಿಯ ನಾಗರಿಕರು ಟಿಕೆಟ್ನ ನಿಗದಿತ ಬೆಲೆಯ ಅರ್ಧದಷ್ಟು ಬೆಲೆ ಪಾವತಿಸಿ ಪ್ರಯಾಣಿಸಬಹುದು.
ಮುಂಗಡ ಕಾಯ್ದಿರಿಸಬೇಕು
ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಇಚ್ಚಿಸುವ ಹಿರಿಯ ನಾಗರಿಕರು ಪ್ರಯಾಣ ಮಾಡ ಬಯಸುವ ಏಳು ದಿನಗಳ ಮುಂಗಡವೇ ಟಿಕೆಟ್ ಖರೀದಿಸಬೇಕು. ಟಿಕೆಟ್ ವಿತರಿಸಿದ ದಿನಾಂಕದಿಂದ ಒಂದು ವರ್ಷದ ವರೆಗೆ ಈ ಟಿಕೆಟ್ ಮಾನ್ಯತೆ ಹೊಂದಿರುತ್ತದೆ.
ಷರತ್ತುಗಳೇನು?
ಚೆಕ್ ಇನ್ ಅಥವಾ ಬೋರ್ಡಿಂಗ್ ಗೇಟ್ ಬಳಿ ಸೂಕ್ತ ಗುರುತಿನ ಚೀಟಿ ಅಥವಾ ದಾಖಲೆ ಇಲ್ಲದಿದ್ದರೆ ಪಾವತಿ ಮಾಡಿದ ಅಷ್ಟು ಮೊತ್ತವನ್ನು ಸಂಸ್ಥೆ ತನ್ನ ವಶಕ್ಕೆ ಪಡೆದುಕೊಳ್ಳತ್ತದೆ. ವಜಾ ಮಾಡಿಕೊಂಡ ಮೊತ್ತವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸುವುದಿಲ್ಲ. ತೆರಿಗೆ ಹಣವನ್ನು ಮಾತ್ರ ನೀಡಲಾಗುತ್ತದೆ. ಚೆಕ್ ಇನ್ ಮತ್ತು ಬೋರ್ಡಿಂಗ್ ದ್ವಾರದ ಬಳಿ ಗುರುತಿನ ದಾಖಲೆ ತೋರಿಸದಿದ್ದರೆ ವಿಮಾನ ಏರುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಏರ್ ಇಂಡಿಯಾ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ