ಕೋವಿಡ್ 19 ಎಫೆಕ್ಟ್: 2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿದರ ಇಳಿಕೆ ಸಾಧ್ಯತೆ?
ಕೇಂದ್ರೀಯ ಮಂಡಳಿ ಟ್ರಸ್ಟಿಗಳು ಗುರುವಾರ(ಮಾರ್ಚ್ 04) ಸಭೆ ಸೇರಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ
Team Udayavani, Mar 3, 2021, 3:21 PM IST
ನವದೆಹಲಿ: ಹೊಸ ಬೆಳವಣಿಗೆಯಲ್ಲಿ 2021ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ(ಇಪಿಎಫ್)ಯ ಬಡ್ಡಿದರ ಮತ್ತೆ ಇಳಿಕೆಯಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ವಿಚಿತ್ರ: ಶಿರಾದಲ್ಲಿ ಈ ಹುಳ ಕೂಡಾ ಒಂದು ಆಹಾರ, ಪುರಾಣಕ್ಕೂ ಇದಕ್ಕೂ ಏನು ಸಂಬಂಧ?
ಈಗಾಗಲೇ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿಜಿ ದರ ಏರಿಕೆಯಾಗುತ್ತಲೇ ಇದೆ. ಇದೀಗ ಉದ್ಯೋಗಿಗಳ ಭವಿಷ್ಯ ನಿಧಿಯ ಬಡ್ಡಿದರ ಕೂಡಾ ಇಳಿಕೆಯಾಗುವ ಸಾಧ್ಯತೆ ಇದ್ದು, ಒಂದು ವೇಳೆ ಇದು ಜಾರಿಗೊಂಡರೆ ಸುಮಾರು 6 ಕೋಟಿಗೂ ಅಧಿಕ ಸಂಬಳ ಪಡೆಯುವ ವರ್ಗಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ವರದಿ ತಿಳಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಇಪಿಎಫ್ ಖಾತೆದಾರರು ಕಳೆದ ವರ್ಷದ ಬಡ್ಡಿದರವನ್ನು ಪಡೆದಿಲ್ಲ, ಇದೀಗ ಬಡ್ಡಿದರ ಇಳಿಕೆಯಾದರೆ ಮತ್ತಷ್ಟು ನಷ್ಟವಾಗಲಿದೆ ಎಂಬುದು ನೌಕರರ ಆತಂಕವಾಗಿದೆ ಎಂದು ವರದಿ ವಿವರಿಸಿದೆ.
ಮೂಲಗಳ ಪ್ರಕಾರ, ಕೋವಿಡ್ ಸಂದರ್ಭದಲ್ಲಿ ಬಹುಸಂಖ್ಯೆಯ ಜನರು ಇಪಿಎಫ್ ಹಣ ತೆಗೆದಿದ್ದು, ಇದರಿಂದ ಭವಿಷ್ಯ ನಿಧಿಯ ಸಂಗ್ರಹ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ನೌಕರರ ಭವಿಷ್ಯ ನಿಧಿ ಇಲಾಖೆ(ಇಪಿಎಫ್ ಒ) ಇಪಿಎಫ್ ನ ಬಡ್ಡಿದರ ಕಡಿತಗೊಳಿಸಲು ನಿರ್ಧರಿಸಿದೆ ಎಂದು ವರದಿ ತಿಳಿಸಿದೆ.
ಇಪಿಎಫ್ ನ ಬಡ್ಡಿದರ ಇಳಿಕೆಗೆ ಸಂಬಂಧಿಸಿದಂತೆ ಇಪಿಎಫ್ ಒ ಕೇಂದ್ರೀಯ ಮಂಡಳಿ ಟ್ರಸ್ಟಿಗಳು ಗುರುವಾರ(ಮಾರ್ಚ್ 04) ಸಭೆ ಸೇರಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.
2020ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ ಇಲಾಖೆ ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿರುವುದಾಗಿ ತಿಳಿಸಿದೆ. ಆದರೆ ಬಡ್ಡಿದರಕ್ಕೆ ಸಂಬಂಧಿಸಿದಂತೆ ಇಪಿಎಫ್ ಒ ಟ್ರಸ್ಟಿ ಕೆಇ ರಘುನಾಥನ್ ಯಾವುದೇ ಮಾಹಿತಿ ನೀಡಿಲ್ಲ ಎಂದು ಜೀ ನ್ಯೂಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು