ಎಟಿಎಂನಲ್ಲಿ ಹಣವಿಲ್ಲದಿದ್ದರೆ ಬ್ಯಾಂಕ್‌ಗಳಿಗೆ ದಂಡ

ಶಾಖೆಗಳಿಂದ ನಗದು ವಿಥ್‌ಡ್ರಾ ಪ್ರಮಾಣ ಕಡಿಮೆ ಗೊಳ್ಳಲಿದೆ ಎಂಬ ಲೆಕ್ಕಾಚಾರ ಆರ್‌ಬಿಐನದ್ದಾಗಿದೆ. 

Team Udayavani, Sep 20, 2021, 9:20 AM IST

ಎಟಿಎಂನಲ್ಲಿ ಹಣವಿಲ್ಲದಿದ್ದರೆ ಬ್ಯಾಂಕ್‌ಗಳಿಗೆ ದಂಡ

ನಷ್ಟದಲ್ಲಿರುವ ಕೆಲವೊಂದು ಬ್ಯಾಂಕ್‌ಗಳನ್ನು ಲಾಭದಲ್ಲಿರುವ ಬ್ಯಾಂಕ್‌ಗಳೊಂದಿಗೆ ವಿಲೀನಗೊಳಿಸಿದ ಬಳಿಕ ಎಟಿಎಂಗಳು ಕೂಡ ಬರಿದಾಗತೊಡಗಿವೆ. ಹಣದ ತುರ್ತು ಆವಶ್ಯಕತೆ ಇದ್ದಾಗ ಎಟಿಎಂ ಕೇಂದ್ರಕ್ಕೆ ತೆರಳಿದ ವೇಳೆ ಹಣವಿಲ್ಲ ಎಂಬ ಬೋರ್ಡ್‌ ಗಳು ಮಾಮೂಲಿಯಾಗಿವೆ. ಇದರಿಂದಾಗಿ ಜನರು ಹಣಕ್ಕಾಗಿ ಒಂದು ಎಟಿಎಂನಿಂದ ಇನ್ನೊಂದು ಎಟಿಎಂಗಳಿಗೆ ಅಲೆದಾಡುವಂತಾಗಿದೆ. ಈ ಸಂಬಂಧ ಬ್ಯಾಂಕ್‌ಗಳ ಗ್ರಾಹಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ  ಭಾರತೀಯ ರಿಸರ್ವ್‌ ಬ್ಯಾಂಕ್‌ ಎಟಿಎಂಗಳಿಗೆ ಹಣ ತುಂಬಲು ವಿಫ‌ಲವಾದ ಬ್ಯಾಂಕ್‌ಗಳಿಗೆ ದಂಡ ವಿಧಿಸಲು ನಿರ್ಧರಿಸಿದೆ.

ಗ್ರಾಹಕರಿಗೆ ಏನು ಲಾಭ?: 

ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ನಗದು ತುಂಬಿಸುವ ಸೇವೆಯನ್ನು ನಿರ್ವಹಿಸುತ್ತಿರುವ ಸಂಸ್ಥೆ ಅಥವಾ ಕಂಪೆನಿಗಳು ಎಟಿಎಂಗಳ ಮರುಪೂರಣದ ಕುರಿತು ಆರ್‌ಬಿಐನ ಹೊಸ ಮಾರ್ಗಸೂಚಿಯನ್ನು ಅನುಸರಿ ಸಲೇಬೇಕಿದೆ. ಸಾರ್ವಜನಿಕರಿಗೆ ಅಡೆತಡೆಯಿಲ್ಲದೆ ಸಾಕಷ್ಟು ಪ್ರಮಾಣದಲ್ಲಿ ನಗದು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. ಇದಕ್ಕಾಗಿ ಎಟಿಎಂಗಳಲ್ಲಿ ನಗದು ನಿರ್ವಹಣೆಯನ್ನು ಮುನ್ಸೂಚಿಸಲು ಬ್ಯಾಂಕ್‌ಗಳು ಡೇಟಾ ಚಾಲಿತ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.

ಯಾಕಾಗಿ ಈ ನಿಯಮ? :

ಎಟಿಎಂ ಯಂತ್ರಗಳಿಗೆ ನಗದು ತುಂಬಿಸಲು ಆರ್‌ಬಿಐ ರೂಪಿಸಿರುವ ಹೊಸ ನಿಯಮಗಳನ್ನು ಬ್ಯಾಂಕ್‌ಗಳು ಪಾಲನೆ ಮಾಡದೇ ಇದ್ದಲ್ಲಿ ದಂಡ ತೆರಬೇಕಾಗುತ್ತದೆ. ಈ ಹೊಸ ನಿಯಮವು ಅಕ್ಟೋಬರ್‌ 1ರಂದು ಜಾರಿಯಾಗಲಿದ್ದು, ಎಟಿಎಂಗಳಲ್ಲೇ ಸಾಕಷ್ಟು ನಗದು ಸಾರ್ವಜನಿಕರಿಗೆ ಲಭ್ಯವಾಗಲಿದೆ. ಈ ಮೂಲಕ ಬ್ಯಾಂಕ್‌ ಶಾಖೆಗಳಿಂದ ನಗದು ವಿಥ್‌ಡ್ರಾ ಪ್ರಮಾಣ ಕಡಿಮೆ ಗೊಳ್ಳಲಿದೆ ಎಂಬ ಲೆಕ್ಕಾಚಾರ ಆರ್‌ಬಿಐನದ್ದಾಗಿದೆ.  ಅಷ್ಟು ಮಾತ್ರವಲ್ಲದೆ ದೇಶ ದಲ್ಲಿ ಡಿಜಿಟಲ್‌ ವ್ಯವಹಾರಕ್ಕೆ ಸರಕಾರ ಹೆಚ್ಚಿನ ಉತ್ತೇಜನ ನೀಡುತ್ತಿರುವುದರಿಂದ ಇದರ ಭಾಗವಾಗಿ ಎಟಿಎಂ ಕೇಂದ್ರಗಳನ್ನು ಮುಚ್ಚಲು ಸರಕಾರ ಮುಂದಾಗಿದೆ ಎಂಬ ಅನುಮಾನ ಜನರನ್ನು ಕಾಡತೊಡಗಿತ್ತು. ಇದೀಗ ಆರ್‌ಬಿಐ ಎಟಿಎಂಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಗದು ಲಭ್ಯವಿರುವುದನ್ನು ಖಾತರಿಪಡಿಸಬೇಕು ಎಂದು ಕಟ್ಟಾಜ್ಞೆ ಹೊರಡಿಸುವ ಮೂಲಕ ಜ®‌ರಲ್ಲಿನ ಅನುಮಾನವನ್ನು ದೂರ ಮಾಡಿದೆ.

ದಂಡದ ಪ್ರಮಾಣ ಎಷ್ಟು? :

ಅ. 1ರಿಂದ ಒಂದು ತಿಂಗಳಲ್ಲಿ ಎಟಿಎಂಗಳು ಒಟ್ಟು 10 ಗಂಟೆಗಳ ಕಾಲ ನಗದು ರಹಿತವಾಗಿದ್ದರೆ ಆರ್‌ಬಿಐ ಬ್ಯಾಂಕ್‌ಗಳಿಗೆ ದಂಡ ವಿಧಿಸುತ್ತದೆ. ದಂಡದ ಪ್ರಮಾಣಕ್ಕೆ ಸಂಬಂಧಿಸಿ ತಿಂಗಳಲ್ಲಿ 10 ಗಂಟೆಗಳಿಗಿಂತ ಹೆಚ್ಚಿನ ಅವಧಿಯಲ್ಲಿ ಯಾವುದೇ ಎಟಿಎಂನಲ್ಲಿ ನಗದು ಇಲ್ಲದೇ ಇದ್ದರೆ ಆಗ 10 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಆರ್‌ಬಿಐ ಸ್ಪಷ್ಟ ಸೂಚನೆಯನ್ನು ನೀಡಿದೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.