ರಘುರಾಮ್ ರಾಜನ್, ಸಿಂಗ್ ಕಾಲದಲ್ಲಿ ಬ್ಯಾಂಕ್ ಸಂಕಷ್ಟ
Team Udayavani, Oct 17, 2019, 5:49 AM IST
ನ್ಯೂಯಾರ್ಕ್: ಆರ್ಬಿಐ ಗವರ್ನರ್ ಆಗಿ ರಘುರಾಮ್ ರಾಜನ್ ಮತ್ತು ಪ್ರಧಾನಿ ಯಾಗಿ ಮನಮೋಹನ ಸಿಂಗ್ ಅಧಿಕಾರ ದಲ್ಲಿದ್ದಾಗಲೇ ಸರಕಾರಿ ಸ್ವಾಮ್ಯದ ಕಂಪೆನಿಗಳು ಅತ್ಯಂತ ಸಂಕಷ್ಟದ ದಿನಗಳನ್ನು ಕಳೆದಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದಾಗಿ ಸಂಕಷ್ಟದಲ್ಲಿರುವ ಬ್ಯಾಂಕ್ಗಳನ್ನು ರಕ್ಷಿಸುವುದೇ ಈ ಸರಕಾರದ ಆದ್ಯತೆ ಯಾಗಿದೆ ಎಂದಿದ್ದಾರೆ.
ಸರಕಾರಿ ಸ್ವಾಮ್ಯದ ಬ್ಯಾಂಕುಗಳು ಮರು ಪಾವತಿಯಾಗದ ಸಾಲದ ಸುಳಿಗೆ ಸಿಲುಕಿದ್ದು, ಅವುಗಳನ್ನು ಪುನಶ್ಚೇತನಗೊಳಿಸುವ ಪ್ರಯತ್ನವನ್ನು ನಮ್ಮ ಸರಕಾರ ನಡೆಸಿದೆ ಎಂದು ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ಉಪನ್ಯಾಸದ ವೇಳೆ ಹೇಳಿದ್ದಾರೆ. ಈಗ ಬ್ಯಾಂಕ್ಗಳು ಇರುವ ಸ್ಥಿತಿ ರಾತ್ರಿ ಬೆಳಗಾಗುವುದರೊಳಗೆ ಉಂಟಾ ದದ್ದಲ್ಲ. ಇದು ಹಲವು ವರ್ಷಗಳಿಂದ ಉಂಟಾದ ಪರಿಸ್ಥಿತಿ. ನನಗೆ ರಘುರಾಮ್ ರಾಜನ್ ಕುರಿತು ಗೌರವವಿದೆ. ಆದರೆ, ಅವರ ಅವಧಿಯಲ್ಲಿ ಬ್ಯಾಂಕ್ಗಳು ರಾಜಕೀಯ ಮುಖಂಡರ ದೂರವಾಣಿ ಕರೆಯನ್ನು ಆಧರಿಸಿ ಸಾಲ ನೀಡಿವೆ. ಹೀಗಾಗಿ ಈಗಲೂ ಸರಕಾರದ ಹಣವನ್ನೇ ಈ ಬ್ಯಾಂಕ್ಗಳು ನಂಬಿಕೊಂಡಿವೆ ಎಂದಿದ್ದಾರೆ.
370ನೇ ವಿಧಿಯಿಂದ ಮಾನವ ಹಕ್ಕು ಉಲ್ಲಂಘನೆ: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಅನಂತರ ಮಾನವ ಹಕ್ಕು ಉಲ್ಲಂಘನೆ ಆರೋಪಗಳು ಕೇಳಿಬರುತ್ತಿವೆ. ಆದರೆ 370ನೇ ವಿಧಿಯೇ ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿತ್ತು. ಈ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ