ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 3 ಸಾವಿರ ಕೋಟಿ ರೂ. ನಷ್ಟ : ಕೇಂದ್ರ
Team Udayavani, Jul 21, 2021, 12:57 PM IST
ನವ ದೆಹಲಿ : ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದಾಗಿ ಕೇಂದ್ರ ಸರ್ಆರ ಕೋಟ್ಯಾಂತರ ರೂಪಾಯಿಗಳಷ್ಟು ನಷ್ಟ ಅನುಭವಿಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
ಇಲ್ಲಿಯವರೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 8 ಕಂತುಗಳನ್ನು ರೈತರ ಖಾತೆಗೆ ಹಾಕಲಾಗಿದೆ. ಆದರೆ, ಈ ಯೋಜನೆಯ ನಿಧಿಯು 42 ಲಕ್ಷಕ್ಕೂ ಹೆಚ್ಚು ಅನರ್ಹ ರೈತರ ಖಾತೆ ಸೇರಿರುವ ಅಂಶ ಬೆಳೆಕಿಗೆ ಬಂದಿದೆ. ಈ ಕಾರಣದಿಂದಾಗಿ ಸರ್ಕಾರಕ್ಕೆ 3 ಸಾವಿರ ಕೋಟಿ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ.
ಇದನ್ನೂ ಓದಿ : ಕೋವಿಡ್ ನಿಂದ ಬಳಲಿದ ಜಗತ್ತಿಗೆ ಟೋಕಿಯೋ ಒಲಿಂಪಿಕ್ಸ್ ಆಶಾವಾದದ ಸಂದೇಶವಾಗಲಿ : ಟೆಡ್ರೊಸ್
ಸಂಸತ್ತಿನಲ್ಲಿ ಖ ಬಗ್ಗೆ ಸರ್ಕಾರ ಮಾಹಿತಿ ನೀಡಿದ್ದು, ಅನರ್ಹ ರೈತರ ಖಾತೆ ಸೇರಿರುವ ಹಣವನ್ನು ವಸೂಲಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದೆ.
ಯಾವ ಯಾವ ರಾಜ್ಯಗಳ ಅನರ್ಹ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ?
ಅಸ್ಸಾಂನಲ್ಲಿ ಈ ರೀತಿಯ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲಿ 554 ಕೋಟಿ ರೂ.ಗಳಿಗಿಂತ ಹಣ 8 ಲಕ್ಷ 35 ಸಾವಿರಕ್ಕೂ ಹೆಚ್ಚು ಅನರ್ಹ ರೈತರ ಖಾತೆ ಸೇರಿವೆ. ಪಂಜಾಬ್ ನಲ್ಲಿ ಸುಮಾರು 437 ಕೋಟಿ ರೂ.ಗಳನ್ನು ಅನರ್ಹ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇನ್ನು, ಮಹಾರಾಷ್ಟ್ರದ ಅನರ್ಹ ರೈತರ ಖಾತೆಗಳಿಗೆ 357 ಕೋಟಿ ರೂ. ಸಂದಾಯವಾಗಿದೆ ಎಂದು ತಿಳಿದು ಬಂದಿದೆ.
42 ಲಕ್ಷಕ್ಕೂ ಹೆಚ್ಚು ಜನರು ಕಿಸಾನ್ ಸಮ್ಮನ್ ನಿಧಿಗೆ ಅನರ್ಹರಾಗಿದ್ದು, ಈ ಪೈಕಿ ಕೆಲವು ರೈತರಂತೂ ಆದಾಯ ತೆರಿಗೆ ವ್ಯಾಪ್ತಿಗೆ ಬರುವವರು ಎಂದು ಕೃಷಿ ಸಚಿವಾಲಯ ಮಾಹಿತಿ ನೀಡಿದೆ. ರೈತರ ವಿಳಾಸ ರೈತರ ಆಧಾರ್, ಪಿಎಂಎಸ್, ಆದಾಯ ತೆರಿಗೆ ಡೇಟಾ ಬೇಸ್ ಪರಿಶೀಲನೆಯ ಸಂದರ್ಭದಲ್ಲಿ ಈ ವಂಚನೆ ಸಚಿವಾಲಯದ ಗಮನಕ್ಕೆ ಬಂದಿದೆ. ಬರುವವರು ಎನ್ನಲಾಗಿದೆ.
ಇದನ್ನೂ ಓದಿ : ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್: ಏನಿದು ಹೊಸ ಟ್ವಿಸ್ಟ್?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ