ಚೀನದ ಮೂಗುದಾರ ಬಿಗಿ ; ನೆರೆದೇಶದ 371 ವಸ್ತುಗಳ ಗುಣಮಟ್ಟ ಪರೀಕ್ಷೆ ಕಡ್ಡಾಯ


Team Udayavani, Jul 29, 2020, 7:00 AM IST

ಚೀನದ ಮೂಗುದಾರ ಬಿಗಿ ; ನೆರೆದೇಶದ 371 ವಸ್ತುಗಳ ಗುಣಮಟ್ಟ ಪರೀಕ್ಷೆ ಕಡ್ಡಾಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಚೀನದಿಂದ ಆಮದಾಗುವ ವಸ್ತುಗಳ ಮೇಲಣ ನಿಗಾ ಹೆಚ್ಚಿಸುವ ಮೂಲಕ ಕಮ್ಯೂನಿಸ್ಟ್‌ ದೇಶಕ್ಕೆ ಈಗಾಗಲೇ ತೊಡಿಸಿರುವ ಮೂಗುದಾರವನ್ನು ಇನ್ನಷ್ಟು ಬಿಗಿಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ.

ಇನ್ನು ಮುಂದೆ ಚೀನದಿಂದ ಆಮದಾಗುವ ರಬ್ಬರ್‌ ಅಥವಾ ಪ್ಲಾಸ್ಟಿಕ್‌ ಬೊಂಬೆಗಳು, ಉಕ್ಕಿನ ಪಟ್ಟಿಗಳು, ದೂರವಾಣಿ ಸಲಕರಣೆಗಳು, ದೈತ್ಯ ಯಂತ್ರೋಪಕರಣ, ಪೇಪರ್‌ ವಸ್ತುಗಳು, ಗಾಜಿನ ಸಾಮಗ್ರಿಗಳ ಸಹಿತ ಸುಮಾರು 371 ವಸ್ತುಗಳ ಗುಣಮಟ್ಟ ಭಾರತೀಯ ಮಾನದಂಡಗಳಿಗೆ (ಐಎಸ್‌) ಅನುಗುಣವಾಗಿರಬೇಕೆಂಬ ನಿಯಮವನ್ನು ಮುಂದಿನ ಮಾರ್ಚ್‌ನಿಂದ ಜಾರಿಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಮೂಲಕ ಭಾರತೀಯ ಸಣ್ಣ ಉತ್ಪನ್ನಗಳ ಮಾರುಕಟ್ಟೆಯಲ್ಲಿ ಚೀನ ಹೊಂದಿರುವ ಹಿಡಿತವನ್ನು ತಪ್ಪಿಸುವ ಪ್ರಯತ್ನಕ್ಕೆ ಕೈಯಿಕ್ಕಿದೆ.

ಕೇಂದ್ರ ವಾಣಿಜ್ಯ ಸಚಿವಾಲಯವು ಕಳೆದ ವರ್ಷವೇ ಚೀನ ಮತ್ತು ಇನ್ನಿತರ ದೇಶಗಳಿಂದ ಆಮದಾಗುತ್ತಿದ್ದ ಸುಮಾರು 371 ವಸ್ತುಗಳನ್ನು ಪಟ್ಟಿ ಮಾಡಿದ್ದು, ಅವುಗಳ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.
ಉತ್ತಮ ಗುಣಮಟ್ಟದ ವಸ್ತುಗಳು ಮಾತ್ರ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಬೇಕೆಂದು ನಿರ್ಧರಿಸಿದೆ. ಇತ್ತೀಚೆಗೆ ರೂಪಿತವಾಗಿರುವ ಆತ್ಮನಿರ್ಭರ ಭಾರತ ನಿರ್ಮಾಣ ಪರಿಕಲ್ಪನೆಯಡಿ ಇಂಥ ಸಾಮಗ್ರಿಗಳನ್ನು ಭಾರತದಲ್ಲೇ ಉತ್ಪಾದಿಸಲು ಆದ್ಯತೆ ನೀಡಲಾಗುತ್ತಿದೆ.

ಚೀನ ಮತ್ತು ಇನ್ನಿತರ ರಾಷ್ಟ್ರಗಳಿಂದ ಬರುವ ಸಾಮಗ್ರಿಗಳು ನವಿ ಮುಂಬಯಿಯ ಜವಾಹರ ಲಾಲ್‌ ನೆಹರೂ ಬಂದರು, ಗುಜರಾತ್‌ನ ಕಛ್ ಜಿಲ್ಲೆಯ ಕಾಂಡ್ಲಾ ಬಂದರುಗಳ ಮೂಲಕವೇ ಭಾರತಕ್ಕೆ ಬರುತ್ತವೆ. ಹಾಗಾಗಿ ಮುಂದಿನ ಮಾರ್ಚ್‌ನಿಂದ ಅಧಿಕಾರಿಗಳನ್ನು ಆ ಬಂದರುಗಳಲ್ಲಿ ನಿಯೋಜಿಸಿ ಸಾಮಗ್ರಿಗಳ ಗುಣಮಟ್ಟ ಪರಿಶೀಲಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಬ್ಯೂರೋ ಆಫ್ ಇಂಡಿಯನ್‌ ಸ್ಟ್ಯಾಡರ್ಡ್ಸ್‌ (ಬಿಐಎಸ್‌) ಮಹಾ ನಿರ್ದೇಶಕ ಪ್ರಮೋದ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಲಡಾಖ್‌ ಪರಿಸ್ಥಿತಿ ಬದಲಿಸಲಿದೆ ಚಳಿಗಾಲ
ಹಲವಾರು ಸುತ್ತಿನ ಮಾತುಕತೆಗಳ ಅನಂತರವೂ ಲಡಾಖ್‌ನಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಸಂಪೂರ್ಣ ಉಪಶಮನವಾಗಿಲ್ಲ. ಆದರೆ ಮುಂಬರುವ ಚಳಿಗಾಲ ಅಲ್ಲಿನ ಭೌಗೋಳಿಕ ಸ್ಥಿತಿಗತಿಯ ಜತೆಗೆ ರಾಜಕೀಯ ಚಿತ್ರಣವನ್ನೂ ಬದಲಾಯಿಸಲಿದೆ ಎನ್ನಲಾಗಿದೆ. ಸಮುದ್ರ ಮಟ್ಟಕ್ಕಿಂತ 16 ಸಾವಿರ ಅಡಿಗಳಷ್ಟು ಎತ್ತರದಲ್ಲಿರುವ ಅಲ್ಲಿ ಮುಂದಿನ ತಿಂಗಳಿನಿಂದ ಚಳಿ ತೀವ್ರವಾಗಲಿದೆ.

ಈಗಾಗಲೇ ಲಡಾಖ್‌ ಮತ್ತು ಸುತ್ತಲಿನ ನದಿ, ಸರೋವರಗಳು ಹೆಪ್ಪುಗಟ್ಟಲಾರಂಭಿಸಿವೆ. ಮುಂದಿನ ತಿಂಗಳು ಹಿಮಪಾತ ಕೂಡ ಅತ್ಯಧಿಕವಾಗಲಿದೆ. ಈಗಾಗಲೇ ಅಲ್ಲಿರುವ ಸೈನಿಕರು ಆಮ್ಲಜನಕದ ಕೊರತೆ (ಹೈಪೋಕ್ಸಿಯಾ) ಮತ್ತು ಅತಿ ಶೀತ (ಹೈಪೋಥರ್ಮಿಯಾ) ಬಾಧೆಗಳಿಗೆ ತುತ್ತಾಗಿದ್ದಾರೆ. ಚಳಿಗಾಲ ಇದನ್ನು ಇನ್ನೂ ತೀವ್ರವಾಗಿಸಲಿದೆ.

ಸೋರ್ಸ್‌ ಕೋಡ್‌ ಕಡ್ಡಾಯ?
ಭಾರತೀಯ ದೂರವಾಣಿ ಕ್ಷೇತ್ರದ ಖಾಸಗಿ ಕಂಪೆನಿಗಳು ದೂರವಾಣಿ ಪರಿಕರಗಳನ್ನು ಚೀನದಿಂದ ಆಮದು ಮಾಡಿಕೊಳ್ಳುವುದಕ್ಕೆ ಕೂಡ ಕಡಿವಾಣ ಹಾಕಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದಕ್ಕಾಗಿ ವಿದೇಶಗಳಿಂದ ಆಮದಾಗುವ ದೂರವಾಣಿ ಪರಿಕರಗಳಿಗೆ ಮ್ಯಾಂಡೇಟರಿ ಟೆಸ್ಟಿಂಗ್‌ ಆ್ಯಂಡ್‌ ಸರ್ಟಿಫಿಕೇಶನ್‌ ಆಫ್ ಟೆಲಿಕಾಂ ಇಕ್ವಿಪ್‌ಮೆಂಟ್‌ (ಎಂಟಿಸಿಟಿಇ) ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.

ಈ ನಿಯಮ ಜಾರಿಯಾದರೆ ಭಾರತದ ಖಾಸಗಿ ದೂರವಾಣಿ ಕಂಪೆನಿಗಳು ಆಮದು ಸಾಮಗ್ರಿಗಳ ಸೋರ್ಸ್‌ ಕೋಡ್ ಗಳನ್ನು ಸರಕಾರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು. ಜತೆಗೆ ಆ ಸಾಮಗ್ರಿಗಳನ್ನು ಥರ್ಡ್‌ ಪಾರ್ಟಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೊಳಪಡಿಸಿ, ಮೂಲ, ಗುಣಮಟ್ಟ ಸಾಬೀತಾದ ಅನಂತರವಷ್ಟೇ ಆಮದು ಮಾಡಿಕೊಳ್ಳಲು ಅನುಮತಿ ಸಿಗುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.