2020 ಬಜೆಟ್ ; ಪಾತಾಳಕ್ಕೆ ಕುಸಿದ ಮುಂಬೈ ಶೇರುಪೇಟೆ, ಹೂಡಿಕೆದಾರರಿಗೆ 4.1 ಲಕ್ಷ ಕೋಟಿ ನಷ್ಟ
ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬಜೆಟ್ ನಲ್ಲಿ ಲಾಭಾಂಶ ವಿತರಣಾ ತೆರಿಗೆ (ಡಿಡಿಟಿ) ತೆಗೆದು ಹಾಕುವ ಕುರಿತು ಪ್ರಸ್ತಾಪಿಸಲಾಗಿತ್ತು.
Team Udayavani, Feb 1, 2020, 4:53 PM IST
ಮುಂಬೈ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡಿಸಿದ ಬೆನ್ನಲ್ಲೇ ಮುಂಬೈ ಚಿನಿವಾರ ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಪಾತಾಳಕ್ಕೆ ಕುಸಿದ ಪರಿಣಾಮ ಹೂಡಿಕೆದಾರರಿಗೆ 4.1 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ವರದಿ ತಿಳಿಸಿದೆ.
ಬಜೆಟ್ ಮಂಡನೆ ನಂತರ ಮುಂಬೈ ಶೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ ಬರೋಬ್ಬರಿ 1000 ಅಂಕಗಳ ಭಾರೀ ಕುಸಿತ ಕಾಣುವ ಮೂಲಕ 39,728.49 ಅಂಕಗಳೊಂದಿಗೆ ವ್ಯವಹಾರ ಮುಕ್ತಾಯ ಕಂಡಿದೆ.
ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ 366 ಅಂಕಗಳಷ್ಟು ಕುಸಿತ ಕಾಣುವ ಮೂಲಕ 11,668.85 ಅಂಕಗಳೊಂದಿಗೆ ವಹಿವಾಟು ಅಂತ್ಯ ಕಂಡಿದೆ. ಇದರೊಂದಿಗೆ ಬಿಎಸ್ ಇ ಮಾರುಕಟ್ಟೆ ಮೌಲ್ಯ 156.50 ಲಕ್ಷ ಕೋಟಿ ರೂಪಾಯಿಯಿಂದ 152.4 ಕೋಟಿಗೆ ರೂಪಾಯಿಗೆ ಇಳಿಕೆಯಾಗಿದೆ.
ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬಜೆಟ್ ನಲ್ಲಿ ಲಾಭಾಂಶ ವಿತರಣಾ ತೆರಿಗೆ (ಡಿಡಿಟಿ) ತೆಗೆದು ಹಾಕುವ ಕುರಿತು ಪ್ರಸ್ತಾಪಿಸಲಾಗಿತ್ತು. ಇದರಿಂದ ಕಂಪನಿಗಳು ಶೇರುದಾರರಿಗೆ ಹೆಚ್ಚಿನ ಪಾವತಿ ಮಾಡಬೇಕಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು