ಕರಾವಳಿಗೆ ನೀಲಿ ಆರ್ಥಿಕತೆ: ಮೋದಿ

ಕೊಚ್ಚಿ-ಮಂಗಳೂರು ಸಿಎನ್‌ಜಿ ಕೊಳವೆ ಮಾರ್ಗ ಲೋಕಾರ್ಪಣೆ

Team Udayavani, Jan 6, 2021, 12:37 AM IST

ಕರಾವಳಿಗೆ ನೀಲಿ ಆರ್ಥಿಕತೆ: ಮೋದಿ

ಪ್ರಧಾನಿ ಮೋದಿ ಸಿಎನ್‌ಜಿ ಪೈಪ್‌ಲೈನ್‌ ಉದ್ಘಾಟಿಸಿದರು.

ಮಂಗಳೂರು/ ಹೊಸದಿಲ್ಲಿ: ಕರಾವಳಿ ನಗರಗಳಲ್ಲಿ ನೀಲಿ ಆರ್ಥಿಕತೆ (ಬ್ಲೂ ಎಕಾನಮಿ) ಬೆಳೆಸುವ ಸಂಕಲ್ಪವಿದ್ದು, ಈ ನಿಟ್ಟಿನಲ್ಲಿ ಸಮಗ್ರ ಯೋಜನೆಗಳನ್ನು “ಆತ್ಮನಿರ್ಭರ ಭಾರತ’ ಯೋಜನೆಯಡಿ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಂಗಳೂರು-ಕೊಚ್ಚಿ ಮಧ್ಯೆ 450 ಕಿ.ಮೀ. ನೈಸರ್ಗಿಕ ಅನಿಲ (ಸಿಎನ್‌ಜಿ) ಸರಬರಾಜು ಕೊಳವೆ ಮಾರ್ಗವನ್ನು ಮಂಗಳವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಬಹುವಿಧ ಸಂಪರ್ಕ, ಕರಾವಳಿ ರಸ್ತೆ ನಿರ್ಮಾಣ ಇತ್ಯಾದಿಗೆ ಒತ್ತು ನೀಡಲಾಗುವುದು ಎಂದರು.

ಕರಾವಳಿ ಪರಿಸರವನ್ನು ಸಂರಕ್ಷಿಸುವುದಕ್ಕೆ ಸರಕಾರ ಬದ್ಧವಾಗಿದೆ. ಆಳ ಸಮುದ್ರ ಮೀನುಗಾರಿಕೆಗೆ ಸಹಕಾರ, ಸುಲಭ ಮತ್ತು ಅಗ್ಗದ ಸಾಲವನ್ನು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ನೀಡುವ ಉದ್ದೇಶ ವಿದೆ. ಕರಾವಳಿಯನ್ನು ನೆಮ್ಮದಿ ಬದುಕು- ನೆಮ್ಮದಿಯ ವ್ಯಾಪಾರಗಳಿಗೆ ಮಾದರಿಯಾಗಿ ಪರಿಗಣಿಸಲಾಗುವುದು ಎಂದರು.

ಒಂದು ರಾಷ್ಟ್ರ- ಒಂದು ಗ್ಯಾಸ್‌ ಗ್ರಿಡ್‌
ದೇಶಕ್ಕೆ ಒಂದು ಗ್ಯಾಸ್‌ ಗ್ರಿಡ್‌ ರೂಪಿಸುವ ನಿಟ್ಟಿನಲ್ಲಿ ಹಲವಾರು ನೀತಿಗಳನ್ನು ಸರಕಾರ ರೂಪಿಸುತ್ತಿದೆ. ಒಟ್ಟು ಇಂಧನದ ಪೈಕಿ ನೈಸರ್ಗಿಕ ಅನಿಲದ ಪಾಲನ್ನು ಶೇ. 6ರಿಂದ ಶೇ. 15ಕ್ಕೆ ಏರಿಸುವ ಗುರಿ ಇದೆ. ಇದರ ಭಾಗವಾಗಿ ಕೊಚ್ಚಿನ್‌ – ಮಂಗಳೂರು ಪೈಪ್‌ಲೈನ್‌ ಸಾಕಾರಗೊಂಡಿದೆ ಎಂದರು.

ಮಾಲಿನ್ಯ ಪ್ರಮಾಣ ಕುಗ್ಗುವ ವಿಶ್ವಾಸ
ನೈಸರ್ಗಿಕ ಅನಿಲ ಸಂಪರ್ಕದಿಂದ ಎರಡೂ ರಾಜ್ಯಗಳ ಜನರ ಬದುಕಿನ ನೆಮ್ಮದಿ ಹೆಚ್ಚಲಿದ್ದು, ಬಡವರು, ಮಧ್ಯಮ ವರ್ಗ ಮತ್ತು ಉದ್ದಿಮೆದಾರರಿಗೆ ಇಂಧನ ವೆಚ್ಚ ಕಡಿಮೆಯಾಗಲಿದೆ. ಇದು ಎಂಆರ್‌ಪಿಎಲ್‌ಗೆ ಶುದ್ಧ ಇಂಧನ ಪೂರೈಸಲಿದೆ. ರಸಗೊಬ್ಬರ, ಪೆಟ್ರೋಕೆಮಿಕಲ್ಸ್‌ ಮತ್ತು ಇಂಧನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ವಿಸ್ತರಣೆಗೊಳ್ಳಲಿದೆ. ಇದರಿಂದ ಪ್ರವಾಸೋದ್ಯಮ ಹೊಸ ಬದಲಾವಣೆಗೆ ತೆರೆದುಕೊಳ್ಳಲಿದೆ ಎಂದರು.

ಕರ್ನಾಟಕ ರಾಜ್ಯಪಾಲ ವಿ.ಆರ್‌. ವಾಲಾ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌, ಕರ್ನಾಟಕ ಸಿಎಂ ಬಿಎಸ್‌ವೈ, ಕೇರಳ ಸಿಎಂ ಪಿಣರಾಯಿ ವಿಜಯನ್‌, ಸಚಿವರಾದ ಸಚಿವ ಧರ್ಮೇಂದ್ರ ಪ್ರಧಾನ್‌, ಪ್ರಹ್ಲಾದ್‌ ಜೋಶಿ ಉಪಸ್ಥಿತರಿದ್ದರು.

ಯಾವ್ಯಾವ ಜಿಲ್ಲೆಗಳ ಮೂಲಕ ಪೈಪ್‌ಲೈನ್‌: ಎರ್ನಾಕುಲಂ, ತೃಶ್ಶೂರು, ಪಾಲಕ್ಕಾಡ್‌, ಮಲಪ್ಪುರಂ, ಕೋಯಿಕ್ಕೋಡ್‌, ಕಣ್ಣೂರು, ಕಾಸರಗೋಡು, ದಕ್ಷಿಣ ಕನ್ನಡ

ಅನಿಲ ಸಾಗಣೆ ಸಾಮರ್ಥ್ಯ ದಿನಕ್ಕೆ 12 ಮಿಲಿಯ ಕ್ಯುಬಿಕ್‌ ಮೀ. ನಿರ್ಮಾಣ ವೆಚ್ಚ 3,000 ಕೋ.ರೂ.

450 ಕಿ.ಮೀ ಪೈಪ್‌ಲೈನ್‌ ಉದ್ದ
10 ಜಿಲ್ಲೆಗಳಿಗೆ ಅನಿಲ

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.