ಬಾಷ್‍: 2ನೇ ತ್ರೈಮಾಸಿಕದಲ್ಲಿ ಶೇ. 17.7ರಷ್ಟು ಬೆಳವಣಿಗೆ


Team Udayavani, Nov 11, 2021, 11:50 AM IST

ಬಾಷ್‍: 2ನೇ ತ್ರೈಮಾಸಿಕದಲ್ಲಿ ಶೇ. 17.7ರಷ್ಟು ಬೆಳವಣಿಗೆ

ಬೆಂಗಳೂರು: ತಂತ್ರಜ್ಞಾನ ಮತ್ತು ಸೇವೆಗಳ ಪೂರೈಕೆಯಲ್ಲಿ ಮುಂಚೂಣಿಯಲ್ಲಿರುವ ಬಾಷ್ ಲಿಮಿಟೆಡ್ 2021-2022 ನೇ ಹಣಕಾಸು ಸಾಲಿನ 2 ನೇ ತ್ರೈಮಾಸಿಕದಲ್ಲಿ ತನ್ನ ಕಾರ್ಯಾಚರಣೆಗಳಲ್ಲಿ 2918 ಕೋಟಿ ರೂಪಾಯಿಗಳಷ್ಟು ಆದಾಯ  ಗಳಿಸಿದೆ. ಈ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17.7 ರಷ್ಟು ಹೆಚ್ಚಳ ಸಾಧಿಸಿದೆ. 2021 ರ ಜುಲೈ-ಸೆಪ್ಟಂಬರ್ ಅವಧಿಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ನಿರ್ಬಂಧಗಳನ್ನು ತೆರವು ಮಾಡಿದ್ದರಿಂದ ಗಣನೀಯ ಪ್ರಮಾಣದಲ್ಲಿ ಮಾರಾಟದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಳ ಸಾಧಿಸಲು ಸಾಧ್ಯವಾಗಿದೆ.

ತೆರಿಗೆ ಪೂರ್ವ ಲಾಭವು 397 ಕೋಟಿ ರೂಪಾಯಿಗಳಾಗಿದ್ದು, ಕಾರ್ಯಾಚರಣೆಗಳ ಒಟ್ಟು ಆದಾಯದ ಶೇ.13.6 ರಷ್ಟಾಗಿದೆ. ತೆರಿಗೆ ನಂತರದ ಲಾಭವು 372 ಕೋಟಿ ರೂಪಾಯಿಗಳಾಗಿದ್ದು, ಕಾರ್ಯಾಚರಣೆಗಳ ಒಟ್ಟು ಆದಾಯದ ಶೇ.12.7 ರಷ್ಟಾಗಿದೆ.

ಬಾಷ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಭಾರತದಲ್ಲಿ ಬಾಷ್ ಗ್ರೂಪ್ ನ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಮಾತನಾಡಿ “ಪ್ರಸ್ತುತ ಭಾರತದಲ್ಲಿ ಸೆಮಿಕಂಡಕ್ಟರ್ ಕೊರತೆಯನ್ನು ಎದುರಿಸುತ್ತಿರುವುದರಿಂದ ಆಟೋಮೋಟಿವ್ ಮಾರುಕಟ್ಟೆ ಉತ್ಪಾದನೆ ಕುಸಿದಿದೆಯಾದರೂ ಚೇತರಿಕೆಯ ಮುನ್ಸೂಚನೆ ಕಾಣುತ್ತಿದೆ. ಆದಾಗ್ಯೂ, ಆಟೋಮೋಟಿವ್ ಉದ್ಯಮವು ಬೆಳವಣಿಗೆಯತ್ತ ಸಾಗುತ್ತಿರುವ ಬಗ್ಗೆ ಮಾರುಕಟ್ಟೆಯಲ್ಲಿನ ಅಸ್ಥಿರತೆಯು ಪ್ರಮುಖ ಆತಂಕವನ್ನು ಸೃಷ್ಟಿ ಮಾಡಿದೆ” ಎಂದರು.

2021-22 ನೇ ಸಾಲಿನ 2 ನೇ ತ್ರೈಮಾಸಿಕದಲ್ಲಿ ಮಾರಾಟದಲ್ಲಿ ಶೇ.20 ರಷ್ಟು ಹೆಚ್ಚಳವಾಗಿದ್ದು, ಪವರ್ ಟ್ರೇನ್ ಸಲೂಶನ್ಸ್ ವಿಭಾಗದಲ್ಲಿ ಶೇ.16 ರಷ್ಟು ಹೆಚ್ಚಳವಾಗಿದೆ. ಇದೇ ವೇಳೆ, 2021-22 ನೇ ಸಾಲಿನ ಎರಡನೇ ತ್ರೈಮಾಸಿಕದಲ್ಲಿ ಮಾರುಕಟ್ಟೆ ನಂತರದಲ್ಲಿ ಶೇ.27 ರಷ್ಟು ಹೆಚ್ಚಳವಾಗಿದೆ. ಮೊಬಿಲಿಟಿ ಸಲೂಶನ್ಸ್ ಹೊರಗಿನ ವಿಭಾಗದಲ್ಲಿ ಬಾಷ್ ಶೇ.36 ಹೆಚ್ಚಳ ಸಾಧಿಸಿದ್ದು, ಇದಕ್ಕೆ ಪ್ರಮುಖ ಕಾರಣ 2021 ರ ಜುಲೈ-ಸೆಪ್ಟಂಬರ್ ಅವಧಿಯಲ್ಲಿ ಪವರ್ ಟೂಲ್ಸ್ ವರ್ಗದಲ್ಲಿನ ವಹಿವಾಟು ಹೆಚ್ಚಳವಾಗಿರುವುದಾಗಿದೆ. ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕುಂಠಿತಗೊಂಡಿದ್ದ ಕಂಪನಿಯ ವಹಿವಾಟು ಪರಿಸ್ಥಿತಿ ಸುಧಾರಣೆಗೊಳ್ಳುತ್ತಿದ್ದು, ಮಾರಾಟದಲ್ಲಿ ಚೇತರಿಕೆಯನ್ನು ಕಾಣುತ್ತಿದೆ.

ಶತಮಾನೋತ್ಸವದ ಸನಿಹದಲ್ಲಿ ಬಾಷ್ ಇಂಡಿಯಾ: ಬಾಷ್ ಇಂಡಿಯಾ ತನ್ನ ಶತಮಾನೋತ್ಸವ ಆಚರಣೆಯ ದಿನಗಳು ಸನಿಹದಲ್ಲಿದ್ದು, 2022 ಕ್ಕೆ ಈ ಸಂಭ್ರಮವನ್ನು ಆಚರಿಸಿಕೊಳ್ಳಲಿದೆ. ಕಂಪನಿಯು ಈಗಾಗಲೇ ಉದ್ಯಮವನ್ನು ಸಂಪೂರ್ಣ ಡಿಜಿಟಲ್ ಪರಿಸರ ವ್ಯವಸ್ಥೆಗೆ ರೂಪಾಂತರ ಮಾಡುವ ಕಾರ್ಯದಲ್ಲಿ ತೊಡಗಿದೆ.

“ನಮ್ಮ ಶತಮಾನೋತ್ಸವದ ಆಚರಣೆಗಳು ನಮ್ಮ ಸಹವರ್ತಿಗಳ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಬದ್ಧತೆಗೆ ಸಂದ ಫಲಿತಾಂಶವಾಗಿದೆ. ಮೊಬಿಲಿಟಿ ಮತ್ತು ಅದರಾಚೆಗಿನ ಅತ್ಯಾಧುನಿಕ ಉತ್ಪನ್ನಗಳು, ಪರಿಹಾರಗಳು ಮತ್ತು ತಂತ್ರಜ್ಞಾನಗಳ ಕ್ಷೇತ್ರದಲ್ಲಿ ಬಾಷ್ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. 2022 ರಲ್ಲಿ ಬಾಷ್ ಇಂಡಿಯಾ ತನ್ನ ಪೋರ್ಟ್ ಫೋಲಿಯೋದಾದ್ಯಂತ ನಮ್ಮ ಪ್ರಗತಿಗಳು ಮತ್ತು ನಾವೀನ್ಯತೆಗಳನ್ನು ಪ್ರದರ್ಶಿಸಲು ಹಲವಾರು ಯೋಜನೆಗಳನ್ನು ಸಿದ್ಧಪಡಿಸಿಕೊಂಡಿದ್ದೇವೆ” ಎಂದು ಸೌಮಿತ್ರ ಭಟ್ಟಾಚಾರ್ಯ ತಿಳಿಸಿದರು.

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.