ಫೀನಿಕ್ಸ್ ಆದ ಮುಂಬಯಿ ಶೇರು : ಸೆನ್ಸೆಕ್ಸ್ 659 ಅಂಕ ಜಂಪ್
Team Udayavani, Oct 12, 2018, 10:40 AM IST
ಮುಂಬಯಿ : ನಿನ್ನೆ ಗುರುವಾರದ ಆರಂಭಿಕ ವಹಿವಾಟಿನಲ್ಲಿ ಒಂದು ಸಾವಿರಕ್ಕೂ ಅಧಿಕ ಅಂಕಗಳನ್ನು ಕಳೆದುಕೊಂಡಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಫೀನಿಕ್ಸ್ ಹಕ್ಕಿಯಂತೆ ಅಸಾಮಾನ್ಯವಾಗಿ ಎದ್ದು ಬಂದು ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 600ಕ್ಕೂ ಅಧಿಕ ಅಂಕಗಳ ಮುನ್ನಡೆಯನು ಸಾಧಿಸಿತು.
ಆರ್ಥಿಕ ಪ್ರಗತಿಯ ಅಂಕಿ ಅಂಶಗಳು ಇಂದು ಪ್ರಕಟಗೊಳ್ಳುವುದನ್ನು ಕಾಯುತ್ತಿರುವ ಶೇರು ಪೇಟೆಯಲ್ಲಿ ಇಂದು ದೇಶೀಯ ಹೂಡಿಕೆದಾರ ಸಂಸ್ಥೆಗಳು ಮತ್ತು ವಹಿವಾಟುದಾರರು ಭರಾಟೆಯ ಖರೀದಿಯಲ್ಲಿ ತೊಡಗಿಕೊಂಡದ್ದೇ ಶೇರು ಪೇಟೆಯಲ್ಲಿನ ತೇಜಿಗೆ ಕಾರಣವಾಯಿತು.
ಇದೇ ರೀತಿ ಇಂದು ಬೆಳಗ್ಗೆ ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರವೃತ್ತಿ ತೋರಿಬಂತು. ನಿನ್ನೆ ಗುರುವಾರದ ವಹಿವಾಟನ್ನು ಸೆನ್ಸೆಕ್ಸ್ 750 ಅಂಕಗಳ ನಷ್ಟದೊಂದಿಗೆ ಆರು ತಿಂಗಳ ಕನಿಷ್ಠ ಮಟ್ಟದಲ್ಲಿ ಕೊನೆಗೊಳಿಸಿತ್ತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 659.29 ಅಂಕಗಳ ನಷ್ಟದೊಂದಿಗೆ 34,660.44 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 202.10 ಅಂಕಗಳ ಏರಿಕೆಯೊಂದಿಗೆ 10,346.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಟಿಸಿಎಸ್, ಎ ಬ್ಯಾಂಕ್, ರಿಲಯನ್ಸ್, ಐಸಿಐಸಿಐ ಬ್ಯಾಂಕ್, ಬಜಾಜ್ ಫಿನಾನ್ಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನ ಟಾಪ್ ಗೇನರ್ಗಳು : ವೋಡಾ ಫೋನ್ ಐಡಿಯಾ, ಬಜಾಜ್ ಫಿನಾನ್ಸ್, ಮಹೀಂದ್ರ, ಐಟಿಸಿ, ಎಸ್ ಬ್ಯಾಂಕ್. ಟಾಪ್ ಲೂಸರ್ಗಳು : ಟಿಸಿಎಸ್, ಎಚ್ ಸಿ ಎಲ್ ಟೆಕ್, ಇನ್ಫೋಸಿಸ್, ವಿಪ್ರೋ, ಡಾ. ರೆಡ್ಡಿ ಲ್ಯಾಬ್.
ಡಾಲರ್ ಎದುರು ರೂಪಾಯಿ ಇಂದು 38 ಪೈಸೆಯ ಉತ್ತಮ ಚೇತರಿಕೆಯನ್ನು ಕಂಡುಕೊಂಡು 73.74ರ ಮಟ್ಟಕ್ಕೆ ಏರುವುದರೊಂದಿಗೆ ದೃಢತೆಯ ಲಕ್ಷಣ ತೋರ್ಪಡಿಸಿತು. ಇದೇ ವೇಳೆ ಬ್ರೆಂಟ್ ಕಚ್ಚಾ ತೈಲ ಶೇ.3 ರಷ್ಟು ಕುಸಿದು ಜಾಗತಿಕ ಮಾರುಕಟ್ಟೆಗಳಲ್ಲಿ ಬ್ಯಾರಲ್ ಗೆ 80.37 ಡಾಲರ್ ನಲ್ಲಿ ಬಿಕರಿಯಾಗತೊಡಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ