ಆರ್ಬಿಐ ದರ ಯಥಾವತ್: ಮುಂಬಯಿ ಶೇರು 113 ಅಂಕ ಕುಸಿತ
Team Udayavani, Feb 7, 2018, 4:22 PM IST
ಮುಂಬಯಿ : ಜಾಗತಿಕ ಶೇರು ತಲ್ಲಣದಿಂದ ನಲುಗಿ ಆರು ದಿನಗಳ ನಷ್ಟದ ಬಳಿಕ ಇಂದು ಬುಧವಾರ ಕೊಂಚ ಮಟ್ಟಿನ ಚೇತರಿಕೆ ಕಂಡಿದ್ದ ಮುಂಬಯಿ ಶೇರು ಪೇಟೆ, ಆರ್ಬಿಐ ತನ್ನ ಬಡ್ಡಿದರವನ್ನು ಯಥಾವತ್ತಾಗಿ ಉಳಿಸಿಕೊಂಡ ಕಾರಣಕ್ಕೆ ನಿರಾಶೆಗೊಂಡು ದಿನದ ವಹಿವಾಟನ್ನು 113 ಅಂಕಗಳ ನಷ್ಟದೊಂದಿಗೆ 34,082.71 ಅಂಕಗಳ ಮಟ್ಟಕ್ಕೆ ಜಾರಿತು.
ಬಡ್ಡಿ ದರ ಕಡಿತ ಮಾಡದ ಆರ್ಬಿಐ, 2017-18ರ ಆರ್ಥಿಕ ಪ್ರಗತಿಯ ಅಂದಾಜನ್ನು ಶೇ.6.7ರಿಂದ ಶೇ.6.6ಕ್ಕೆ ಇಳಿಸಿದುದು ಶೇರು ಮಾರುಕಟ್ಟೆಗೆ ಇನ್ನೂ ದೊಡ್ಡ ನಿರಾಶೆ ಉಂಟುಮಾಡಿತು.
ಜಾಗತಿಕ ಶೇರು ಮಾರುಕಟ್ಟೆಗಳು ಇಂದು ಮತ್ತೆ ಚಿಗುರಿಕೊಂಡದ್ದನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಬೆಳಗ್ಗಿನ ವಹಿವಾಟಿನಲ್ಲಿ 470 ಅಂಕಗಳ ಭರ್ಜರಿ ಜಂಪ್ ಸಾಧಿಸಿತ್ತು. ದಿನಾಂತ್ಯಕ್ಕೆ ನಷ್ಟದ ಹಾದಿ ಹಿಡಿದ ಸೆನ್ಸೆಕ್ಸ್ 113 ಅಂಕಗಳ ಕುಸಿತವನ್ನು ಕಂಡಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 21.55 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,476.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿ ನಿರಾಶೆ ಉಂಟುಮಾಡಿತು.
ಮುಂಬಯಿ ಶೇರು ಪೇಟೆಯಲ್ಲಿಂದು 2,868 ಶೇರುಗಳು ವಹಿವಾಟಿಗೆ ಒಳಪಟ್ಟವು; 1,988 ಶೇರುಗಳು ಮುನ್ನಡೆ ಸಾಧಿಸಿದವು; 786 ಶೇರುಗಳು ಹಿನ್ನಡೆಗೆ ಗುರಿಯಾದವು; 94 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ