ದೇಶದಲ್ಲಿನ ಪಿಂಚಣಿದಾರರಿಗೆ ಹೊಸ ಮಾರ್ಗದರ್ಶಿ ಸೂತ್ರಗಳು ; ಇಲ್ಲಿದೆ ವಿವರ
Team Udayavani, May 21, 2020, 2:30 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. 65 ಲಕ್ಷ ಜನರು ಪ್ರಯೋಜನ ಪಡೆದುಕೊಳ್ಳಲಿದ್ದು, ಹೊಸ ಬದಲಾವಣೆ ಹೀಗಿವೆ.
– ತಮ್ಮ ಮೊದಲ ಪಿಂಚಣಿ ಹಣ ಪಡೆಯಲು, ಬ್ಯಾಂಕ್ಗಳಿಗೆ ಹೋಗಲೇಬೇಕಾಗಿಲ್ಲ. ಖಾತೆ ತೆರೆಯಲು, ಪಿಂಚಣಿದಾರನ ಉಪಸ್ಥಿತಿ ಬೇಕಿಲ್ಲ.
– ಪಿಂಚಣಿದಾರ ಸಂಗಾತಿಯೊಂದಿಗೆ ಬ್ಯಾಂಕ್ನಲ್ಲಿ ಜಂಟಿ ಖಾತೆ ಹೊಂದಿದ್ದರೆ, ಅವರು ಮೃತಪಟ್ಟ ಅನಂತರ ಅವರ ಸಂಗಾತಿ ಬ್ಯಾಂಕ್ಗೆ ಫಾರ್ಮ್ 14 ಅನ್ನು ಸಲ್ಲಿಸುವ ಅಗತ್ಯವಿಲ್ಲ. ಬ್ಯಾಂಕ್ಗಳು ಹೊಸ ಖಾತೆ ತೆರೆಯಿರಿ ಎನ್ನುವಂತಿಲ್ಲ. ಸಂಗಾತಿ ಮರಣ ಪ್ರಮಾಣಪತ್ರ ಸಲ್ಲಿಸಿದರೆ ಸಾಕು.
– ಪಿಂಚಣಿದಾರರು ಮೃತಪಟ್ಟ ವೇಳೆ, ಬ್ಯಾಂಕ್ಗಳು ತಾವಾಗಿಯೇ ಪಿಂಚಣಿ ಯಾರಿಗೆ ಸಲ್ಲಬೇಕು ಎನ್ನುವುದನ್ನು ಗುರ್ತಿಸಬೇಕು. ಒಂದು ವೇಳೆ ಸಂಗಾತಿ ಹೊರತುಪಡಿಸಿ, ಸಂಬಂಧಿಕರಿಗೆ ಸಲ್ಲುವುದಾದರೆ, ತಾವು ಆರ್ಥಿಕ ಗಳಿಕೆ ಹೊಂದಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಬೇಕು.
– ಪಿಂಚಣಿದಾರರ ಮರಣ ಬಳಿಕ ಸಂಗಾತಿ ಪಿಂಚಣಿ ಪಡೆಯುತ್ತಿದ್ದ ಪಕ್ಷದಲ್ಲಿ, 6 ತಿಂಗಳಿಗೊಮ್ಮೆ, ತಾವು ಮರು ಮದುವೆಯಾಗಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಬೇಕು. ಒಂದು ವೇಳೆ ಮದುವೆಯಾದರೆ ಪಿಂಚಣಿ ರದ್ದು.
– ಪಿಂಚಣಿ ಪಡೆಯುವ ಪ್ರತೀ ವ್ಯಕ್ತಿ, ಪ್ರತೀವರ್ಷ ನವೆಂಬರ್ನಲ್ಲಿ ತಮ್ಮ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಬ್ಯಾಂಕ್ಗಳು ಅಂತರ್ಜಾಲದ ಮೂಲಕ ಆಧಾರ್ ಆಧಾರಿತ ಜೀವನ್ ಪ್ರಮಾಣ್ ಅನ್ನು ಅಂಗೀಕರಿಸಬಹುದು. ಇನ್ನು ಬ್ಯಾಂಕ್ಗಳು ಪ್ರತೀವರ್ಷ ಅ.24, ನ.1, ನ.15, ನ. 25ಕ್ಕೆ ಎಲ್ಲ ಪಿಂಚಣಿದಾರರಿಗೆ ಎಸ್ಎಂಎಸ್, ಇಮೇಲ್ಗಳ ಮೂಲಕ ಜೀವಿತ ಪ್ರಮಾಣ ಪತ್ರ ಸಲ್ಲಿಸುವಂತೆ ಎಚ್ಚರಿಸಬೇಕು.
– ಇನ್ನು ಪ್ರತೀವರ್ಷ ಡಿ.1ರಂದು ಬ್ಯಾಂಕ್ಗಳು ಜೀವಿತ ಪ್ರಮಾಣಪತ್ರ ಸಲ್ಲಿಸದಿದ್ದವರ ಪಟ್ಟಿ ತಯಾರಿಸಬೇಕು. ಅವರಿಗೆ ಸಂದೇಶ ಕಳುಹಿಸಿ, ಪ್ರಮಾಣಪತ್ರವನ್ನು ಮನೆ ಬಾಗಿಲಿಗೆ ಬಂದು ಪಡೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಬೇಕು.
– ಒಂದು ವೇಳೆ ಪಿಂಚಣಿಯು ಶಾಶ್ವತ ಅಂಗವೈಕಲ್ಯ ಮಗುವಿಗೆ ಹೋಗುತ್ತಿದ್ದರೆ, ಆ ಮಗು ಇನ್ನು ಪ್ರತೀವರ್ಷ ಅಂಗವೈಕಲ್ಯ ಹೊಂದಿರುವ ಬಗ್ಗೆ ಹೊಸ ಪ್ರಮಾಣಪತ್ರ ಸಲ್ಲಿಸುವ ಅಗತ್ಯವಿಲ್ಲ. ಕೇವಲ ತಾನು ಗಳಿಕೆ ಮಾಡುತ್ತಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಿದರೆ ಸಾಕು. ತಾತ್ಕಾಲಿಕ ವೈಕಲ್ಯ ಹೊಂದಿದ್ದರೆ, 5 ವರ್ಷಕ್ಕೊಮ್ಮೆ ಪೋಷಕರು ಪ್ರಮಾಣಪತ್ರ ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್