ಕಲ್ಲಿದ್ದಲು ವಲಯ ಇನ್ನು ಅನ್‌ಲಾಕ್‌ ; ಇ-ಹರಾಜು ಪ್ರಕ್ರಿಯೆಗೆ ಪ್ರಧಾನಿ ಮೋದಿ ಚಾಲನೆ


Team Udayavani, Jun 20, 2020, 12:20 AM IST

ಕಲ್ಲಿದ್ದಲು ವಲಯ ಇನ್ನು ಅನ್‌ಲಾಕ್‌ ; ಇ-ಹರಾಜು ಪ್ರಕ್ರಿಯೆಗೆ ಪ್ರಧಾನಿ ಮೋದಿ ಚಾಲನೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕಲ್ಲಿದ್ದಲು ವಲಯವನ್ನು ವಾಣಿಜ್ಯ ಗಣಿಗಾರಿಕೆಗೆ ಮುಕ್ತವಾಗಿಸುವ ಮೂಲಕ ಕ್ಷೇತ್ರದಲ್ಲಿ ದಶಕಗಳಿಂದ ಜಾರಿ­ಯಲ್ಲಿದ್ದ ಲಾಕ್‌ಡೌನ್‌ ಅನ್ನು ಅನ್‌ಲಾಕ್‌ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೋವಿಡ್ ವೈರಸ್‌ ಸೋಂಕಿನಿಂದಾಗಿ ಸೊರಗಿರುವ ದೇಶದ ಆರ್ಥಿಕ ಸ್ಥಿತಿ ಸುಧಾರಿಸಲು ಕೇಂದ್ರ ರೂಪಿಸಿರುವ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಭಾಗವಾಗಿ, 41 ಕಲ್ಲಿದ್ದಲು ಬ್ಲಾಕ್‌ಗಳನ್ನು ವಾಣಿಜ್ಯ ಗಣಿಗಾರಿಕೆಗೆ ಮುಕ್ತವಾಗಿಸುವ ಎರಡು ಹಂತದ ಇ-ಹರಾಜು ಪ್ರಕ್ರಿಯೆಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ನಮ್ಮಲ್ಲಿರುವ ನಿಕ್ಷೇಪಗಳ ಆಧಾರದಲ್ಲಿ ನೋಡುವುದಾದರೆ, ಕಲ್ಲಿದ್ದಲು ರಫ್ತು ಮಾಡುವ ವಿಶ್ವದ ಅತಿ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮುವ ಸಂಪೂರ್ಣ ಸಾಮರ್ಥ್ಯ ಭಾರತಕ್ಕಿದೆ. ಆ ವಿಕ್ರಮವನ್ನು ಸಾಧಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ, ಕಲ್ಲಿದ್ದಲು ಬ್ಲಾಕ್‌ಗಳನ್ನು ವಾಣಿಜ್ಯ ಗಣಿಗಾರಿಕೆಗೆ ಮುಕ್ತ­ಗೊ­ಳಿಸಲಾಗಿದೆ. ಇದರಿಂದಾಗಿ ಮುಂದಿನ 5ರಿಂದ 7 ವರ್ಷಗಳ ಅವಧಿ­ಯಲ್ಲಿ ದೇಶಕ್ಕೆ 33,000 ಕೋಟಿ ರೂ. ಬಂಡ­ವಾಳ ಹರಿದುಬರುವ ನಿರೀಕ್ಷೆಯಿದೆ’ ಎಂದು ಪ್ರಧಾನಿ ಹೇಳಿದರು.

ಕಲ್ಲಿದ್ದಲು ನಿಕ್ಷೇಪಗಳ ಆಧಾರದಲ್ಲಿ ದೇಶವು ಪ್ರಸ್ತುತ ಜಗತ್ತಿನ ನಾಲ್ಕನೇ ಅತಿ ದೊಡ್ಡ ದೇಶ ಎನಿಸಿಕೊಂಡಿದ್ದು, ಉತ್ಪಾದ­ನೆ­ಯಲ್ಲಿ ಎರಡನೇ ಬೃಹತ್‌ ರಾಷ್ಟ್ರವಾ­ಗಿದೆ. ಇದೇ ವೇಳೆ ಕಲ್ಲಿದ್ದಲನ್ನು ಆಮದು ಮಾಡಿ­ಕೊಳ್ಳುವ 2ನೇ ದೊಡ್ಡ ದೇಶವಾ­ಗಿಯೂ ನಾವು ಗುರುತಿಸಿಕೊಂಡಿದ್ದೇವೆ ಎಂದರು.

20,000 ಕೋಟಿ ರೂ. ಹೂಡಿಕೆ: 2030ರ ವೇಳೆಗೆ ಸುಮಾರು 20,000 ಕೋಟಿ ರೂ. ಹೂಡಿಕೆಯೊಂದಿಗೆ 10 ಕೋಟಿ ಟನ್‌ ಕಲ್ಲಿದ್ದಲನ್ನು ಅನಿಲವನ್ನಾಗಿ ಮಾರ್ಪಡಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ನಾಲ್ಕು ಯೋಜನೆಗಳನ್ನು ಗುರುತಿಸಿಸಲಾಗಿದೆ ಎಂದರು.

ಕೋವಿಡ್ ಒಂದು ಅವಕಾಶ
‘ಕೋವಿಡ್ ವೈರಸ್‌ ಸೋಂಕು ಭಾರ­ತೀಯರಿಗೆ ಸ್ವಾವಲಂಬನೆಯ ಪಾಠ ಕಲಿಸಿದೆ. ಹೀಗಾಗಿ ಕೋವಿಡ್ ಪರಿಸ್ಥಿತಿಯನ್ನು ದೇಶದ ಅಭಿವೃದ್ಧಿಯ ಅವ­ಕಾಶವನ್ನಾಗಿ ಬಳಸಿಕೊಳ್ಳಲು ನಾವು ಬದ್ಧರಾಗಿದ್ದೇವೆ’ ಎಂದು ಹೇಳಿದ ಪ್ರಧಾನಿ, ಕೆಲವೇ ತಿಂಗಳ ಹಿಂದೆ ಎನ್‌-95 ಮಾಸ್ಕ್ ಗಳು, ಕೋವಿಡ್ ಪರೀಕ್ಷೆ ಕಿಟ್‌, ಪಿಪಿಇ ಕಿಟ್‌ಗಳು ಹಾಗೂ ವೆಂಟಿಲೇಟರ್‌ಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದ್ದ ನಾವು, ಇಂದು ಮೇಕ್‌ ಇನ್‌ ಇಂಡಿಯಾ ನೆರವಿ­ನಿಂದ ಅವೆಲ್ಲವನ್ನೂ ನಮ್ಮಲ್ಲೇ ಉತ್ಪಾದಿ­ಸುತ್ತಿದ್ದೇವೆ. ಅಷ್ಟೇ ಅಲ್ಲ, ಮಾಸ್ಕ್, ಕಿಟ್‌ಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವ ಹಂತ ತಲುಪಿದೆ. ಭಾರತ ಈ ಹಿಂದೆ ಕೂಡ ಅತ್ಯಂತ ದೊಡ್ಡ ಹಾಗೂ ಕ್ಲಿಷ್ಟಕರ ಸಂದರ್ಭಗಳನ್ನು ಗೆದ್ದು ಮೇಲೆದ್ದಿದೆ. ಹಾಗೇ ಕೊರೊನಾ ಒಡ್ಡಿರುವ ಸವಾ­ಲನ್ನೂ ಯಶಸ್ವಿಯಾಗಿ ಮೆಟ್ಟಿನಿಲ್ಲುವುದು ಕೂಡ ಖಚಿತ ಎಂದರು.

ಉತ್ಪಾದನೆ ಸಾಮರ್ಥ್ಯ ಹೆಚ್ಚಳ: ಪ್ರಹ್ಲಾದ್‌ ಜೋಶಿ
ಇ-ಹರಾಜು ಪ್ರಕ್ರಿಯೆಗೆ ಚಾಲನೆ ನೀಡುವ ಸಮಾರಂಭದಲ್ಲಿ ಉಪಸ್ಥಿತರಿದ್ದ ಕಲ್ಲಿದ್ದಲು ಸಚಿವ ಪ್ರಹ್ಲಾದ್‌ ಜೋಶಿ ಮಾತನಾಡಿ, ‘ಕಲ್ಲಿದ್ದಲು ಉತ್ಪಾದನಾ ಸಾಮರ್ಥ್ಯವನ್ನು 100 ಕೋಟಿ ಟನ್‌ಗೆ ಹೆಚ್ಚಿಸುವ ನಿಟ್ಟಿನಲ್ಲಿ 50,000 ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು.

100 ವರ್ಷಗಳಿಗಾಗುವಷ್ಟು ಕಲ್ಲಿದ್ದಲು ನಿಕ್ಷೇಪಗಳು ಸಿಐಎಲ್‌ ಬಳಿ ಇವೆ. ಇವುಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಉತ್ಪಾದನೆ ಹೆಚ್ಚಿಸಲು ಐದು ವರ್ಷಗಳ ಅವಧಿಯಲ್ಲಿ ಕೇಂದ್ರ ಕ್ರಮ ಕೈಗೊಳ್ಳಲಿದೆ. ಸರಕಾರದ ಪ್ರಯತ್ನದಿಂದ ಕಲ್ಲಿದ್ದಲು ಕ್ಷೇತ್ರವು ದೇಶದ ಆರ್ಥಿಕತೆಗೆ ಕೊಡುಗೆ ನೀಡಲಿದೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.