‘ಮೂಲಸೌಕರ್ಯ’ಕ್ಕೆ 100 ಲಕ್ಷ ಕೋಟಿಯ ಪ್ಯಾಕೇಜ್
Team Udayavani, Dec 2, 2019, 7:11 AM IST
ಹೊಸದಿಲ್ಲಿ: ದೇಶದ ಮೂಲಸೌಕರ್ಯ ಕ್ಷೇತ್ರದಲ್ಲಿ ಸುಮಾರು 100 ಲಕ್ಷ ಕೋಟಿ ರೂ.ಗಳ ಯೋಜನೆಗಳನ್ನು ಕೇಂದ್ರ ಸರಕಾರ ಸದ್ಯದಲ್ಲೇ ಪ್ರಕಟಿಸಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಮುಂಬಯಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಈ ವಿಷಯ ತಿಳಿಸಿದ ಅವರು, ‘ಯೋಜನೆಗಳ ರೂಪುರೇಷೆ ತಯಾರಿಕೆ ಯಲ್ಲಿ ಈಗಾಗಲೇ ಇಲಾಖೆಗಳ ಅಧಿಕಾರಿಗಳು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮತ್ತೂಂದೆಡೆ, ಯೋಜನೆಗಳಿಗೆ ತಗಲುವ ವೆಚ್ಚದ ಕ್ರೋಡೀಕರಣದ ಕೆಲಸವೂ ಸಾಗುತ್ತಿದೆ. ಇದೆಲ್ಲವೂ ಪೂರ್ತಿಯಾದ ಮೇಲೆ ಯೋಜನೆಗಳ ಬಗ್ಗೆ ಪ್ರಕಟಣೆ ಹೊರಡಿಸಲಾಗುತ್ತದೆ. ಡಿ. 15ರ ಹೊತ್ತಿಗೆ, ಕನಿಷ್ಠ 10 ಯೋಜನೆಗಳನ್ನಾದರೂ ಪ್ರಕಟಿಸುವ ಇರಾದೆ ನಮ್ಮದು” ಎಂದು ಹೇಳಿದರು.
ಶುಕ್ರವಾರವಷ್ಟೇ, ಜಿಡಿಪಿಯ (ಒಟ್ಟು ರಾಷ್ಟ್ರೀಯ ಉತ್ಪನ್ನ) ಪ್ರಗತಿ ದರವನ್ನು ಕೇಂದ್ರ ಬಿಡುಗಡೆ ಮಾಡಿದ್ದು, ಶೇ. 4.5 ಎಂದು ಹೇಳಿತ್ತು. ಇದು, 2013ರ ನಂತರ ದೇಶ ಕಂಡ ಅತಿ ಕನಿಷ್ಠ ಮಟ್ಟದ ಜಿಡಿಪಿ ಎಂದು ಆರ್ಥಿಕ ತಜ್ಞರು ಬಣ್ಣಿಸಿದ್ದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿ, ಪ್ರಮುಖ ಕ್ಷೇತ್ರಗಳ ಸುಧಾರಣೆಗೆ ಸರಕಾರ ಬೇಗನೇ ಮುಂದಾಗಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ, ಮೂಲಸೌಕರ್ಯ ಕ್ಷೇತ್ರಕ್ಕೆ 100 ಲಕ್ಷ ಕೋಟಿ ರೂ.ಗಳ ಉತ್ತೇಜಕ ಪ್ಯಾಕೇಜ್ ನೀಡಲು ಕೇಂದ್ರ ಮುಂದಾಗಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…