ಎಲ್ಪಿಜಿ ಮಾರಾಟ: ತೈಲ ಕಂಪೆನಿಗಳಿಗೆ 22 ಸಾವಿರ ಕೋಟಿ ರೂಪಾಯಿ ಪರಿಹಾರ
Team Udayavani, Oct 13, 2022, 6:45 AM IST
ಹೊಸದಿಲ್ಲಿ: ಕೇಂದ್ರ ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಮಾರಾಟದಿಂದ ಉಂಟಾದ ನಷ್ಟ ಭರಿಸುವ ನಿಟ್ಟಿನಲ್ಲಿ ಏಕಕಂತಿನಲ್ಲಿ 22 ಸಾವಿರ ಕೋಟಿ ರೂ. ಪರಿಹಾರ ನೀಡಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ನಿಗದಿತ ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಮಾರಾಟ ಮಾಡಿ ನಷ್ಟ ಉಂಟಾಗಿರುವ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲು ಕೇಂದ್ರ ಸಚಿವ ಸಂಪುಟ ಒಪ್ಪಿದೆ.
ಇಂಡಿಯನ್ ಆಯಿಲ್ ಕಾರ್ಪೊರೇ ಶನ್(ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿ.(ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿ.(ಎಚ್ಪಿಸಿಎಲ್) ಕಂಪೆನಿಗಳಿಗೆ ಈ ಸೌಲಭ್ಯ ಸಿಗಲಿದೆ.
2020ರ ಜೂನ್ನಿಂದ 2022ರ ಜೂನ್ ತಿಂಗಳೊಳಗೆ ಎಲ್ಪಿಸಿ ಸಿಲಿಂಡರ್ಗಳ ಬೆಲೆ ಬರೋಬ್ಬರಿ ಶೇ.300ರಷ್ಟು ಏರಿತ್ತು. ಆದರೆ ಸರಕಾರ ನಿಗದಿ ಪಡಿಸಿದ ದರದಲ್ಲಿ ಸಿಲಿಂಡರ್ ಮಾರಾಟ ಮಾಡಿದ ಈ ಮೂರೂ ಕಂಪೆನಿಗಳು ಸಿಲಿಂಡರ್ ಬೆಲೆಯಲ್ಲಿ ಕೇವಲ ಶೇ.72 ಏರಿಸಿವೆ. ಹಾಗಾಗಿ ಕಂಪೆನಿಗಳಿಗೆ ನಷ್ಟ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್