- Thursday 12 Dec 2019
ಕೇಂದ್ರ ಸರಕಾರದಿಂದ ಈರುಳ್ಳಿ ಕೃತಕ ಅಭಾವ ಸೃಷ್ಟಿ: ಸಿಸೋಡಿಯಾ
Team Udayavani, Dec 1, 2019, 8:45 PM IST
ಹೊಸದಿಲ್ಲಿ: ಈರುಳ್ಳಿ ಬೇಕಾದಷ್ಟು ದಾಸ್ತಾನು ಇದ್ದರೂ ಕೇಂದ್ರ ಸರಕಾರ ಅದನ್ನು ಬಿಡುಗಡೆ ಮಾಡುತ್ತಿಲ್ಲ. ಈ ಮೂಲಕ ಸರಕಾರ ರಾಜಧಾನಿ ದಿಲ್ಲಿಯಲ್ಲಿ ಬೇಕೆಂದೇ ಕೃತಕ ಅಭಾವ ಸೃಷ್ಟಿಸುತ್ತಿದೆ ಎಂದು ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.
ಸೆ.5ರಂದು ತನ್ನ ಬಳಿ 56 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಇರುವುದಾಗಿ ಕೇಂದ್ರ ಸರಕಾರ ಲಿಖಿತ ರೂಪದಲ್ಲಿ ಹೇಳಿತ್ತು. ಆದರೆ, ಅದೀಗ ದಿಲ್ಲಿ ಸರಕಾರಕ್ಕೆ ಈರುಳ್ಳಿ ಪೂರೈಕೆ ಮಾಡುತ್ತಿಲ್ಲ. ಈಗ ನಗರಾದ್ಯಂತ ಬೆಲೆ 75-110 ರೂ. ವರೆಗೆ ಆಗಿದೆ.
ಕೂಡಲೇ ಕೇಂದ್ರ ನಿತ್ಯ 10 ಟ್ರಕ್ನಷ್ಟು ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬೇಕು. 10 ಟ್ರಕ್ ಈರುಳ್ಳಿ ನಾವು ಕೇಳುತ್ತಿದ್ದಾಗ ಒಂದು, ಎರಡು, ಐದು ಟ್ರಕ್ ಎಂದು ಹೇಳುತ್ತಿದ್ದರು. ಆದರೆ ಈಗ ಈರುಳ್ಳಿಯನ್ನೇ ಕೊಡುತ್ತಿಲ್ಲ. ಹೀಗೆ ಯಾಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಕೇಂದ್ರ ಈರುಳ್ಳಿ ಕೊಡದೇ ಇರುವ ಉದ್ದೇಶ ರಾಜಧಾನಿಯಲ್ಲಿ ಬೆಲೆ ಏರಿಕೆಯಾಗುವಂತೆ ಮಾಡುವುದಾಗಿದೆ. ನ.24ರ ನಂತರ ಒಂದೇ ಒಂದು ಲಾರಿ ಈರುಳ್ಳಿಯನ್ನೂ ಕಳಿಸಿಲ್ಲ. ಹಾಗಿದ್ದರೆ, ದಾಸ್ತಾನು ಇರುವ ಈರುಳ್ಳಿಯನ್ನು ಕೊಳೆಯಲು ಬಿಡಲಾಗುತ್ತಿದೆಯೇ ಎಂದವರು ಪ್ರಶ್ನೆ ಮಾಡಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ನಿರೀಕ್ಷೆಯನ್ನು...
-
ಹೊಸದಿಲ್ಲಿ: ಕಳೆದ ಕೆಲವು ತಿಂಗಳಿನಿಂದ ಆರ್ಥಿಕ ವಲಯದಲ್ಲಾಗುತ್ತಿರುವ ಏರಿಳಿತ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ....
-
ಸ್ಯಾನ್ಫ್ರಾನ್ಸಿಸ್ಕೋ: ಜಾಗತಿಕ ಮಟ್ಟದಲ್ಲಿ ತನ್ನ ಅಧಿಪತ್ಯ ಸಾಧಿಸಿರುವ ಫೇಸ್ಬುಕ್ ಮತ್ತು ಗೂಗಲ್ ಕಂಪನಿಗಳ ಕುರಿತು ಅಚ್ಚರಿ ಸುದ್ದಿಯೊಂದು ಹೊರಬಿದ್ದಿದ್ದು,...
-
ಹೊಸದಿಲ್ಲಿ: ಹೋಂಡಾ ಕಾರ್ಸ್ ಇಂಡಿಯಾವು ಮಂಗಳವಾರ ಬಿಎಸ್6 ಮಾದರಿಯ ಪೆಟ್ರೋಲ್ ಆವೃತ್ತಿಯ ಹೋಂಡಾ ಸಿಟಿ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹೊಸದಿಲ್ಲಿಯಲ್ಲಿ...
-
ಹೊಸದಿಲ್ಲಿ: ದಕ್ಷಿಣ ಕೊರಿಯಾದ ಆಟೋಮೊಬೈಲ್ ದಿಗ್ಗಜ ಹ್ಯುಂಡೈ ಮೋಟಾರ್ ಇಂಡಿಯಾ ಮುಂದಿನ ಜನವರಿಯಿಂದ ತನ್ನ ಎಲ್ಲ ಕಾರುಗಳ ದರವನ್ನೂ ಏರಿಕೆ ಮಾಡುವುದಾಗಿ ಘೋಷಿಸಿದೆ....
ಹೊಸ ಸೇರ್ಪಡೆ
-
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವುದನ್ನು ಪ್ರತಿಭಟಿಸಿ ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು...
-
ನ್ಯೂಯಾರ್ಕ್: ಇಂದು ಜಗತ್ತಿನೆಲ್ಲೆಡೆ ವಾಹನಗಳ ಸಂಖ್ಯೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಮಿತಿಮೀರುತ್ತಿದೆ. ಅಪಘಾತದ ಪ್ರಮಾಣಗಳು ಕೂಡ ಹೆಚ್ಚಾಗುತ್ತಿದೆ. ಇವೆಲ್ಲದಕ್ಕೂ...
-
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದ್ದು , 17 ಕ್ಷೇತ್ರದ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು...
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....