ಕೇಂದ್ರ ಸರಕಾರದಿಂದ ಈರುಳ್ಳಿ ಕೃತಕ ಅಭಾವ ಸೃಷ್ಟಿ: ಸಿಸೋಡಿಯಾ
Team Udayavani, Dec 1, 2019, 8:45 PM IST
ಹೊಸದಿಲ್ಲಿ: ಈರುಳ್ಳಿ ಬೇಕಾದಷ್ಟು ದಾಸ್ತಾನು ಇದ್ದರೂ ಕೇಂದ್ರ ಸರಕಾರ ಅದನ್ನು ಬಿಡುಗಡೆ ಮಾಡುತ್ತಿಲ್ಲ. ಈ ಮೂಲಕ ಸರಕಾರ ರಾಜಧಾನಿ ದಿಲ್ಲಿಯಲ್ಲಿ ಬೇಕೆಂದೇ ಕೃತಕ ಅಭಾವ ಸೃಷ್ಟಿಸುತ್ತಿದೆ ಎಂದು ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.
ಸೆ.5ರಂದು ತನ್ನ ಬಳಿ 56 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಇರುವುದಾಗಿ ಕೇಂದ್ರ ಸರಕಾರ ಲಿಖಿತ ರೂಪದಲ್ಲಿ ಹೇಳಿತ್ತು. ಆದರೆ, ಅದೀಗ ದಿಲ್ಲಿ ಸರಕಾರಕ್ಕೆ ಈರುಳ್ಳಿ ಪೂರೈಕೆ ಮಾಡುತ್ತಿಲ್ಲ. ಈಗ ನಗರಾದ್ಯಂತ ಬೆಲೆ 75-110 ರೂ. ವರೆಗೆ ಆಗಿದೆ.
ಕೂಡಲೇ ಕೇಂದ್ರ ನಿತ್ಯ 10 ಟ್ರಕ್ನಷ್ಟು ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬೇಕು. 10 ಟ್ರಕ್ ಈರುಳ್ಳಿ ನಾವು ಕೇಳುತ್ತಿದ್ದಾಗ ಒಂದು, ಎರಡು, ಐದು ಟ್ರಕ್ ಎಂದು ಹೇಳುತ್ತಿದ್ದರು. ಆದರೆ ಈಗ ಈರುಳ್ಳಿಯನ್ನೇ ಕೊಡುತ್ತಿಲ್ಲ. ಹೀಗೆ ಯಾಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಕೇಂದ್ರ ಈರುಳ್ಳಿ ಕೊಡದೇ ಇರುವ ಉದ್ದೇಶ ರಾಜಧಾನಿಯಲ್ಲಿ ಬೆಲೆ ಏರಿಕೆಯಾಗುವಂತೆ ಮಾಡುವುದಾಗಿದೆ. ನ.24ರ ನಂತರ ಒಂದೇ ಒಂದು ಲಾರಿ ಈರುಳ್ಳಿಯನ್ನೂ ಕಳಿಸಿಲ್ಲ. ಹಾಗಿದ್ದರೆ, ದಾಸ್ತಾನು ಇರುವ ಈರುಳ್ಳಿಯನ್ನು ಕೊಳೆಯಲು ಬಿಡಲಾಗುತ್ತಿದೆಯೇ ಎಂದವರು ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…