ರಾಜ್ಯಗಳಿಗೆ 95 ಸಾವಿರ ಕೋಟಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Nov 16, 2021, 5:25 AM IST
ನವದೆಹಲಿ: ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 95,082 ಕೋಟಿ ರೂ. ಮೊತ್ತ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ರಾಜ್ಯಗಳ ವಿತ್ತ ಸಚಿವರ ಜತೆಗೆ ಸಭೆಯ ಬಳಿಕ ಅವರು ಮಾತನಾಡಿದ್ದಾರೆ. ನ.22ರಂದು ಸಾಮಾನ್ಯವಾಗಿ ಬಿಡುಗಡೆ ಮಾಡುವ 47,541 ಕೋಟಿ ರೂ.ಗಳಿಗೆ ಬದಲಾಗಿ ಒಂದು ಕಂತು ಮುಂಗಡ ಸಹಿತ 95,082 ಕೋಟಿ ರೂ. ಬಿಡುಗಡೆ ಮಾಡಲು ಹಣಕಾಸು ಕಾರ್ಯದರ್ಶಿಗೆ ಸೂಚಿಸಿದ್ದಾಗಿ ಹೇಳಿದ್ದಾರೆ.
ಇದರಿಂದಾಗಿ ಅವುಗಳಿಗೆ ಮೂಲಸೌಕರ್ಯ ಕ್ಷೇತ್ರಗಳಿಗೆ ವಿನಿಯೋಗಿಸಲು ಸಾಧ್ಯವಾಗಲಿದೆ ಎಂದರು ವಿತ್ತ ಸಚಿವೆ. ಕೊರೊನಾ ನಂತರ ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ರಾಜ್ಯಗಳ ಸಲಹೆ ಪಡೆಯುವ ನಿಟ್ಟಿನಲ್ಲಿ ಸಭೆ ಕರೆಯಲಾಗಿತ್ತು ಎಂದರು.
ಇದನ್ನೂ ಓದಿ:ದಾಂಪತ್ಯಕ್ಕೆ ಕಾಲಿಟ್ಟ ರಾಜ್ಕುಮಾರ್ ರಾವ್-ಪತ್ರಲೇಖಾ
ಕೇಂದ್ರವೇ ಭರಿಸಲಿದೆ:
ಪೆಟ್ರೋಲ್ ಮೇಲೆ 5 ರೂ., ಡೀಸೆಲ್ ಮೇಲೆ 10 ರೂ. ಅಬಕಾರಿ ಸುಂಕ ಕಡಿತದಿಂದ ಉಂಟಾಗಿರುವ ನಷ್ಟವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಅದನ್ನು ರಾಜ್ಯಗಳ ಮೇಲೆ ಹೊರಿಸಲಾಗುವುದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್