ಸಾಲದ ಮೇಲಿನ ಚಕ್ರಬಡ್ಡಿ ಮನ್ನಾ-ಕೇಂದ್ರ ಸರ್ಕಾರ: ಯಾರು ಅರ್ಹರು, ಯಾರಿಗೆಲ್ಲಾ ಲಾಭವಾಗಲಿದೆ?
ಕೇಂದ್ರ ಸರ್ಕಾರಕ್ಕೆ 5,500ರಿಂದ 6 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ
Team Udayavani, Oct 24, 2020, 6:32 PM IST
ನವದೆಹಲಿ: ಕೋವಿಡ್ ಸಂಕಷ್ಟದಿಂದ ಚೇತರಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಮಾರು 2 ಕೋಟಿ ರೂಪಾಯಿವರೆಗಿನ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಿದ್ದು, ಇದರಿಂದಾಗಿ 2020ರ ಮಾರ್ಚ್ ನಿಂದ ಆಗಸ್ಟ್ ವರೆಗಿನ ತಿಂಗಳ ಕಂತಿನ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಿದಂತಾಗಿದೆ.
ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ ಸಾಲದ ಕಂತು ಮರುಪಾವತಿ ಮುಂದೂಡಿಕೆ ಅವಧಿಯಲ್ಲಿನ ಬಡ್ಡಿಯ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಸಾಲದ ಮೇಲಿನ ಚಕ್ರಬಡ್ಡಿ ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ 5,500ರಿಂದ 6 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ
ಸಾಲದ ಮೇಲಿನ ಬಡ್ಡಿ ಮನ್ನಾ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಶೀಘ್ರವೇ ಬಡ್ಡಿ ಮನ್ನಾ ಕುರಿತು ನಿರ್ಧಾರ ಕೈಗೊಂಡು ಮುಂದಿನ ವಿಚಾರಣೆ ವೇಳೆ ಅಫಿಡವಿತ್ ಸಲ್ಲಿಸುವಂತೆ ಸೂಚಿಸಿತ್ತು. ನಿಗದಿಯಂತೆ ನವೆಂಬರ್ 2ರಂದು ಮತ್ತೆ ಅರ್ಜಿಯ ವಿಚಾರಣೆ ಸುಪ್ರೀಂನಲ್ಲಿ ನಡೆಯಲಿದೆ.
ಇದನ್ನೂ ಓದಿ:ಚಾಮರಾಜಪೇಟೆಯಲ್ಲಿದ್ದ ಪುಟ್ಟ ಕಿರಾಣಿ ಅಂಗಡಿ…ಇಂದು “ಕ್ವಾಲಿಟಿ ಫುಡ್ಸ್” ಆಗಿ ಫೇಮಸ್!
ಯಾರಿಗೆ ಅನ್ವಯವಾಗಲಿದೆ:
ಕೇಂದ್ರ ಸರ್ಕಾರ ಘೋಷಿಸಿದ ಈ ಚಕ್ರಬಡ್ಡಿ ಮನ್ನಾ ಎಲ್ಲಾ ಚಿಲ್ಲರೆ ಮತ್ತು ಅತೀ ಸಣ್ಣ ವ್ಯಾಪಾರಸ್ಥರಿಗೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸುಮಾರು 2 ಕೋಟಿ ರೂಪಾಯಿವರೆಗೆ ಸಾಲ ಪಡೆದಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ್ದ ಆರು ತಿಂಗಳ ಕಾಲಾವಧಿಯಲ್ಲಿ ಸಾಲದ ಕಂತಿನ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡಲಾಗಿದೆ.
*ಗೃಹ ಸಾಲ, ಶಿಕ್ಷಣ ಸಾಲಗಳು, ಕ್ರೆಡಿಟ್ ಕಾರ್ಡ್ಸ್ ಬಾಕ, ಆಟೋ ಸಾಲ, ಎಂಎಸ್ ಎಂಇ ಸಾಲ, ಗ್ರಾಹಕ ಸ್ನೇಹಿ ಸಾಲಕ್ಕೆ ಈ ಘೋಷಣೆ ಅನ್ವಯವಾಗಲಿದೆ.
*ಸಾಲ ನೀಡಿರುವ ಸಂಸ್ಥೆ ಕಡ್ಡಾಯವಾಗಿ ಬ್ಯಾಂಕ್, ಪಬ್ಲಿಕ್ ಸೆಕ್ಟರ್ ಬ್ಯಾಂಕ್, ಕೋ-ಆಪರೇಟಿವ್ ಬ್ಯಾಂಕ್ ಅಥವಾ ಗ್ರಾಮೀಣ ಬ್ಯಾಂಕ್, ಆಲ್ ಇಂಡಿಯಾ ಫೈನಾಶ್ಶಿಯಲ್ ಇನ್ಸ್ ಟಿಟ್ಯೂಷನ್, ಬ್ಯಾಂಕೇತರ ಆರ್ಥಿಕ ಕಂಪನಿ, ಹೌಸಿಂಗ್ ಫೈನಾನ್ಸಿ ಕಂಪನಿಯಾಗಿರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ
Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ
YouTube ಠಕ್ಕರ್ನೀಡಲು ಮಸ್ಕ್ ಹೊಸ ಟಿವಿ ಆ್ಯಪ್
Facebook, Instagram ಸರ್ವರ್ ಡೌನ್, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ
Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನ ಪರವಾನಿಗೆ ರದ್ದು?
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ