ಚೆನ್ನೈ ಟು ಬೆಂಗಳೂರು ಕೇವಲ 30 ನಿಮಿಷದ ಪ್ರಯಾಣ! ಏನಿದು ಹೈಪರ್ ಲೂಪ್?


Team Udayavani, Jan 16, 2017, 5:39 PM IST

bridge.jpg

ಚೆನ್ನೈ:ವಾಹನಗಳ ದಟ್ಟಣೆಯಿಂದಾಗಿ ಮಹಾನಗರಗಳಲ್ಲಿ ಸಂಚಾರಿಸುವುದೇ ದುಸ್ತರವಾಗಿದೆ. ಆ ನಿಟ್ಟಿನಲ್ಲಿ ವಾಹನ ದಟ್ಟಣೆಯಿಂದ ಪಾರಾಗಿ ಶೀಘ್ರ ತಲುಪಬಲ್ಲ ವ್ಯವಸ್ಥೆ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಡಿ ಇಡತೊಡಗಿದೆ. ಇದರಲ್ಲಿ ಬುಲೆಟ್ ಟ್ರೈನ್ ಪ್ರಸ್ತಾಪ ಈಗಾಗಲೇ ಬಂದಾಗಿದೆ. ಅದರ ಜೊತೆಗೆ ಈಗ ನಿಮಗೆ ಊಹಿಸಲೂ ಸಾಧ್ಯವಾಗದ ಹಾಗೂ ಇದು ಸಾಧ್ಯವೇ ಎಂದು ಹುಬ್ಬೇರಿಸುವಂತಹ ಮತ್ತೊಂದು ಸಾರಿಗೆ ವ್ಯವಸ್ಥೆ ಬರಲಿದೆ ಅದರ ಹೆಸರು ಹೈಪರ್ ಲೂಪ್!

ಚೆನ್ನೈ ಟು ಬೆಂಗಳೂರಿಗೆ ಕೇವಲ 30 ನಿಮಿಷದಲ್ಲೇ ಹೋಗಬಹುದು! ಅರೇ ಇದು ಊಹಿಸಲು ಸಾಧ್ಯವಿಲ್ಲ ಅಥವಾ ಇದೇನು ವಿಡಿಯೋ ಗೇಮ್ ಬಗ್ಗೆ ಹೇಳುತ್ತಿದ್ದಾರೆ ಅಂದುಕೊಂಡಿದ್ದೀರಾ? ಅಲ್ಲ ಇದು ಪ್ರಸ್ತಾವಿತ ಸಾರಿಗೆ ವ್ಯವಸ್ಥೆಯ ಮುನ್ನೋಟ!

ಒಂದು ನಗರದಿಂದ ಮತ್ತೊಂದು ನಗರಕ್ಕೆ ತೆರಳಲು ಸಾಧ್ಯವಾಗುವಂತಹ ಬಹು ನಿರೀಕ್ಷೆಯ ಹಾಗೂ ಕ್ರಾಂತಿಕಾರಿ ವ್ಯವಸ್ಥೆಯ ಪ್ರಸ್ತಾವನೆಯನ್ನು ಅಮೆರಿಕ ಮೂಲದ ಕಂಪನಿಯೊಂದು ಮುಂದಿಟ್ಟಿದೆ. ಒಂದುವೇಳೆ ಹೈಪರ್ ಲೂಪ್ ತಂತ್ರಜ್ಞಾನವೇನಾದ್ರೂ ಭಾರತಕ್ಕೆ ಬಂದ್ರೆ ಕೇವಲ 30 ನಿಮಿಷಗಳಲ್ಲಿ ಬೆಂಗಳೂರಿನಿಂದ ಚೆನ್ನೈ ತಲುಪಬಹುದು. ಅದಕ್ಕೆ ವಿಮಾನ ಪ್ರಯಾಣಕ್ಕೆ ಆದಷ್ಟು ವೆಚ್ಚವಾಗಲಿದೆ.

ಏನಿದು ಹೈಪರ್ ಲೂಪ್:
ಕಾಂಕ್ರೀಟ್ ಪಿಲ್ಲರ್ ಗಳ ಮೇಲೆ ನಿರ್ಮಿಸುವ ಹೈಪರ್ ಲೂಪ್ ಟ್ಯೂಬ್ ಮೂಲಕ ಸುಮಾರು 1200 ಕಿಮೀಟರ್ ವೇಗದಲ್ಲಿ ಪೋಡ್ ಅಥವಾ ರೈಲು ಚಲಾಯಿಸುವ ವ್ಯವಸ್ಥೆ ಇದಾಗಿದೆ. ಈ ಸುರಂಗದೊಳಗಿನ ನಿರ್ವಾತದಿಂದ ಅತೀ ವೇಗವನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಂಸ್ಥೆ ಹೇಳಿದೆ.

ಇದು ಘರ್ಷಣೆ ಮುಕ್ತ ವ್ಯಾಕ್ಯೂಮ್ ವಾತಾವರಣದ ವ್ಯವಸ್ಥೆಯಾಗಿದೆ. ಇದರಲ್ಲಿ ಗಂಟೆಗೆ 1200 ಕಿಮೀ ವೇಗದಲ್ಲಿ ವಾಹನವನ್ನು ಚಲಾಯಿಸಬಹುದು. ವಿಮಾನಕ್ಕಿಂತಲೂ ಫಾಸ್ಟಾಗಿ ಹೋಗಬಹುದು. ಹೈಪರ್ ಲೂಪ್’ನಲ್ಲಿ ಕೂತು ಪ್ರಯಾಣಿಸಿದರೆ ಏರೋಪ್ಲೇನ್’ನಲ್ಲಿದ್ದಂತೆ ಭಾಸವಾಗುತ್ತದೆ ಎಂದು ವರದಿ ವಿವರಿಸಿದೆ. ಭವಿಷ್ಯದಲ್ಲಿ ಈ ಹೈಪರ್ ಲೂಪ್ ವ್ಯವಸ್ಥೆ ಜಾರಿಗೆ ಬಂದಲ್ಲಿ ಬೆಂಗಳೂರಿನಿಂದ ಚೆನ್ನೈಗೆ ಕೇವಲ 30 ನಿಮಿಷವಾದರೆ, ಮುಂಬೈಗೆ ಒಂದು ಗಂಟೆಯಲ್ಲಿ ತಲುಪಬಹುದಾಗಿದೆ!

ಇತ್ತೀಚೆಗೆ ಕಂಪನಿ ಮಾಡಿರುವ ಪ್ರಸ್ತಾವಿತ ಮಾರ್ಗಸೂಚಿಯ ಟ್ವೀಟ್ ಪ್ರಕಾರ, ಚೆನ್ನೈ ಬೆಂಗಳೂರು, ಚೆನ್ನೈ ಟು ಮುಂಬೈ, ಬೆಂಗಳೂರು ಟು ತಿರುವನಂತಪುರಂ ಮತ್ತು ಮುಂಬೈ ಟು ದೆಹಲಿಯ ಪ್ರಸ್ತಾಪವಿದೆ.

ಹೈಪರ್ ಲೂಪ್ ಸಂಸ್ಥೆ ಈ ಬಗ್ಗೆ ಕೇಂದ್ರ ಸಾರಿಗೆ ಸಚಿವಾಲಯಕ್ಕೆ ಪತ್ರ ಬರೆದಿರುವುದಾಗಿ ಮೂಲಗಳು ತಿಳಿಸಿವೆ.ಈ ಪ್ರಸ್ತಾವಿತ ಮಾರ್ಗದಲ್ಲಿ ಬುಲೆಟ್ ರೈಲು ಓಡಿಸಲು ನಿರ್ಧರಿಸಲಾಗಿದೆ. ಅಲ್ಲದೇ ಜಪಾನ್ ಮತ್ತು ಚೀನಾ ತಂತ್ರಜ್ಞರ ತಂಡ ಹೈಸ್ಪೀಡ್ ರೈಲನ್ನು ಸಂಚರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಅಧ್ಯಯನ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

ದುಬಾರಿ ವೆಚ್ಚ!
1ಕಿಲೋ ಮೀಟರ್ ಹೈಸ್ಪೀಡ್ ಮಾರ್ಗ ನಿರ್ಮಾಣಕ್ಕೆ 300 ಕೋಟಿ ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಆದರೆ ಹೈಪರ್ ಲೂಮ್ ಪ್ರಕಾರ ಸ್ಯಾನ್ ಫ್ರಾನ್ಸಿಸ್ಕೋ ಟು ಲಾಸ್ ಏಂಜಲೀಸ್ ನಡುವಿನ ಪ್ರಸ್ತಾವಿತ ಸಾರಿಗೆಯ ಪೋಡ್ ನ ಪ್ರತಿ ಕಿಲೋ ಮೀಟರ್ ಗೆ 72 ಕೋಟಿ ರೂಪಾಯಿ ಬೇಕಾಗುವುದಾಗಿ ತಿಳಿಸಿದೆ.

ಅಬುಧಾಬಿಯಲ್ಲಿ ಯೋಜನೆಗೆ ಅಂಗೀಕಾರ ದೊರೆತಿದ್ದು, ಕೆಲವೇ ವರ್ಷಗಳಲ್ಲಿ ಅಲ್ಲಿ ಯೋಜನೆ ಶುರುವಾಗಬಹುದು. ಅಮೆರಿಕದಲ್ಲಿ ಯೋಜನೆ ಕಾರ್ಯಗತಗೊಳಿಸಲು ಸಮೀಕ್ಷೆ ಮತ್ತು ಅಧ್ಯಯನಗಳು ನಡೆಯುತ್ತಿವೆ. ಭಾರತ ಸೇರಿದಂತೆ ಒಟ್ಟು 20 ದೇಶಗಳ ಮುಂದೆ ಹೈಪರ್’ಲೂಪ್ ಯೋಜನೆಯ ಪ್ರಸ್ತಾವವಿದೆ. 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.