ಡಿ.31ರ ನಂತರ ಈ ಬ್ಯಾಂಕ್ ಗಳ ಚೆಕ್ ಪುಸ್ತಕಕ್ಕೆ ಇಲ್ಲ ಮಾನ್ಯತೆ!
Team Udayavani, Dec 27, 2017, 3:05 PM IST
ನವದೆಹಲಿ: ಬ್ಯಾಂಕ್ ಗ್ರಾಹಕರೇ ಗಮನಿಸಿ… ಡಿಸೆಂಬರ್ 31ರ ನಂತರ ಈ ಬ್ಯಾಂಕ್ ಗಳ ಚೆಕ್ ಪುಸ್ತಕ ಉಪಯೋಗಕ್ಕೆ ಬರುವುದಿಲ್ಲ. ಹೌದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹವರ್ತಿ ಬ್ಯಾಂಕ್ ಗಳಾದ ಭಾರತೀಯ ಜನತಾ ಮಹಿಳಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಮತ್ತು ಜೈಪುರ್. ಸ್ಟೇಟ್ ಬ್ಯಾಂಕ್ ಆಫ್ ರಾಯ್ ಪುರ್, ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಗಳ ಚೆಕ್ ಪುಸ್ತಕ ಡಿಸೆಂಬರ್ 31ರ ನಂತರ ಅಮಾನ್ಯವಾಗಲಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಈ ಹಿನ್ನೆಲೆಯಲ್ಲ ಎಸ್ ಬಿಐ ಸಹವರ್ತಿತ ಬ್ಯಾಂಕ್ ಖಾತೆದಾರರು ನೂತನ ಐಎಫ್ ಎಸ್ ಸಿ ಕೋಡ್ ಹೊಂದಿರುವ ನೂತನ ಚೆಕ್ ಪುಸ್ತಕವನ್ನು ಪಡೆದುಕೊಳ್ಳಬೇಕಾಗಲಿದೆ. ಈ ಬ್ಯಾಂಕ್ ಗಳು ಎಸ್ ಬಿಐನಲ್ಲಿ ವಿಲೀನಗೊಂಡ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರ ಬಳಿಕ ಚೆಕ್ ಪುಸ್ತಕಕ್ಕೆ ಮಾನ್ಯತೆ ಇಲ್ಲ ಎಂದು ತಿಳಿಸಿತ್ತು.
ಆದರೆ ಸಹವರ್ತಿತ ಬ್ಯಾಂಕ್ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನ ಚೆಕ್ ಪುಸ್ತಕ ಪಡೆಯಲು ಡಿಸೆಂಬರ್ 31ರವರೆಗೆ ಗಡುವನ್ನು ವಿಸ್ತರಿಸಿ ಆರ್ ಬಿಐ ಆದೇಶ ನೀಡಿತ್ತು ಎಂದು ವರದಿ ತಿಳಿಸಿದೆ.
ಹೊಸ ಚೆಕ್ ಪುಸ್ತಕ ಪಡೆಯೋದು ಹೇಗೆ?
ಹೊಸ ಚೆಕ್ ಪುಸ್ತಕಕ್ಕಾಗಿ ಅಪ್ಲೈ ಮಾಡಬೇಕು, ಇಲ್ಲವೇ ಗ್ರಾಹಕರು ಸಮೀಪದ ಎಸ್ ಬಿಐ ಶಾಖೆಗಳಿಗೆ ಭೇಟಿ ನೀಡಬೇಕು ಅಥವಾ ಎಟಿಎಂ, ಮೊಬೈಲ್ ಆಪ್ ಮೂಲಕ ಚೆಕ್ ಪುಸ್ತಕ ಪಡೆಯಲು ಸಹಾಯಕವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Share Market; ರೇಖಾ ಜುಂಜುನ್ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್