ಚಿನ್ನ, ತೈಲ ಆಮದು ನಿಯಂತ್ರಣಕ್ಕೆ ಶುಲ್ಕಾಸ್ತ್ರ
Team Udayavani, Jul 2, 2022, 6:25 AM IST
ಕಚ್ಚಾ ತೈಲ ಮತ್ತು ಚಿನ್ನದ ಆಮದು ಹಾಗೂ ರಫ್ತುಗಳ ಮೇಲೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಕೆಲವು ಕ್ರಮಗಳನ್ನು ಕೈಗೊಂಡಿದೆ. ಪೆಟ್ರೋಲ್, ಡೀಸೆಲ್ ರಫ್ತಿನ ಮೇಲೆ ಕ್ರಮವಾಗಿ ಪ್ರತೀ ಲೀಟರ್ಗೆ 6 ರೂ., 13 ರೂ.ಗಳನ್ನು ವಿಧಿಸಲು ತೀರ್ಮಾನಿಸಿದೆ. ಚಿನ್ನದ ಮೇಲಿನ ಆಮದು ಸುಂಕವನ್ನು ಹಾಲಿ ಶೇ.10.75ರಿಂದ ಶೇ. 15ಕ್ಕೆ ಹೆಚ್ಚಿಸಲಾಗಿದೆ. ಕಚ್ಚಾ ತೈಲದ ಮೇಲೆ ಪ್ರತೀ ಟನ್ಗೆ 23,250 ರೂ.ಗಳನ್ನು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್ಎಇಡಿ) ಎಂದು ವಿಧಿಸಲಾಗುತ್ತದೆ.
ಯಾವ ಕಾರಣಕ್ಕಾಗಿ ಸೆಸ್ ವಿಧಿಸಲಾಗಿದೆ?
ದೇಶದಲ್ಲಿರುವ ಕಚ್ಚಾ ತೈಲ ಉತ್ಪಾದಕರು ಇತರ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಂಡು ಅಂತಾರಾಷ್ಟ್ರೀಯ ಮಾರುಕಟ್ಟೆಯ ದರದಲ್ಲಿ ಮಾರಾಟ ಮಾಡಿ, ಲಾಭ ಪಡೆಯುವುದನ್ನು ತಡೆಯಲು ಇಂಥ ಕ್ರಮ ಕೈಗೊಳ್ಳಲಾಗಿದೆ. ರಿಫೈನರಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ದರಕ್ಕೆ ಅನುಸಾರವಾಗಿ ತೈಲೋತ್ಪನ್ನಗಳನ್ನು ರಫ್ತು ಮಾಡುತ್ತಾರೆ. ಇದರಿಂದಾಗಿ ದೇಶೀಯ ಮಾರುಕಟ್ಟೆಗೆ ಕೊರತೆ ಉಂಟಾಗುತ್ತದೆ. ಹೀಗಾಗಿ ರಫ್ತು ಕುಂಠಿತಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇಷ್ಟು ಮಾತ್ರವಲ್ಲದೆ, ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯದಲ್ಲಿ ಕೂಡ ತೈಲೋತ್ಪನ್ನ ರಫ್ತು ಮಾಡುವ ಕಂಪೆನಿಗಳು ಶೇ. 50ರಷ್ಟು ಉತ್ಪನ್ನಗಳನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಗ್ಗೆ ಘೋಷಣೆಯನ್ನೂ ಮಾಡಿಕೊಳ್ಳಬೇಕು.
ಬದಲಾವಣೆ ಏಕೆ?
ಜೂನ್ನಲ್ಲಿ ದೇಶದ ಕೆಲವು ನಗರಗಳಲ್ಲಿ ಇರುವ ಬಂಕ್ಗಳಲ್ಲಿ ಪೆಟ್ರೋಲ್, ಡೀಸೆಲ್ ಪೂರೈಕೆ ಮಾಡುವುದರ ಮೇಲೆ ನಿಯಂತ್ರಣ ಹೇರಿಕೊಂಡಿದ್ದವು. ಹೀಗಾಗಿ ನಾಗರಿಕರಲ್ಲಿ ಪೆಟ್ರೋಲ್, ಡೀಸೆಲ್ ಖರೀದಿಗೆ ಸರಕಾರದ ವತಿಯಿಂದಲೇ ಮಿತಿ ಹೇರಲಾಗಿದೆ ಎಂಬ ಭಾವನೆಯೂ ಮೂಡಿತ್ತು. ಆದರೆ ಸರಕಾರ ದೇಶದಲ್ಲಿ ತೈಲ ಸಂಗ್ರಹ ಸಾಕಷ್ಟು ಇದೆ ಎಂದು ಹೇಳಿತ್ತು. ಅಮೆರಿಕದ ಡಾಲರ್ ಎದುರು ರೂಪಾಯಿ ಸತತ ಕುಸಿತ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು, ಖಾಸಗಿ ತೈಲ ಕಂಪೆನಿಗಳು ಚಿಲ್ಲರೆ ಮಾರಾಟದಿಂದ ನಷ್ಟ ಉಂಟಾಗುತ್ತಿವೆ ಎಂದು ಪ್ರಕಟಿಸಿದವು. ಹೀಗಾಗಿಯೇ ಜೂ.15ರ ವೇಳೆಗೆ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶದ ಕೆಲವು ನಗರಗಳ ಬಂಕ್ಗಳಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಕಂಡು ಬಂದಿದ್ದವು.
ಚಿನ್ನದ ಆಮದಿಗೆ ಏಕೆ ಸುಂಕ?
ಇತ್ತೀಚಿನ ದಿನಗಳಲ್ಲಿ ಚಿನ್ನದ ಆಮದು ಹೆಚ್ಚಾಗಿದೆ. ಮೇನಲ್ಲಿ 107 ಟನ್ ಚಿನ್ನ ಆಮದು ಮಾಡಲಾಗಿತ್ತು. ಇದು ಚಾಲ್ತಿ ಖಾತೆಯ ಕೊರತೆಯ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಆಮದು ಸುಂಕವನ್ನು ಶೇ.10.75ರಿಂದ ಶೇ.15ಕ್ಕೆ ಏರಿಕೆ ಮಾಡಲಾಗಿದೆ. ಈ ಹಿಂದೆ ಕನಿಷ್ಠ ಕಸ್ಟಮ್ಸ್ ಸುಂಕ ಶೇ.7.5 ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ