ಆರ್ಥಿಕ ಸಂಕಷ್ಟ : ವೇತನರಹಿತ ರಜೆ ತೆಗೆದುಕೊಳ್ಳಿ : ಹಿರಿಯ ಉದ್ಯೋಗಿಗಳಿಗೆ ಇಂಡಿಗೋ ಸೂಚನೆ


Team Udayavani, Jun 3, 2021, 4:56 PM IST

covid-2nd-wave-impact-indigo-to-make-employees-go-on-leave-without-pay-for-few-days

ನವ ದೆಹಲಿ : ಕೋವಿಡ್ ನ ಪರಿಸ್ಥಿತಿಯಿಂದಾಗಿ ಎಲ್ಲಾ ಕ್ಷೇತ್ರಗಳು ಸಂಕಷ್ಟದಲ್ಲಿವೆ. ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳು ಹರಸಾಹಸಪಡುತ್ತಿವೆ.

ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಎರಡನೇ ಅಲೆಯಿಂದಾಗಿ ಇಂಡಿಗೋ ತನ್ನ ಹಿರಿಯ ಉದ್ಯೋಗಿಗಳಿಗೆ ಸೆಪ್ಟೆಂಬರ್‌ ವರೆಗೆ ತಿಂಗಳಿಗೆ ನಾಲ್ಕು ದಿನಗಳು ವೇತನರಹಿತವಾಗಿ ಕಡ್ಡಾಯ ರಜೆ (ಎಲ್ ಡಬ್ಲ್ಯು ಪಿ) ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ :ಸಮರೋಪಾದಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಕೋವಿಡ್ ವಿರುದ್ಧ ಹೋರಾಡುತ್ತಿವೆ : ಶಾ 

ಕೋವಿಡ್ ಸೋಂಕಿನ ಕಾರಣದಿಂದಾಗಿ ವಿಮಾನಯಾನ ಮಾಡುವ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು, ಬಹುತೇಕ ವಿಮಾನಯಾನ ಸಂಸ್ಥೆಗಳು ದೊಡ್ಡ ಪ್ರಮಾಣದ ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಇಂಡಿಗೋ ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ.

ಈ ಬಗ್ಗೆ  ಪೈಲೆಟ್‌ ಗಳಿಗೆ ಮಿಂಚಂಚೆ ಅಥವಾ ಇಮೇಲ್‌ ಮೂಲಕ ಮಾಹಿತಿ ನೀಡಿದ ಇಂಡಿಗೊದ ಫ್ಲೈಟ್ ಆಪರೇಶನ್ಸ್ ಹಿರಿಯ ಉಪಾಧ್ಯಕ್ಷ ಅಶೀಮ್ ಮಿತ್ರ,  ಕೋವಿಡ್ ಸೋಂಕಿನ ಎರಡನೇ ಅಲೆ ಎಲ್ಲಾ ಕ್ಷೇತ್ರಗಳಿಗೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಹೊಡೆತವನ್ನು ನೀಡಿದೆ. ವಿಮಾನಯಾನ ಮಾಡುವ ಪ್ರಯಾಣಿಕರು ಈ ಕೋವಿಡ್ ನ ಕಾರಣದಿಂದಾಗಿ ಕಡಿಮೆಯಾಗಿದ್ದಾರೆ. ಇದು ನಮ್ಮ ಆರ್ಥಿಕ ಹಾಗೂ ವಾಣಿಜ್ಯ ವಹಿವಾಟಿನ ಮೇಲೂ ಕೂಡ ದೊಡ್ಡ ಮಟ್ಟದಲ್ಲಿ ಸಂಕಷ್ಟಕ್ಕೆ ಈಡಾಗುವ ಹಾಗೆ ಮಾಡಿದೆ ಎಂದು ಅವರು ಹೇಳಿದ್ದಾರೆ.

ವಿಮಾನಯಾನದ ಬಹುಪಾಲು ಉದ್ಯೋಗಿಗಳು ಬ್ಯಾಂಡ್ ಬಿ ಮತ್ತು ಬ್ಯಾಂಡ್ ಎ ನಲ್ಲಿದ್ದಾರೆ, ಅವುಗಳು ಕೆಳಮಟ್ಟದ ಬ್ಯಾಂಡ್‌ ಗಳಾಗಿವೆ. ಹೀಗಾಗಿ 2021ರ ಜೂನ್ 1 ರಿಂದ ಮುಂದಿನ 3 ತಿಂಗಳವರೆಗೆ ಅಂದರೇ, ಸಂಪ್ಟೆಂಬರ್ ತನಕ ತಿಂಗಳಲ್ಲಿ 4 ದಿನಗಳ ಕಡ್ಡಾಯ ವೇತನವಿಲ್ಲದೆ ರಜೆ ತೆಗೆದುಕೊಳ್ಳಬೇಕೆಂದು ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ ಎಂದು ಅವರು ಇಮೇಲ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮಾನವೀಯತೆ ಮೆರೆಯುವ ಸಮಯ, ರಾಜಕೀಯ ಮಾಡುವುದು ಸರಿಯಲ್ಲ ರೇಣುಕಾಚಾರ್ಯ

ಇನ್ನು,  ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ ಕಳೆದ ವಾರ  ನಿರ್ಧರಿಸಿದೆ.

40 ನಿಮಿಷಗಳಿಂತ ಕಡಿಮೆ ಅವಧಿ ಇರುವ ದೇಶದ ಒಳಗಿನ ವಿಮಾನಯಾನದ ವೆಚ್ಚ ದುಬಾರಿಯಾಗಲಿದ್ದು, 2,300 ರೂಪಾಯಿಗಳಿಂದ 2,600 ರೂಪಾಯಿಗಳಿಗೆ ಏರಿಸಲಾಗಿದೆ. ಈಗಿರುವ ದರದ ಶೇಕಡಾ 13 ರಷ್ಟು ಹೆಚ್ಚಾಗಿದೆ.

2,900 ರೂ ವೆಚ್ಚದಲ್ಲಿ 40 ನಿಮಿಷದಿಂದ ಒಂದು ಗಂಟೆಯ ನಡುವಿನ ವಿಮಾನಯಾನವನ್ನು 3,300 ರೂ. ಗೆ ಏರಿಸಲಾಗಿದೆ.  ಇನ್ನು,  60 ರಿಂದ 90 ನಿಮಿಷಗಳ ನಡುವಿನ ವಿಮಾನಯಾನಕ್ಕೆ 4,000 ರೂ, 90 ರಿಂದ 120 ನಿಮಿಷಗಳ ವಿಮಾನಯಾನಕ್ಕೆ 4,700 ರೂ, 150 ರಿಂದ 180 ನಿಮಿಷಗಳ ವಿಮಾನ ಯಾನಕ್ಕೆ 6,100 ರೂ. ಹಾಗೂ 180 ರಿಂದ 210 ನಿಮಿಷಗಳ ವಿಮಾನಯಾನಕ್ಕೆ 7,400 ರೂ. ನಿಗದಿಪಡಿಸಲು ಸಚಿವಾಲಯ ನಿರ್ಧರಿಸಿತ್ತು.

ಇದನ್ನೂ ಓದಿ : ದೆಹಲಿ: ಕಳೆದ 24ಗಂಟೆಗಳಲ್ಲಿ 487 ಕೋವಿಡ್ ಪ್ರಕರಣ ಪತ್ತೆ, 45 ಮಂದಿ ಸಾವು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.