ಗ್ರಾಹಕರ ಗಮನಕ್ಕೆ; ಶುಕ್ರವಾರ 5 ಜಿಲ್ಲೆಗಳಲ್ಲಿ ಪೆಟ್ರೋಲ್ ಬಂಕ್ ಬಂದ್
Team Udayavani, Jun 15, 2017, 5:42 PM IST
ಬೆಂಗಳೂರು: ನಾಳೆಯಿಂದ ಪ್ರತಿನಿತ್ಯವೂ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಾಳೆ ಮೈಸೂರು ವಿಭಾಗದ ಪೆಟ್ರೋಲ್ ಬಂಕ್ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬಂಕ್ ಬಂದ್ ಇಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರತಿನಿತ್ಯ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಬೇಕೆಂಬ ಕೇಂದ್ರದ ನಿಯಮ ವಿರೋಧಿಸಿ ಶುಕ್ರವಾರ ಮೈಸೂರು ವಿಭಾಗದ ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ರಾಮನಗರದಲ್ಲಿರುವ ಪೆಟ್ರೋಲ್ ಬಂಕ್ ಕಾರ್ಯಾಚರಿಸುವುದಿಲ್ಲ ಎಂದು ಮೈಸೂರು ವಿಭಾಗದ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇಂದು ರಾತ್ರಿ ಮಧ್ಯರಾತ್ರಿ 12ಗಂಟೆಯಿಂದ ಶುಕ್ರವಾರ ಮಧ್ಯರಾತ್ರಿ 12ಗಂಟೆವರೆಗೆ ಪೆಟ್ರೋಲ್ ಬಂಕ್ ಬಂದ್ ಇರಲಿದೆ ಎಂದು ಮೂಲಗಳು ಹೇಳಿವೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಕಡೆ ಬಂದ್ ಇಲ್ಲ ಎಂದು ಬೆಂಗಳೂರು ಪೆಟ್ರೋಲ್ ಮಾಲೀಕರ ಸಂಘದ ಅಧ್ಯಕ್ಷ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ