ವಾರಾಂತ್ಯಕ್ಕೆ 4.90 ಲಕ್ಷ ಕೋಟಿ ನಷ್ಟ
ಬಿಎಸ್ಇನಲ್ಲಿ ಒಂದೇ ದಿನ 1,020.80 ಪಾಯಿಂಟ್ಸ್ ಕುಸಿತ
Team Udayavani, Sep 24, 2022, 6:05 AM IST
ಹೊಸದಿಲ್ಲಿ/ಮುಂಬಯಿ: ಬಾಂಬೆ ಷೇರು ಪೇಟೆಯಲ್ಲಿ ಹೂಡಿಕೆದಾರರಿಗೆ ವಾರಾಂತ್ಯದಲ್ಲಿ ಭಾರಿ ಆಘಾತ ಉಂಟಾಗಿದೆ. ಶುಕ್ರವಾರದ ದಿನಾಂತ್ಯಕ್ಕೆ ಬಿಎಸ್ಇನಲ್ಲಿ ಸೂಚ್ಯಂಕ 1,020.80 ಪಾಯಿಂಟ್ಸ್ ಪತನಗೊಂಡು, 58,098.92ರಲ್ಲಿ ಮುಕ್ತಾಯ ವಾಗಿದೆ. ಮಧ್ಯಾಂತರದಲ್ಲಿ ಸೂಚ್ಯಂಕ 1,137.77 ಪಾಯಿಂಟ್ಸ್ ವರೆಗೆ ಕುಸಿತ ಕಂಡಿತ್ತು. ಇದರಿಂದಾಗಿ ಬಿಎಸ್ಇ ಹೂಡಿಕೆದಾರರಿಗೆ ಬರೋಬ್ಬರಿ 4.90 ಲಕ್ಷ ಕೋಟಿ ರೂ. ನಷ್ಟ ಉಂಟಾಗಿದೆ. ಈ ವಾರದಲ್ಲಿ ಸತತ ಮೂರನೇ ದಿನವೂ ಹೂಡಿಕೆದಾರರಿಗೆ ನಷ್ಟ ಉಂಟಾ ಗಿದೆ. ಒಟ್ಟು ಮೂರು ದಿನಗಳಲ್ಲಿ ಹೂಡಿಕೆ ದಾರರಿಗೆ 6.77 ಲಕ್ಷ ಕೋಟಿ ರೂ. ನಷ್ಟ ಉಂಟಾಗಿದೆ.
ಇನ್ನು ನಿಫ್ಟಿ ಸೂಚ್ಯಂಕ 302.45 ಪಾಯಿಂಟ್ಸ್ ಕುಸಿತ ಅನುಭವಿಸಿದೆ. ಇದರಿಂದಾಗಿ ದಿನಾಂತ್ಯಕ್ಕೆ 17,327.45 ಪಾಯಿಂಟ್ಸ್ಗೆ ಸೂಚ್ಯಂಕ ಇಳಿಕೆ ಯಾಗಿದೆ. ಅಮೆರಿಕದ ಫೆಡರಲ್ ರಿಸರ್ವ್ನ ಬಡ್ಡಿ ದರದಲ್ಲಿ ಸತತವಾಗಿ ಏರಿಕೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಗತ್ತಿನ ಷೇರುಪೇಟೆಯಲ್ಲಿ ಏರಿಳಿತ ಉಂಟಾಗುತ್ತಿದೆ.
ಮತ್ತೆ ರೂಪಾಯಿ ಕುಸಿತ
ಅಮೆರಿಕದ ಡಾಲರ್ ಎದುರು ರೂಪಾಯಿ 19 ಪೈಸೆ ಕುಸಿತ ಕಂಡಿದೆ. ಹೀಗಾಗಿ, ದಿನಾಂತ್ಯಕ್ಕೆ 80.98 ರೂ.ಗಳಿಗೆ ಮುಕ್ತಾಯವಾಗಿದೆ. ಸತತ ಮೂರನೇ ಬಾರಿಗೆ ಇಳಿಕೆಯ ಹಂತವನ್ನು ರೂಪಾಯಿ ಅನುಭವಿಸುತ್ತಿದೆ. ಒಟ್ಟಾರೆಯಾಗಿ ಮೂರು ದಿನಗಳ ಅವಧಿಯಲ್ಲಿ 124 ಪೈಸೆ ಇಳಿಕೆಯಾಗಿದೆ. ಗುರುವಾರ 90 ಪೈಸೆ ಕುಸಿತವನ್ನು ರೂಪಾಯಿ ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ