ಜನರ ಹಣ ಸೇಫ್ ಆಗಿದೆ: ಪಿಯೂಷ್ ಗೋಯಲ್
Team Udayavani, Jun 20, 2018, 5:04 PM IST
ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಸಾರ್ವಜನಿಕರ ಠೇವಣಿಯು ಅತ್ಯಂತ ಸುರಕ್ಷಿತವಾಗಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ಸರ್ಕಾರ ನಿಮ್ಮ ಜತೆಗಿದೆ ಎಂದು ವಿತ್ತ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಹಲವು ಬ್ಯಾಂಕು ವಂಚನೆ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಅವರು ಈ ಭರವಸೆ ನೀಡಿದ್ದಾರೆ. ಇದೇ ವೇಳೆ, ಆರ್ಬಿಐಗೆ ಹೆಚ್ಚಿನ ಅಧಿಕಾರ ನೀಡಲು ಸರ್ಕಾರ ಮುಕ್ತವಾಗಿದೆ ಎಂದೂ ಅವರು ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ನಮಗೆ ಹೆಚ್ಚಿನ ಅಧಿಕಾರದ ಅವಶ್ಯಕತೆಯಿದೆ ಎಂದು ಇತ್ತೀಚೆಗೆ ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ಕೇಳಿಕೊಂಡಿದ್ದರು.