ಹೂಡಿಕೆಗೆ ಹಿಂಜರಿಯದಿರಿ: ನಿರ್ಮಲಾ
Team Udayavani, Oct 15, 2019, 5:37 AM IST
ಹೊಸದಿಲ್ಲಿ: ಇಂಧನ ಕ್ಷೇತ್ರದಲ್ಲಿನ ಅದರಲ್ಲೂ ವಿಶೇಷವಾಗಿ ಪುನರ್ ನವೀಕರಿ ಸಬಲ್ಲ ಇಂಧನ ಕ್ಷೇತ್ರದಲ್ಲಿನ ಗುತ್ತಿಗೆ ಮಾದರಿಯ ಒಪ್ಪಂದಗಳನ್ನು ಭಾರತ ಸರಕಾರ ಗೌರವಿಸುತ್ತದೆ. ಹಾಗಾಗಿ, ಈ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವವರು ಹಿಂಜರಿಯಬೇಕಿಲ್ಲ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸೆರಾ ವೀಕ್ನ ಇಂಡಿಯಾ ಎನರ್ಜಿ ಫೋರಂ ಸಮ್ಮೇಳನದಲ್ಲಿ ಮಾತನಾಡಿದ ಅವರು, “”2022ರ ಹೊತ್ತಿಗೆ ಭಾರತವನ್ನು 175 ಗಿಗಾ ವ್ಯಾಟ್ನಷ್ಟು ವಿದ್ಯುತ್ ಉತ್ಪಾದಿಸುವ ರಾಷ್ಟ್ರವನ್ನಾಗಿಸುವ ಗುರಿಯನ್ನು ಸರಕಾರ ಹೊಂದಿದೆ. ಮುಂದಿನ ಮೂರು ವರ್ಷಗಳಲ್ಲಿ ಭಾರತೀಯ ಇಂಧನ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಹೂಡಿಕೆ ನಿರೀಕ್ಷಿಸಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ. ಇತ್ತೀಚೆಗೆ, ಆಂಧ್ರಪ್ರದೇಶದಲ್ಲಿ ಪುನರ್ನವೀಕರಿಸಬಹುದಾದ ಇಂಧನ ಕ್ಷೇತ್ರ ದಲ್ಲಿ ಹೂಡಿಕೆ ಮಾಡಿರುವ ಕೆಲವು ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ಶುಲ್ಕ ವಿಚಾರ ದಲ್ಲಿ ಸರಕಾರ ಹಾಗೂ ಆ ಸಂಸ್ಥೆಗಳ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಇದರಿಂದ ಭಾರತೀಯ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಕಂಪನಿಗಳು ಹಿಂದೇಟು ಹಾಕಬಹುದು ಎಂಬ ಭೀತಿ ಆವರಿಸಿತ್ತು. ಈ ಹಿನ್ನೆಲೆಯಲ್ಲಿ, ನಿರ್ಮಲಾ ಅಭಯ ಹಸ್ತ ನೀಡಿದ್ದಾರೆ.
ದೊಡ್ಡ ಮೊತ್ತದ ಸಾಲ ವಿಲೇವಾರಿ: ಅ.1ರಿಂದ 9ರವರೆಗೆ ವಿವಿಧ ಬ್ಯಾಂಕುಗಳು ನಡೆಸಿದ ಸಾಲ ಮೇಳದಲ್ಲಿ 81,781 ಕೋಟಿ ರೂ. ಮೊತ್ತದ ಸಾಲ ವಿತರಿಸ ಲಾಗಿದೆ ಎಂದು ವಿತ್ತ ಕಾರ್ಯದರ್ಶಿ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ