ಕುಡಿದ ಅಮಲಿನಲ್ಲಿ ವಿಮಾನದೊಳಗೆ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದ ಪ್ರಯಾಣಿಕ!
ಮತ್ತೊಬ್ಬ ಪ್ರಯಾಣಿಕ ಗದರಿಸುವವರೆಗೆ ಆತ ಹಾಗೇ ನಿಂತಿದ್ದ ಎಂದು ವರದಿ ವಿವರಿಸಿದೆ.
Team Udayavani, Jan 4, 2023, 11:34 AM IST
ನವದೆಹಲಿ: ನ್ಯೂಯಾರ್ಕ್ ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾದಲ್ಲಿ ಕಂಠಪೂರ್ತಿ ಕುಡಿದು ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿ ಅಸಹ್ಯಕರವಾಗಿ ನಡೆದುಕೊಂಡಿರುವ ಘಟನೆ ನವೆಂಬರ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ
ನವೆಂಬರ್ 26ರಂದು ನ್ಯೂಯಾರ್ಕ್ ನಿಂದ ದೆಹಲಿಗೆ ಏರ್ ಇಂಡಿಯಾದ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿ, ಕೆಲ ಹೊತ್ತು ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಿದ್ದ ಎಂದು ವರದಿ ಹೇಳಿದೆ.
ವಿಮಾನದಲ್ಲಿ ರಾತ್ರಿ ಊಟವಾದ ನಂತರ ಲೈಟ್ಸ್ ಗಳನ್ನು ಆಫ್ ಮಾಡಿದ್ದ ನಂತರ ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬ ತನ್ನ ಸೀಟ್ ನಿಂದ ಎದ್ದು ಮಹಿಳೆ ಮೇಲೆ ಮೂತ್ರ ಮಾಡಿದ್ದು, ಮತ್ತೊಬ್ಬ ಪ್ರಯಾಣಿಕ ಗದರಿಸುವವರೆಗೆ ಆತ ಹಾಗೇ ನಿಂತಿದ್ದ ಎಂದು ವರದಿ ವಿವರಿಸಿದೆ.
ಮೂತ್ರದಿಂದ ಆಕೆಯ ಬಟ್ಟೆ, ಬ್ಯಾಗ್ ಒದ್ದೆಯಾಗಿತ್ತು. ಮಹಿಳೆ ಈ ಬಗ್ಗೆ ವಿಮಾನದ ಸಿಬಂದಿ ಬಳಿ ದೂರು ನೀಡಿದ್ದ ನಂತರ ಮಹಿಳೆಗೆ ಬೇರೆ ಬಟ್ಟೆ ಮತ್ತು ಸ್ಲಿಪ್ಪರ್ಸ್ ನೀಡಿ, ಸಮಾಧಾನ ಪಡಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಘಟನೆ ನವೆಂಬರ್ ನಲ್ಲಿ ನಡೆದಿದ್ದು, ಈ ಬಗ್ಗೆ ಮಹಿಳೆ ಟಾಟಾ ಗ್ರೂಪ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಘಟನೆ ತಡವಾಗಿ ಬಹಿರಂಗಗೊಂಡಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕನ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿರುವುದಾಗಿ ಎಎನ್ ಐ ವರದಿ ಮಾಡಿದೆ. ಘಟನೆ ಬಗ್ಗೆ ಏರ್ ಇಂಡಿಯಾ ಆಂತರಿಕ ಸಮಿತಿಯನ್ನು ರಚಿಸಲು ಶಿಫಾರಸು ಮಾಡಿದ್ದು, “ನೋ ಫ್ಲೈ ಲಿಸ್ಟ್(ಪ್ರಯಾಣಿಸಲು ನಿರ್ಬಂಧ) ಗೆ ಸೇರ್ಪಡೆಗೊಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್