ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ


Team Udayavani, Jun 1, 2023, 7:12 AM IST

ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ

ಹೊಸದಿಲ್ಲಿ: ದೇಶದ ಅರ್ಥ ವ್ಯವಸ್ಥೆ ಸ್ಥಿರವಾಗಿದೆ ಮತ್ತು ಬೆಳವಣಿಗೆ ಸಾಧಿಸುತ್ತಿದೆ ಎಂಬುದಕ್ಕೆ ಮತ್ತೂಂದು ದಾಖಲೆ ಲಭ್ಯವಾಗಿದೆ. ಕಳೆದ ವಿತ್ತೀಯ ವರ್ಷದ ಕೊನೆಯ ತ್ತೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇ.6.1ರ ಬೆಳವಣಿಗೆ ಸಾಧಿಸಿದೆ. ಹೀಗಾಗಿ ನಾಲ್ಕೂ ತ್ತೈಮಾಸಿಕಗಳ ಲೆಕ್ಕಾಚಾರದಲ್ಲಿ ಒಟ್ಟಾರೆಯಾಗಿ ದೇಶದ ಜಿಡಿಪಿ ದರ ಶೇ.7.2 ನಿರೀಕ್ಷಿಸಲಾಗಿದೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಸಾಧಿಸುತ್ತಿರುವ ಅರ್ಥ ವ್ಯವಸ್ಥೆಗಳಲ್ಲಿ ಭಾರತವೇ ಪ್ರಥಮ ಎಂಬ ಹೆಗ್ಗಳಿಕೆಯೂ ಲಭಿಸಿದೆ.

ಕೇಂದ್ರ ಸರಕಾರದ ಸಾಂಖಿಕ ಮತ್ತು ಯೋಜನೆಗಳ ಅನುಷ್ಠಾನ ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ದತ್ತಾಂಶಗಳಲ್ಲಿ ಈ ವಿಷಯ ಸ್ಪಷ್ಟವಾಗಿದೆ. 2021-22ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ, ಈ ಜಿಡಿಪಿ ಪ್ರಮಾಣ ತುಸು ಕಡಿಮೆಯೇ. ಆಗ ಶೇ.9.1ರಷ್ಟು ಜಿಡಿಪಿ ದರ ದಾಖಲಾಗಿತ್ತು.

ಕೃಷಿ, ಉತ್ಪಾದನೆ ಕ್ಷೇತ್ರ, ಗಣಿಗಾರಿಕೆ ಮತ್ತು ನಿರ್ಮಾಣ ಕ್ಷೇತ್ರಗಳ ಉತ್ತಮ ಸಾಧನೆಯಿಂದ 2022-23ನೇ ಸಾಲಿನ ವಿತ್ತ ವರ್ಷದ ಕೊನೆಯ ತ್ತೈಮಾಸಿಕದಲ್ಲಿ ತೃಪ್ತಿದಾಯಕ ಸಾಧನೆ ಮಾಡಲಾಗಿದೆ. ಆರ್‌ಬಿಐ ನೀಡಿದ್ದ ಆರ್ಥಿಕ ಮುನ್ನೋಟದಲ್ಲಿ ಕಳೆದ ವಿತ್ತೀಯ ವರ್ಷದ ಕೊನೆಯ ತ್ತೈಮಾಸಿಕದಲ್ಲಿ ಶೇ.5.1, ಎಸ್‌ಬಿಐ ಸಂಶೋಧನ ಕೇಂದ್ರದ ಪ್ರಕಾರ ಶೇ.5.5ರ ದರಲ್ಲಿ ಜಿಡಿಪಿ ವೃದ್ಧಿಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.

ಮೌಲ್ಯದ ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 2022-23ನೇ ಸಾಲಿನ ವಿತ್ತೀಯ ವರ್ಷದಲ್ಲಿ 160.06 ಲಕ್ಷ ಕೋಟಿ ರೂ. 2021-22ನೇ ಸಾಲಿನಲ್ಲಿ ಅದರ ಮೌಲ್ಯ 149.26 ಲಕ್ಷ ಕೋಟಿ ರೂ. ಆಗಿತ್ತು. ಇದೇ ವೇಳೆ, ಆರ್‌ ಬಿಐ ನೀಡಿದ್ದ ಅಂದಾಜು ಲೆಕ್ಕಾಚಾರವನ್ನೂ ಮೀರಿ ಭಾರತದ ಜಿಡಿಪಿ ಶೇ.7.2ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಕೇಂದ್ರ ಸರಕಾರದ ವರದಿ ಹೇಳಿದೆ. ಆರ್‌ ಬಿಐ ಶೇ.7ರಷ್ಟು ಬೆಳವಣಿಗೆಯಾಗಬಹುದು ಎಂದು ಹೇಳಿತ್ತು.

ಹಿಂದಿನ ತ್ತೈಮಾಸಿಕಗಳಲ್ಲಿ
2022ರ ಜುಲೈ-ಸೆಪ್ಟಂಬರ್‌ನಲ್ಲಿ ಶೇ.6.2, ಅಕ್ಟೋಬರ್‌-ಡಿಸೆಂಬರ್‌ ಅವಧಿಯಲ್ಲಿ ಶೇ.4.5ರ ಪ್ರಮಾಣದಲ್ಲಿ ಅರ್ಥ ವ್ಯವಸ್ಥೆ ವೃದ್ಧಿಯಾಗಿತ್ತು. ರಾಷ್ಟ್ರೀಯ ಸಾಂಖೀÂಕ ಸಂಸ್ಥೆ ನೀಡಿದ್ದ ಮಾಹಿತಿಯಂತೆ 2022ರ ಎಪ್ರಿಲ್‌ನಿಂದ ಜೂನ್‌ ಅವಧಿಯಲ್ಲಿ ಅರ್ಥ ವ್ಯವಸ್ಥೆ ಬೆಳವಣಿಗೆ ಶೇ.13.1 ದಾಖಲಾಗಿತ್ತು. 2021  -22ನೇ ಸಾಲಿನ ಕೊನೆಯ ತ್ತೈಮಾಸಿಕದಲ್ಲಿ ಜಿಡಿಪಿ ಪ್ರಮಾಣ ಶೇ.4 ಆಗಿತ್ತು.

ಚೇತರಿಕೆಯ ಹಾದಿಯಲ್ಲಿ
ಕೊರೊನಾ ಹಾವಳಿ ತಗ್ಗಿದ ಬಳಿಕ ಸೇವಾ ಕ್ಷೇತ್ರದಲ್ಲಿ ನಿಧಾನಕ್ಕೆ ಚೇತರಿಕೆ ಕಂಡುಬಂದಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಜಿಡಿಪಿ ಮತ್ತು ಅರ್ಥ ವ್ಯವಸ್ಥೆಗೆ ಗಣನೀಯ ಕೊಡುಗೆ ಉಂಟಾಗಿದೆ. ಜತೆಗೆ ಖಾಸಗಿಯಾಗಿ ಜನರು ಮಾಡುವ ವೆಚ್ಚಯೂ ನೆರವಾಗಿದೆ.

ಜಿಡಿಪಿ ಮಾಹಿತಿ
ಯಿಂದ ದೇಶದ ಅರ್ಥ ವ್ಯವಸ್ಥೆ ದೃಢವಾಗಿದೆ ಎನ್ನುವುದು ಸಾಬೀತಾಗಿದೆ. ಜನರ ದೃಢವಾದ ಬೆಂಬಲ ಮತ್ತು ಅರ್ಥ ವ್ಯವಸ್ಥೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಯೇ ಇದಕ್ಕೆ ಕಾರಣ.

– ನರೇಂದ್ರ ಮೋದಿ, ಪ್ರಧಾನಮಂತ್ರಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.