ದ್ವಿತೀಯಾರ್ಧದಲ್ಲಿ ಆರ್ಥಿಕತೆ ಚೇತರಿಕೆ
ವಿತ್ತ ಸಚಿವೆ ನಿರ್ಮಲಾ ಆಶಾವಾದ
Team Udayavani, Sep 27, 2019, 6:00 AM IST
ಹೊಸದಿಲ್ಲಿ: ದೇಶದ ಆರ್ಥಿಕತೆಯು ಪ್ರಸ್ತುತ ಆರ್ಥಿಕ ವರ್ಷದ ದ್ವಿತೀಯಾರ್ಧದ ನಂತರ ಮೇಲೇರಲಿದೆ ಎಂಬ ಆಶಾವಾದವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದಾರೆ.
ಗುರುವಾರ, ಖಾಸಗಿ ಹಣಕಾಸು ಸಂಸ್ಥೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿದ ಅವರು, “”ದೇಶದಲ್ಲಿ ನೋಟುಗಳ ಚಲಾವಣೆಯ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಈಗಲೂ ಬ್ಯಾಂಕುಗಳ ಸಾಲಗಳಿಗೆ ಸಾಕಷ್ಟು ಬೇಡಿಕೆಯಿದೆ. ದ್ವಿತೀಯಾರ್ಧದಲ್ಲಿ ಉತ್ಪನ್ನಗಳ ಬಳಕೆ ಹೆಚ್ಚಾಗಲಿದ್ದು, ಬ್ಯಾಂಕುಗಳ ಸಾಲ ನೀಡುವಿಕೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ದೇಶದ ಆರ್ಥಿಕತೆಯ ಬೆಳವಣಿಗೆಯೂ ಆಗಲಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
“ದೇಶದಲ್ಲಿ ಕೆಲ ದಿನಗಳಿಂದ ಉಂಟಾಗಿದ್ದ ಆರ್ಥಿಕ ಹಿಂಜರಿತ ಈಗ ನಿಧಾನವಾಗಿ ಮಾಯವಾಗುತ್ತಿದೆ. ಸೆಪ್ಟಂಬರ್-ಅಕ್ಟೋಬರ್ನಲ್ಲಿ ಹಲವಾರು ಹಬ್ಬಗಳು ಇರುವುದರಿಂದ ದೇಶದ ಜನತೆ ಹಬ್ಬದ ಖರೀದಿಯಲ್ಲಿ ತೊಡಗಿದ್ದಾರೆ. ಬಳಕೆಯು ಹೆಚ್ಚಾಗಿ ಆರ್ಥಿಕತೆ ಮೇಲೆರಲು ಸಹಾಯವಾಗುತ್ತದೆ’ ಎಂದು ಅವರು ವಿವರಿಸಿದರು.
ಕಾರು ಮಾರಾಟ ಸದ್ಯದಲ್ಲೇ ಏರಿಕೆ: “ಕಾರು ಮಾರಾಟ ಕುಸಿತ ಕೇವಲ ತಾತ್ಕಾಲಿಕವಾಗಿದ್ದು, ಮುಂದಿನ ಒಂದೆರಡು ತ್ತೈ ಮಾಸಿಕಗಳ ಅವಧಿಯಲ್ಲಿ ಕಾರು ಮಾರಾಟ ವಹಿವಾಟು ಏರಿಕೆಯಾಗಲಿದೆ ಎಂದು ಖಾಸಗಿ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಹೇಳಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್