ಕೈಗಾರಿಕಾ ಉತ್ಪಾದನೆ ಕುಸಿತ : ವಿದ್ಯುತ್ ಪೂರೈಕೆಗೂ ಇಲ್ಲ ಬೇಡಿಕೆ


Team Udayavani, Nov 11, 2019, 6:49 PM IST

Electricity-Distribution-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ದೇಶೀ ಮಾರುಕಟ್ಟೆಯಲ್ಲಿ ಆರ್ಥಿಕ ಕುಸಿತದ ಲಕ್ಷಣಗಳು ದಟ್ಟವಾಗಿರುವಂತೆಯೇ ಕೈಗಾರಿಕಾ ಉತ್ಪಾದನಾ ರಂಗ ಸಹ ತೀವ್ರ ಸಂಕಷ್ಟವನ್ನು ಎದುರಿಸುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಕಳೆದ ಕೆಲವು ತಿಂಗಳುಗಳಿಂದ ದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿನ ಬೇಡಿಕೆ ತೀವ್ರ ಕುಸಿತವನ್ನು ಕಂಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ವಿದ್ಯುತ್ ಪೂರೈಕೆ ಬೇಡಿಕೆಯು 13.2 ಪ್ರತಿಶತ ಕುಸಿತ ಕಂಡಿದ್ದು ಇದು ಕಳೆದ 12 ವರ್ಷಗಳಲ್ಲೇ ಅಧಿಕ ಎನ್ನಲಾಗುತ್ತಿದೆ. ಇದು ಏಷ್ಯಾದ ಮೂರನೇ ಬೃಹತ್ ಆರ್ಥಿಕತೆಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದರ ಸೂಚನೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಕೈಗಾರಿಕೆ ಉದ್ಯಮಗಳು ಹೆಚ್ಚಾಗಿರುವ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ವಿದ್ಯುತ್ ಬಳಕೆ ಗಣನೀಯವಾಗಿ ಕುಸಿದಿರುವುದು ಈ ಕುಸಿತಕ್ಕೆ ಕಾರಣವೆನ್ನಲಾಗುತ್ತಿದೆ. ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ವಿದ್ಯುತ್ ಬಳಕೆ 22.4 ಪ್ರತಿಶತ ಕುಸಿತ ಕಂಡಿದ್ದರೆ ಗುಜರಾತ್ ನ ವಿದ್ಯುತ್ ಬಳಕೆಯಲ್ಲಿ 18.8 ಪ್ರತಿಶತ ಕುಸಿತ ದಾಖಲಾಗಿತ್ತು ಎಂಬ ಅಂಶವನ್ನು ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರದ ಅಂಕಿ ಅಂಶಗಳು ಸೂಚಿಸುತ್ತಿವೆ.

ದೇಶದ ಪೂರ್ವ ಮತ್ತು ಉತ್ತರದ ನಾಲ್ಕು ಚಿಕ್ಕ ರಾಜ್ಯಗಳನ್ನು ಹೊರತುಪಡಿಸಿ ಇನ್ನುಳಿದಂತೆ ದೇಶದೆಲ್ಲೆಡೆ ವಿದ್ಯುತ್ ಬೇಡಿಕೆಯಲ್ಲಿ ಕುಸಿತ ದಾಖಲಾಗಿದೆ ಎನ್ನುವುದು ಈ ಅಂಕಿ ಅಂಶಗಳಿಂದ ಸಾಬೀತಾಗಿದೆ.

ಕೈಗಾರಿಕಾ ರಂಗದಲ್ಲಿ ನಿರಂತರ ಉತ್ಪಾದನಾ ದಾಖಲಾತಿಗೆ ಅಬಾಧಿತ ವಿದ್ಯುತ್ ಪೂರೈಕೆ ಅತ್ಯಗತ್ಯವಾಗಿದೆ. ಆದರೆ ಇದೀಗ ಭಾರತದಲ್ಲಿ ವಿದ್ಯುತ್ ಪೂರೈಕೆ ಸಾಕಷ್ಟಿದ್ದರೂ ಉತ್ಪಾದಕ ರಂಗದಿಂದ ಇದಕ್ಕೆ ನಿರೀಕ್ಷಿತ ಬೇಡಿಕೆ ಲಭ್ಯವಾಗುತ್ತಿಲ್ಲ ಎಂಬುದೇ ಆತಂಕದ ವಿಚಾರವಾಗಿದೆ.

ಮಾರುಕಟ್ಟೆಯಲ್ಲಿ ಗ್ರಾಹಕ ಬೇಡಿಕೆಯನ್ನು ಉತ್ತೇಜಿಸಲು ಕೇಂದ್ರ ಸರಕಾರವು ಕಳೆದ ಕೆಲವು ತಿಂಗಳುಗಳಿಂದ ಹಲವಾರು ಉಪಕ್ರಮಗಳನ್ನು ಘೋಷಿಸುತ್ತಿದ್ದರೂ ಸೆಪ್ಟಂಬರ್ ತಿಂಗಳಿನಲ್ಲಿ ಉತ್ಪಾದಕ ರಂಗದ ಫಲಿತಾಂಶ ಕಳೆದ 14 ವರ್ಷಗಳಲ್ಲಿಯೇ ಕನಿಷ್ಠ ಮಟ್ಟವಾಗಿರುವ 5.2 ಪ್ರತಿಶವನ್ನು ದಾಖಿಲಿಸಿರುವುದು ಸರಕಾರದ ಚಿಂತೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.