ಭವಿಷ್ಯ ನಿಧಿ ಖಾತೆಗಳಿಗೆ ಉದ್ಯೋಗಿ, ಉದ್ಯೋಗದಾತರ ಕೊಡುಗೆಯಲ್ಲಿ 2% ಕಡಿತ
ಮುಂದಿನ ಮೂರು ತಿಂಗಳು ಉದ್ಯೋಗಿಗಳು, ಉದ್ಯೋಗದಾತರು EPF ಖಾತೆಗಳಿಗೆ 10% ಸಲ್ಲಿಸಿದರೆ ಸಾಕು
Team Udayavani, May 13, 2020, 6:00 PM IST
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ತಮ್ಮ ಭಾಷಣದಲ್ಲಿ ಘೋಷಿಸಿದ್ದ ‘ಆತ್ಮ ನಿರ್ಭರ ಭಾರತ’ ವಿಶೇಷ ಆರ್ಥಿಕ ಪ್ಯಾಕೇಜ್ ನ ಸ್ವರೂಪಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.
ವಿತ್ತ ಸಚಿವರ ಘೋಷಣೆಯಲ್ಲಿ ಪ್ರಮುಖವಾಗಿ ಗಮನ ಸೆಳೆದಿದ್ದು ಉದ್ಯೋಗಿಗಳು ಹಾಗೂ ಉದ್ಯೋಗದಾತರು ಭವಿಷ್ಯ ನಿಧಿ ಖಾತೆಗಳಿಗೆ ಸಲ್ಲಿಸುವಂತಹ ಕೊಡುಗೆ.
ಸದ್ಯಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಗೆ ಉದ್ಯೋಗಿಗಳ ಪಾಲು ಹಾಗೂ ಉದ್ಯೋಗದಾತರ ಪಾಲು ತಲಾ 12% ಸಲ್ಲಿಕೆಯಾಗುತ್ತಿದೆ.
ಆದರೆ ಇನ್ನು ಮುಂದಿನ ಮೂರು ತಿಂಗಳುಗಳ ಕಾಲ ಈ ಪಾಲನ್ನು 10% ಇಳಿಕೆ ಮಾಡಲಾಗಿದೆ. ಈ ಮೂಲಕ ಉದ್ಯೋಗಿಗಳಿಗೆ ಕೈಗೆ ಸಿಗುವ ವೇತನದ ಹಣದಲ್ಲಿ ಸ್ವಲ್ಪ ಹೆಚ್ಚಳವಾಗಲಿದ್ದು ಇದರಿಂದ ಹಣದ ಚಲಾವಣೆ ಹೆಚ್ಚಾಗಲಿದೆ ಎಂಬುದು ಸರಕಾರದ ಲೆಕ್ಕಾಚಾರವಾಗಿದೆ.
ಈ ಮೂಲಕ ಉದ್ಯಮಿಗಳಿಗೆ ಹಾಗೂ ಉದ್ಯೋಗಿಗಳಿಗೆ ಮುಂದಿನ ಮೂರು ತಿಂಗಳುಗಳ ಕಾಲ ಭವಿಷ್ಯ ನಿಧಿ ಖಾತೆಗೆ ಜಮಾ ಮಾಡುವ ಮೊತ್ತವನ್ನು ತಲಾ 2% ಕಡಿಮೆಗೊಳಿಸುವ ಮೂಲಕ ಮಾರುಕಟ್ಟೆಗೆ ಸರಿಸುಮಾರು 6750 ಕೋಟಿ ರೂಪಾಯಿಗಳ ಹಣದ ಹರಿವು ಉಂಟಾಗುವಲ್ಲಿ ಸಹಕಾರಿಯಾಗುವುದು ಎಂದು ವಿತ್ತಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಆದರೆ ಕೇಂದ್ರದ ನಿಯಂತ್ರಣದಲ್ಲಿರುವ ಸಾರ್ವಜನಿಕ ರಂಗದ ಉದ್ದಿಮೆಗಳು ಹಾಗೂ ರಾಜ್ಯ ಸರಕಾರದ ಅಡಿಯಲ್ಲಿ ಬರುವ ಸಾರ್ವಜನಿಕ ರಂಗದ ಉದ್ಯಮಗಳು ತಮ್ಮ ಉದ್ಯೋಗಿಗಳ ಪಿ.ಎಫ್. ಖಾತೆಗೆ ಯಥಾಪ್ರಕಾರ 12% ಪಾಲನ್ನು ಜಮಾ ಮಾಡಲಿವೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಪ್ಯಾಕೇಜ್ ನಡಿಯಲ್ಲಿ 24% ಭವಿಷ್ಯನಿಧಿ ಬೆಂಬಲಕ್ಕೊಳಪಡದ ಉದ್ಯೋಗಿಗಳಿಗೆಲ್ಲಾ ಈ ಸೌಲಭ್ಯ ಅನ್ವಯಿಸಲಿದೆ.
ಇದರಿಂದಾಗಿ ಇಪಿಎಫ್ಒನಡಿಯಲ್ಲಿ ಬರುವ 6.5 ಲಕ್ಷ ಉದ್ಯಮಗಳಿಗೆ ಹಾಗೂ 4.3 ಕೋಟಿ ಉದ್ಯೋಗಿಗಳಿಗೆ ಇದರ ಪ್ರಯೋಜನ ಲಭಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?