ಹೊಸ ಬಗೆಯ ಬ್ಯಾಂಕ್ ಖಾಸಗೀಕರಣ?
ವಿದೇಶಿ ಬ್ಯಾಂಕ್, ಕೈಗಾರಿಕಾ ಸಂಸ್ಥೆಗಳಿಗೂ ಮುಕ್ತ ಅವಕಾಶ ಸಾಧ್ಯತೆ
Team Udayavani, Nov 21, 2020, 7:04 AM IST
ಹೊಸದಿಲ್ಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರಕಾರಿ ಹಸ್ತಕ್ಷೇಪ ತಗ್ಗಿಸಿ, ಖಾಸಗೀಕರಣಗೊಳಿಸುವತ್ತ ಕೇಂದ್ರ ಸರಕಾರ ಈಗಲೇ ಕಾರ್ಯೋನ್ಮುಖವಾಗಿದೆ. ಮುಂದಿನ ದಿನಗಳಲ್ಲಿ ಉದ್ದಿಮೆ ಕ್ಷೇತ್ರ ಮತ್ತು ವಿದೇಶಿ ಬ್ಯಾಂಕ್ಗಳನ್ನು ಈ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತೆ ಮಾಡಲು ಕೆಲವೊಂದು ನಿಯಮಗಳನ್ನು ಸರಳಗೊಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ.
ಹೀಗಾಗಿ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ನ ಷೇರುಗಳ ಮಾರಾಟ ಪ್ರಕ್ರಿಯೆಗೆ ಶುರು ಮಾಡಿದಾಗ ವಿದೇಶಿ ಬ್ಯಾಂಕ್ಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಆಹ್ವಾನ ನೀಡುವ ಬಗ್ಗೆ ವಿತ್ತ ಸಚಿವಾಲಯ ಚಿಂತನೆ ನಡೆಸುತ್ತಿದೆ.
ಹಣಕಾಸೇತರ ವಹಿವಾಟುಗಳಲ್ಲಿ ಶೇ.60ಕ್ಕಿಂತ ಕಡಿಮೆ ವಹಿವಾಟು ಹೊಂದಿರುವ ಕೈಗಾರಿಕಾ ಸಂಸ್ಥೆಗಳಿಗೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ಪ್ರವೇಶಕ್ಕೆ ಅವಕಾಶ ನೀಡಲು ಈಗ ಸಾಧ್ಯವಾಗುತ್ತಿಲ್ಲ. ಶೇ.10ರಷ್ಟು ಪಾಲು ಬಂಡವಾಳ ಹೊಂದಲು ಮಾತ್ರ ಅವಕಾಶ ನೀಡಲಾಗಿದೆ.
ಈ ಅಂಶ ಇನ್ನೂ ಚರ್ಚೆಯ ಹಂತದಲ್ಲಿಯೇ ಇದೆ. ಒಂದು ವೇಳೆ ಇಂಥ ನಿರ್ಧಾರ ಜಾರಿಗೊಂಡರೂ ಗರಿಷ್ಠ ಪ್ರಮಾಣದ ಎಚ್ಚರಿಕೆಯ ನಿಯಮ ಜಾರಿಗೊಳಿಸಲಾ ಗುತ್ತದೆ. ಬ್ಯಾಂಕಿಂಗ್ ಕ್ಷೇತ್ರವನ್ನು ಮತ್ತಷ್ಟು ಮುಕ್ತವಾಗಿಸುವ ಯೋಚನೆ ಇದೆ. ಆದರೆ ಜಾಗತಿಕ ಮಟ್ಟದಲ್ಲಿ ಛಾಪು ಮೂಡಿಸಿರುವ ಬ್ಯಾಂಕ್, ಕೈಗಾರಿಕಾ ಸಂಸ್ಥೆಗಳಿಗೆ ಷೇರು ಖರೀದಿಯ ಆಹ್ವಾನ ನೀಡುವದಕ್ಕಿಂತ ಮುನ್ನ ದೇಶದ ಅರ್ಥ ವ್ಯವಸ್ಥೆಗೆ ಧಕ್ಕೆ ಬರದಂತೆ ನಿಯಮಗಳನ್ನು ಜಾರಿ ಗೊಳಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು “ಇ.ಟಿ.ನೌ’ ಸುದ್ದಿವಾಹಿನಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ