ಇ-ಫೈಲಿಂಗ್ ಪೋರ್ಟಲ್ ತಾಂತ್ರಿಕ ದೋಷ : ಇನ್ಫೋಸಿಸ್ ಸಿಇಒ ಪರೇಖ್ ಗೆ ಹಣಕಾಸು ಇಲಾಖೆ ಸಮನ್ಸ್


Team Udayavani, Aug 22, 2021, 6:51 PM IST

vdtry

ನವದೆಹಲಿ: ಹೊಸ ಇ-ಫೈಲಿಂಗ್ ಪೋರ್ಟಲ್ ಪ್ರಾರಂಭವಾಗಿ ಎರಡೂವರೆ ತಿಂಗಳು ಕಳೆದ ನಂತರವೂ ವೆಬ್ ಸೈಟ್ ನ ಕಾರ್ಯನಿರ್ವಹಣೆಯಲ್ಲಿ ತಾಂತ್ರಿಕ ದೋಷಗಳು ಮುಂದುವರೆದಿರುವ ಹಿನ್ನೆಲೆ ಇನ್ಫೋಸಿಸ್ ವಿರುದ್ಧ ಕೇಂದ್ರ ಹಣಕಾಸು ಇಲಾಖೆ ಸಮನ್ಸ್ ನೀಡಿದೆ.

ಇನ್ಫೋಸಿಸ್ ಹೊಸ ಪೋರ್ಟಲ್ ವಿನ್ಯಾಸಗೊಳಿಸಿದ್ದು, ಇದು ಜೂನ್ 7 ರಿಂದ ಸೇವೆ ಆರಂಭಿಸಿದೆ. ಆದರೆ ಪ್ರಾರಂಭದ ದಿನಗಳಿಂದ ಹಲವಾರು ತಾಂತ್ರಿಕ ಸಮಸ್ಯೆಗಳಿರುವುದು ಕಂಡು ಬಂದಿದೆ. ಈ ವಿಚಾರವಾಗಿ ಬಳಕೆದಾರರು ಆಗಾಗ್ಗೆ ಸೈಟ್ನ ಸ್ಕ್ರೀನ್ಶಾಟ್ಗಳನ್ನು ಟ್ವೀಟ್ ಮಾಡುವುದಲ್ಲದೆ ಹಣಕಾಸು ಸಚಿವರನ್ನು ಟ್ಯಾಗ್ ಮಾಡಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರುವ ಹಣಕಾಸು ಇಲಾಖೆ, ವೆಬ್ ಸೈಟ್ ನಲ್ಲಿನ ತಾಂತ್ರಿಕ ದೋಷಗಳನ್ನು ಇನ್ನೂ ಏಕೆ ಸರಿಪಡಿಸಲಾಗಿಲ್ಲ ಎಂಬುದರ ಬಗ್ಗೆ ಸೋಮವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿವರಣೆ ನೀಡುವಂತೆ ಇನ್ಫೋಸಿಸ್ ಸಿಇಒ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಪರೇಖ್ ಗೆ ಸಮನ್ಸ್ ನೀಡಲಾಗಿದೆ.

ಈ ಬಗ್ಗೆ ಹಣಕಾಸು ಸಚಿವಾಲಯ ಭಾನುವಾರು ಟ್ವೀಟ್ ಮಾಡಿದ್ದು, ಆಗಸ್ಟ್ 21 ರಂದು ವೆಬ್ ಸೈಟ್ ಕಾರ್ಯನಿರ್ವಹಣೆ ಸ್ಥಗಿತದ ನಂತರ ಪರೇಖ್ ಅವರಿಗೆ ಸಮನ್ಸ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಹಳೆಯ ವೆಬ್ ಸೈಟ್ ಸ್ಥಗಿತಗೊಂಡ ನಂತರ ಜೂನ್ 7, 2021 ರಂದು ಇ- ಫೈಲಿಂಗ್ ವೆಬ್ ಸೈಟ್ ಔಪಚಾರಿಕವಾಗಿ  ಚಾಲನೆಗೊಂಡಿತ್ತು. ತೆರಿಗೆದಾರರಿಗೆ ಅನುಕೂಲ, ಆಧುನಿಕ ಹಾಗೂ ತಡೆರಹಿತ ಸೇವೆಯಂತಹ ಅನುಭವವನ್ನು ಹೊಸ ಇ- ಫಿಲ್ಲಿಂಗ್ ಪೋರ್ಟಲ್ ನೀಡಬೇಕಿತ್ತು. ಆದರೆ, ಆ ವೆಬ್ ಸೈಟ್ ಚಾಲನೆಗೊಂಡಾಗಿನಿಂದಲೂ ಅನೇಕ ತೊಂದರೆಗಳನ್ನು ತೆರಿಗೆದಾರರು ಎದುರಿಸುತ್ತಿದ್ದಾರೆ.

ವೆಬ್ ಸೈಟ್ ತುಂಬಾ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರೊಫೈಲ್ ಅಪ್ ಡೇಟಿಂಗ್, ಪಾಸ್ ವರ್ಡ್ಸ್ ಬದಲಾವಣೆಗೂ ತುಂಬಾ ಸಮಯ ತೆಗೆದುಕೊಳ್ಳಲಿದೆ ಎಂದು ಬಳಕೆದಾರರು ದೂರಿದ್ದರು. ಅದರಲ್ಲಿ ಟಿಡಿಎಸ್ ರಿಟರ್ನ್ಸ್ ಫೈಲ್ ಮಾಡಲು ಆಗುತ್ತಿಲ್ಲ, ‘ಪಾರ್ಗಟ್ ಪಾಸ್ ವರ್ಡ್ ‘ ಆಪ್ಸನ್ ಕೆಲಸ ಮಾಡುತ್ತಿಲ್ಲ ಎಂದು ಕೆಲವು ಬಳಕೆದಾರರು ಹೇಳಿಕೊಂಡಿದ್ದರು.

ರಿಟರ್ನ್ಸ್ ಫೈಲಿಂಗ್ ಗೆ ಕೊನೆಯ ದಿನವನ್ನು ಸೆಪ್ಟೆಂಬರ್ 30 ನೇ ತಾರೀಖಿನವರೆಗೂ ಸರ್ಕಾರ ವಿಸ್ತರಿಸಿದ್ದರೂ ವೆಬ್ ಸೈಟ್ ಇತ್ತೀಚಿಗೆ  ವಿಳಂಬ ಶುಲ್ಕವನ್ನು ಪ್ರಾರಂಭಿಸಿತ್ತು.  ಪೋರ್ಟಲ್ ನಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಹಣಕಾಸು ಸಚಿವರು ಜೂನ್ ತಿಂಗಳಲ್ಲಿ ಇನ್ಫೋಸಿಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಈ ವಿಚಾರದ ಬಗ್ಗೆ ಗಮನ ಹರಿಸಲು ಏಳು ಸದಸ್ಯರನ್ನೊಳಗೊಂಡ ಕಾರ್ಯಪಡೆ ರಚನೆಗೆ ಐಸಿಎಐಗೆ ಹಣಕಾಸು ಸಚಿವಾಲಯ ಹೇಳಿತ್ತು.

ಹೊಸ ವೆಬ್ ಸೈಟ್ ನಲ್ಲಿನ ತಾಂತ್ರಿಕ ತೊಂದರೆ ಸರಿಯಾಗುವವರೆಗೂ ಹಳೆಯ ವೆಬ್ ಸೈಟ್ ಲಭ್ಯವಾಗುವಂತೆ ಮಾಡಬೇಕೆಂದು ಸಲಹೆ ನೀಡಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಆದಾಗ್ಯೂ, ಅಪ್ ಡೇಟ್  ಐಟಿ ರಿಟರ್ನ್ಸ್ ಫಾರಂನಲ್ಲಿರುವ ಅನೇಕ ಹೊಸ ಅಂಶಗಳು ಹಳೆಯ ವೆಬ್ ಸೈಟ್ ನಲ್ಲಿ ಇಲ್ಲ. ಇನ್ಫೋಸಿಸ್ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಹೊಸ- ಇ- ಫೈಲಿಂಗ್ ಪೋರ್ಟಲ್ ತಾಂತ್ರಿಕ ದೋಷ ಪರಿಹಾರದ ಬಗ್ಗೆ ಮಾಹಿತಿ ಪಡೆಯುತ್ತಿರುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.