ಗಮನಿಸಿ: ಎಲ್ ಪಿಜಿ ದರ, ಇನ್ಸೂರೆನ್ಸ್ ಪಾಲಿಸಿ….ಡಿಸೆಂಬರ್ 1ರಿಂದ ನಾಲ್ಕು ಮಹತ್ವದ ಬದಲಾವಣೆ

ಡಿ.1ರಿಂದ ವಾರದ ಎಲ್ಲಾ ದಿನಗಳಲ್ಲಿಯೂ ಆರ್ ಟಿಜಿಎಸ್ ಸೇವೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಲಭ್ಯವಿರಲಿದೆ.

Team Udayavani, Nov 30, 2020, 11:54 AM IST

ಗಮನಿಸಿ: ಎಲ್ ಪಿಜಿ ದರ, ಇನ್ಸೂರೆನ್ಸ್ ಪಾಲಿಸಿ….ಡಿಸೆಂಬರ್ 1ರಿಂದ ನಾಲ್ಕು ಮಹತ್ವದ ಬದಲಾವಣೆ

ನವದೆಹಲಿ:ಕೋವಿಡ್ 19 ಸೋಂಕಿನ ಪರಿಣಾಮ ಹಲವಾರು ಬದಲಾವಣೆಯಾಗುತ್ತಲೇ ಇದ್ದು, ಇದೀಗ ಡಿಸೆಂಬರ್ 1ರಿಂದ ಹಲವು ಪ್ರಮುಖ ಬದಲಾಣೆಯಾಗುವ ಸಾಧ್ಯತೆ ಇದ್ದು ಇದರಿಂದಾಗಿ ಜನಸಾಮಾನ್ಯರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ವರದಿ ತಿಳಿಸಿದೆ. ಆ ಕೆಲವು ಪ್ರಮುಖ ಬದಲಾವಣೆಯ ಕಿರು ಪಟ್ಟಿ ಇಲ್ಲಿದೆ…

1)ಎಲ್ ಪಿಜಿ ದರದಲ್ಲಿ ಬದಲಾವಣೆ ಸಾಧ್ಯತೆ:

ಭಾರತದಲ್ಲಿ ರಾಜ್ಯ ಸ್ವಾಮಿತ್ವದ ತೈಲ ಕಂಪನಿಗಳು ಪ್ರತಿ ತಿಂಗಳು ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸುತ್ತಲೇ ಇರುತ್ತದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಅಡುಗೆ ಅನಿಲ(ಎಲ್ ಪಿಪಿ)ದ ಬೆಲೆಯಲ್ಲಿ ಬದಲಾವಣೆಯಾಗುವ ನಿರೀಕ್ಷೆ ಇದೆ.

ಮೂಲಗಳ ಪ್ರಕಾರ, ಡಿಸೆಂಬರ್ ನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಕೋವಿಡ್ 19 ನಿಟ್ಟಿನಲ್ಲಿ ದೇಶೀಯ ಎಲ್ ಪಿಜಿ ಬೆಲೆಯಲ್ಲಿ ಏರಿಕೆಯಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ.

2)ಶೇ.50ರಷ್ಟು ಇನ್ಸೂರೆನ್ಸ್ ಪ್ರೀಮಿಯಂ ಕಂತು ಪಾವತಿಸುವ ಅವಕಾಶ!

ಜೀವ ವಿಮೆ ಪಾಲಿಸಿದಾರರು ಶೇ.50ರಷ್ಟು ಪ್ರೀಮಿಯಂ ಹಣ ಪಾವತಿಸುವ ಅವಕಾಶ ಪಡೆಯುವ ಸಾಧ್ಯತೆ ಇದೆ. ಕೋವಿಡ್ ಹಿನ್ನೆಲೆಯಲ್ಲಿ ಇನ್ಸೂರೆನ್ಸ್ ಹೋಲ್ಡರ್ ತಮ್ಮ ಪ್ರೀಮಿಯಂ ಕಂತಿನ ಅರ್ಧದಷ್ಟು ಹಣ ಪಾವತಿಸುವ ಅವಕಾಶ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.

3) ಡಿಸೆಂಬರ್ ನಿಂದ ನೂತನ ರೈಲು ಸಂಚಾರ

ಡಿಸೆಂಬರ್ 1ರಿಂದ ಜೀಲಂ ಎಕ್ಸ್ ಪ್ರೆಸ್ ಮತ್ತು ಪಂಜಾಬ್ ಮೇಲ್ ರೈಲುಗಳ ಸಂಚಾರ ಆರಂಭ. ಈ ರೈಲು ನಿಗದಿತ ಸ್ಥಳಗಳಲ್ಲಿ ಓಡಾಟ ನಡೆಸಲಿದೆ. ಪುಣೆ-ಜಮ್ಮು ಟಾವಿ ಪುಣೆ ಜೀಲಂ ವಿಶೇಷ ರೈಲು ಮತ್ತು ಮುಂಬೈ ಫೀರೋಜ್ ಪುರ್ ಪಂಜಾಬ್ ಮೇಲ್ ಸ್ಪೆಷಲ್ ರೈಲುಗಳು ಪ್ರತಿದಿನ ಸಂಚರಿಸಲಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ರೈಲು ಸಂಚಾರವನ್ನು ಕೆಲವು ತಿಂಗಳುಗಳ ಕಾಲ ರದ್ದುಗೊಳಿಸಲಾಗಿದ್ದು, ಇದೀಗ ಮತ್ತೆ ಪುನರಾರಂಭಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

4)ಆರ್ ಟಿಜಿಎಸ್ ನಲ್ಲಿ ಬದಲಾವಣೆ:

ದೊಡ್ಡ ಮೊತ್ತದ ವಹಿವಾಟಿಗೆ ಬಳಸುವ ರಿಯಲ್ ಟೈಮ್ ಗ್ರಾಸ್ ಸೆಟಲ್ ಮೆಂಟ್ ಸಿಸ್ಟಮ್(ಆರ್ ಟಿಜಿಎಸ್) ವ್ಯವಹಾರದ ಸಮಯವನ್ನು ಡಿಸೆಂಬರ್ 1ರಿಂದ ಹೆಚ್ಚಳ ಮಾಡಲಾಗುವುದು ಎಂದು 2020ರ ಅಕ್ಟೋಬರ್ ನಲ್ಲಿ ಆರ್ ಬಿಐ ಘೋಷಿಸಿತ್ತು. ಡಿ.1ರಿಂದ ವಾರದ ಎಲ್ಲಾ ದಿನಗಳಲ್ಲಿಯೂ ಆರ್ ಟಿಜಿಎಸ್ ಸೇವೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಲಭ್ಯವಿರಲಿದೆ. ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರವನ್ನು ಹೊರತುಪಡಿಸಿ ಉಳಿದ ಬ್ಯಾಂಕಿಂಗ್ ವ್ಯವಹಾರದ ದಿನಗಳಲ್ಲಿ ಆರ್ ಟಿಜಿಎಸ್ ವ್ಯವಸ್ಥೆ ಬೆಳಗ್ಗೆ7ರಿಂದ ಸಂಜೆ 6ರವರೆಗೆ ಗ್ರಾಹಕರಿಗೆ ಲಭ್ಯ ಎಂದು ಹೇಳಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.